July 23, 2026
Mumbai News Kannada
ಪ್ರಕಟಣೆ

ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್. ಡಿ.27 ರಂದು 14 ನೆಯ ವಾರ್ಷಿಕ ಪ್ರತಿಷ್ಟಾಪನೋತ್ಸವ.







ಬೊಯಿಸರ್ :   ಇದೇ ಡಿಸೆಂಬರ್ ತಾ. 27 ನೆಯ ಶುಕ್ರವಾರದಂದು ಪಾಲ್ಘರ್ ಜಿಲ್ಲೆಯ ಬೊಯಿಸರ್ ನಲ್ಲಿಯ  ಸಂತಶ್ರೇಷ್ಟ ಗುರು ನಿತ್ಯಾನಂದ ಸ್ವಾಮಿ ಮಂದಿರದಲ್ಲಿ  14 ನೆಯ ವರ್ಷದ ಪ್ರತಿಷ್ಟಾಪನಾ ಉತ್ಸವವು ಜರಗಲಿದೆ.

ಪ್ರಾತಃ ಕಾಲದ 6 ಗಂಟೆಗೆ ಸಂಕಲ್ಪ ಪೂಜೆ ಹಾಗೂ ಗಣಹೋಮದೊಂದಿಗೆ ಕಾರ್ಯಕ್ರಮ ಆರಂಭವಾಗುವುದು. 8 ಗಂಟೆಗೆ  ನಿತ್ಯಾನಂದ ಬಾಬಾ ಪಂಚಾಮೃತ ಅಭಿಷೇಕ ಮತ್ತು ಪ್ರಾತಃ ಆರತಿಯು ಸರ್ವ ಭಕ್ತಾಭಿಮಾನಿಗಳ ಭಾಗವಹಿಸುವಿಕೆಯಲ್ಲಿ ಜರಗಲಿದೆ.

ಬೆಳಿಗ್ಗೆ 10 ರಿಂದ ಶ್ರೀ ಸತ್ಯನಾರಾಯಣ ಮಹಾಪೂಜೆ ಹಾಗೂ ಸದ್ಗುರು ನಿತ್ಯಾನಂದ ಭಜನಾ ಮಂಡಳಿಯವರಿಂದ ಭಕ್ತಿಗೀತೆ ಹಾಗೂ ಭಜನಾ ಕಾರ್ಯಕ್ರಮವಿರುತ್ತದೆ. 12 ಗಂಟೆಗೆ ಮದ್ಯಾಹ್ನದ ಆರತಿಯ ಬಳಿಕ ಅನ್ನಸಂತರ್ಪಣೆ ಜರಗಲಿದೆ.

ಸಂಜೆ 6 ಗಂಟೆಗೆ ನಿತ್ಯಾನಂದ ಬಾಬಾ ಇವರ ಪಲ್ಲಕ್ಕಿಯಲ್ಲಿ ಭವ್ಯ ಮೆರವಣಿಗೆ ಇದ್ದು ಸಂಜೆ 8 ಗಂಟೆಯ ಮಂಗಳಾರತಿಯೊಂದಿಗೆ ಕಾರ್ಯಕ್ರಮ ಪೂರ್ಣಗೊಳ್ಳಲಿದೆ.

              ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿರುವ  ಪೂರ್ಣ ದಿನದ ಈ  ಪ್ರತಿಷ್ಟಾಪನೋತ್ಸವಕ್ಕೆ ಭಕ್ತಾಭಿಮಾನಿಗಳೆಲ್ಲರೂ ಸಹ ಕುಟುಂಬ ಬಂದು ಭಾಗವಹಿಸಬೇಕಾಗಿ ಶ್ರೀಮತಿ ಸುಹಾಸಿನಿ ದಾಮೋದರ್ ನಾಯ್ಕ್ ಹಾಗೂ ವಿಶ್ವಸ್ಥ ಮಂಡಳಿಯವರು ಸಮಸ್ಥ ಭಕ್ತಮಂಡಳಿಯ ಪರವಾಗಿ ಪ್ರಕಟಣೆಯ ಮೂಲಕ ವಿನಂತಿಸಿಕೊಂಡಿದ್ದಾರೆ.

ಸುದ್ದಿ ವಿವರ :ಪಿ.ಆರ್.ರವಿಶಂಕರ್

    8483980035



Related posts

ಶ್ರೀ ಅಯ್ಯಪ್ಪ ಸೇವಾ ಸಮಿತಿ ಕಿಸನ್ ನಗರ, ಥಾಣೆ : ಫೆಬ್ರವರಿ 14 ರಂದು 19ನೇ ವರ್ಷದ ಶ್ರೀ ಶನೀಶ್ವರ ಮಹಾಪೂಜೆ

Mumbai News Desk

ಫೆ 29 ರಿಂದ ಮಾ 2 ರ ವರಗೆ ಡೊಂಬಿವಲಿ ಶ್ರೀ ಜೈ ಭವಾನಿ ಶನೀಶ್ವರ ಮಂದಿರದ ಅಷ್ಟಬಂಧ ಪುನರ್‌ ಪ್ರತಿಷ್ಠಾ ಮಹೋತ್ಸವ

Mumbai News Desk

  ನ 14 ರಂದು ಡೊಂಬಿವಲಿ  ಶ್ರೀ ಜಗದಂಬ  ಮಂದಿರದಲ್ಲಿ ದೀಪೋತ್ಸವ

Mumbai News Desk

ವರ್ಲಿ    ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್, ನ. 16 ರಂದು ಮಾಲೆ ಧಾರಣೆ , ಶಿಬಿರದಲ್ಲಿ ಅನ್ನದಾನ, ಪೂಜಾ ಕಾರ್ಯಗಳು ಪ್ರಾರಂಭ 

Mumbai News Desk

ಉಡುಪಿ : ನೇಜಾರು ಶ್ರೀ ಭಗವತೀ ತೀಯಾ ಯುವ ಘಟಕದಿಂದ ಮೇ 24 ರಂದು ಭವ್ಯ ‘ಯುವ ಸಮ್ಮಿಲನ’ ಕಾರ್ಯಕ್ರಮ

Mumbai News Desk

ಜುಲೈ 27ರಂದು ಶ್ರೀ ರಜಕ ಸಂಘ ಮುಂಬಯಿಯ 86ನೇ ವಾರ್ಷಿಕ ಮಹಾ ಸಭೆ

Mumbai News Desk