September 6, 2026
Mumbai News Kannada
ಸುದ್ದಿ

ಬೊಯಿಸರ್ ಪಶ್ಚಿಮದ ಶ್ರೀ ಗಣೇಶ ಅಯ್ಯಪ್ಪ ಮಂದಿರದಲ್ಲಿ ಪೂಜಾ ಕಾರ್ಯಕ್ರಮ ಸಂಪನ್ನ.





     ಸುದ್ದಿ ವಿವರ: ಪಿ.ಆರ್.ರವಿಶಂಕರ್

                ಬೊಯಿಸರ್ ಪಶ್ಚಿಮದಲ್ಲಿನ ಸಿಡ್ಕೋ ವಲಯದಲ್ಲಿನ  ಶ್ರೀ ಗಣೇಶ ಅಯ್ಯಪ್ಪ ಮಂದಿರದಲ್ಲಿ ಇದೇ ಡಿಸೆಂಬರ್ ತಾ.18 ನೆಯ ಬುಧವಾರದಂದು ಸಂಜೆ ಶ್ರೀ ಗಣೇಶ ಮತ್ತು ಶ್ರೀ ಅಯ್ಯಪ್ಪ ಸ್ವಾಮಿ ಪೂಜೆಯು ಅದ್ದೂರಿಯಾಗಿ ಜರಗಿತು.

       ಆರಂಭದಲ್ಲಿ   ಮೀರಾ ರೋಡ್ ನ ಪ್ರಸಿದ್ಧ ಲಕ್ಶ್ಮೀನಾರಾಯಣ ಭಜನಾ ಮಂಡಲಿ  ಹಾಗೂ ಅಯ್ಯಪ್ಪ ಭಕ್ತ ಮಂಡಳಿ ಮೀರಾರೊಡ್ ಇವಯರಿಂದ ದೇವರ ಭಜನಾ ಸಂಕೀರ್ತನೆ ಹಾಗೂ ಸ್ವಾಮಿ ಅಯ್ಯಪ್ಪ  ಭಕ್ತಿ ಭಜನಾ ಕಾರ್ಯಕ್ರಮವು ಜರಗಿತು.  ಅಯ್ಯಪ್ಪ ವೃತಧಾರಿಯಾದ ಸಂತೋಷ್ ಶೆಟ್ಟಿ ಸ್ವಾಮಿ ( ತುಂಗಾ  ಹಾಸ್ಪಿಟಲ್ಸ್) ಇವರು  ಈ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಮಹಾ ಮಂಗಳಾರತಿಯ ಬಳಿಕ ತೀರ್ಥಪ್ರಸಾದ ಹಾಗೂ ಹರಿವರಾಸನಮ್ ಕಾರ್ಯಕ್ರಮ ಜರಗಿತು. 

   ಸರ್ವ ಭಕ್ತಾಭಿಮಾನಿಗಳ ನಿತ್ಯಜೀವನದಲ್ಲಿನ ಉತ್ತಮ ಆರೋಗ್ಯ , ನೆಮ್ಮದಿ ಹಾಗೂ ಸುಭಿಕ್ಷತೆಯ ಪ್ರಾರ್ಥನೆಗಳೊಂದಿಗೆ ಪೂಜಾ ಕಾರ್ಯಕ್ರಮ ಸಂಪನ್ನಗೊಂಡಿತು.

ಮೀರಾ ರೋಡ್ ನ ಅಯ್ಯಪ್ಪ ಭಕ್ತಮಂಡಳಿಯ ಹಿರಿಯ ಶ್ರೀ ಜಯಶೀಲ ಗುರುಸ್ವಾಮಿಯವರ ಉಪಸ್ಥಿತಿಯಲ್ಲಿ ಜರಗಿದ ಈ ಕಾರ್ಯ ಕ್ರಮದಲ್ಲಿ ಸ್ವಾಮಿ ನಿತ್ಯಾನಂದ ಮಂದಿರದ ವಿಶ್ವಸ್ಥರು ಸತ್ಯಾ ಕೋಟ್ಯಾನ್, ಪಾಲ್ಘರ್ ತಾಲೂಕು ಹೋಟೆಲ್ ಅಸೋಸಿಯೇಶನ್ ಅಧ್ಯಕ್ಷ ರಘುರಾಮ್ ಎಮ್.ರೈ , ಮೀರಾ ಡಹಾಣೂ ಬಂಟ್ಸ್ ಸಂಸ್ಥೆಯ ಟ್ರಸ್ಟೀ ಕೆ.ಭುಜಂಗ ಶೆಟ್ಟಿ , ಸ್ಥಳೀಯ ಉದ್ಯಮಿಗಳು , ವಿವಿಧ ಸಂಸ್ಥೆಯ ಪದಾಧಿಕಾರಿಗಳು ,ತುಂಗಾ ಹಾಸ್ಪಿಟಲ್ಸ್ ಸಮೂಹದ ಕರ್ಮಚಾರಿ ಸದಸ್ಯರು ಹಾಗೂ ಸ್ಥಳೀಯ ಅಯ್ಯಪ್ಪ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಪೂಜೆಯ ಬಳಿಕ ಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆ ಜರಗಿತು.

ಚಿತ್ರ ಹಾಗೂ ಸುದ್ದಿ : ಪಿ.ಆರ್.ರವಿಶಂಕರ್

8483980035



Related posts

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ಮುರಿದು ಬಿದ್ದ ರಥದ ಮೇಲ್ಬಾಗ

Mumbai News Desk

ದ್ವಿತೀಯ ಪಿಯುಸಿ ಫಲಿತಾಂಶ : ವಾಣಿಜ್ಯ ವಿಭಾಗದಲ್ಲಿ ಕುಮಾರಿ ಖುಷಿ ಲಕ್ಷ್ಮಣ್ ಕುಕ್ಯಾನ್ ಗೆ 91% ಅಂಕ.

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (01/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ವಿಜಯಾ ಕಾಲೇಜು ಮೂಲ್ಕಿ ಗ್ಲೋಬಲ್ ಹಳೆ ವಿದ್ಯಾರ್ಥಿಗಳ ಅಸೋಸಿಯೇಶನ್, ಸಾಧಕರಿಗೆ ಸನ್ಮಾನ,

Mumbai News Desk

ಶಾಲಾ ಹಂತದಲ್ಲೇ ಈಜು ಕಲಿಕೆ – ಮೂಲತ್ವ ವಿಶ್ವ ಪ್ರಶಸ್ತಿ ಸ್ವೀಕರಿಸಿದ ಮುಳುಗು ತಜ್ಞ ಈಶ್ವರ ಮಲ್ಪೆ ಸಲಹೆ

Mumbai News Desk

ಸಾಗರ ವಿದ್ಯಾ ಮಂದಿರ ಪಡುಬಿದ್ರಿ : ಕರ್ನಾಟಕ ರಾಜ್ಯೋತ್ಸವ ಆಚರಣೆ

Mumbai News Desk