30.9 C
Mumbai
June 8, 2026
Mumbai News Kannada
ಸುದ್ದಿ

ಸುರತ್ಕಲ್: ಸಿಲಿಂಡರ್ ಸ್ಫೋಟ ಪ್ರಕರಣ ತೀವ್ರವಾಗಿ ಗಾಯಗೊಂಡ ಮಹಿಳೆಯರಿಬ್ಬರ ಸಾವು





ಸುರತ್ಕಲ್ ನ ತಡಂಬೈಲ್ ವೆಂಕಟರಮಣ ಕಾಲೋನಿಯಲ್ಲಿ ಡಿಸೆಂಬರ್ 18ರಂದು ಮಧ್ಯಾಹ್ನ ಅಡುಗೆ ಮನೆಯಲ್ಲಿದ್ದ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹತ್ತಿಕೊಂಡ ಪರಿಣಾಮ ಗಾಯಗೊಂಡಿದ್ದ ವಸಂತಿ ಹಾಗೂ ಪುಷ್ಪ ಅವರು ಚಿಕಿತ್ಸೆ ಪಲ್ಲಿಕಾರಿಯಾಗಿದೆ ಸಾವನ್ನಪ್ಪಿದ್ದಾರೆ.
ಇಬ್ಬರಿಗೂ ಕಳೆದ 9 ದಿನಗಳಿಂದ ಖಾಸಗಿ ಆಸ್ಪತ್ರೆಯ ತೀವ್ರ ನಿಗ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪುಷ್ಪ ಶೆಟ್ಟಿ ಅವರು ಡಿಸೆಂಬರ್ 26ರಂದು ಸಾವನ್ನಪ್ಪಿದ್ದರೆ, ವಸಂತಿ ಶೆಟ್ಟಿ ಯವರು ಇಂದು ಇಹಲೋಕ ತ್ಯಜಿಸಿದರು.

ಗ್ಯಾಸ್ ಸೋರಿಕೆಯಾಗಿರುವುದು ಗಮನಕ್ಕೆ ಬಾರದೆ ವಸಂತಿ ಅವರು ಅಡುಗೆ ಕೋಣೆಯಲ್ಲಿನ ಸ್ಟವ್ ಗೆ ಬೆಂಕಿ ಹಚ್ಚಿದ್ದರಿಂದ ದೊಡ್ಡ ಮಟ್ಟದ ಸ್ಪೋಟವಾಗಿ ಬೆಂಕಿ ಹತ್ತಿಕೊಂಡಿತು.ವಸಂತಿ ಅವರನ್ನು ರಕ್ಷಿಸಲು ಹೋದ ಪುಷ್ಪ ಅವರಿಗೂ ತೀವ್ರ ತರಹದ ಸುಟ್ಟ ಗಾಯವಾಗಿತ್ತು.
ಕೂಡಲೇ ಸ್ಥಳೀಯರು ಧಾವಿಸಿ ಬಂದು ಇಬ್ಬರನ್ನೂ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಸಾವನಪ್ಪಿದ್ದಾರೆ. ಮುಂಬಯಿ ನ್ಯೂಸ್ ನ ಮಂಗಳೂರು ಪ್ರತಿನಿಧಿ ಧನಂಜಯ ಶೆಟ್ಟಿ ಅವರ ತಾಯಿ ಪುಷ್ಪ ಶೆಟ್ಟಿ ಅವರ ದುರ್ದೈವದ ಮರಣಕ್ಕೆ ಮುಂಬಯಿ ನ್ಯೂಸ್ ನ ನಿರ್ದೇಶಕ ಕುಮಾರ ಬಂಗೇರ ಮತ್ತು ಸಿಬ್ಬಂದಿ ವರ್ಗ ಸಂತಾಪ ವ್ಯಕ್ತ ಪಡಿಸಿದ್ದಾರೆ.



Related posts

ಭಾರತ್ ಬ್ಯಾಂಕಿನ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಬಿಲ್ಲವ ಸಮಾಜದ ಮುಖಂಡರಿಂದ ಅಭಿನಂದನೆ

Mumbai News Desk

ರಹೀಂ ಹತ್ಯೆ ಘಟನೆ ನೆಪದಲ್ಲಿ ಹಿಂದೂ ನಾಯಕರ ಧ್ವನಿ ಅಡಗಿಸುವ ಷಡ್ಯಂತ್ರ, ರಾಜ್ಯ ಪೊಲೀಸ್ ಮಹಾನಿರ್ದೇಶ ರಿಗೆ ಮನವಿ

Mumbai News Desk

ಕರ್ನಾಟಕ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಹರಿಪ್ರಸಾದ್ ನಂದಳಿಕೆ ಅವರಿಗೆ   ಪ್ರಶಸ್ತಿ.

Mumbai News Desk

ಮಹಾರಾಷ್ಟ್ರ: ಎಚ್ ಎಸ್ ಸಿ ಫಲಿತಾಂಶ : ನಿಧಿಶಾ ಡಿ. ಪೂಜಾರಿ ಗೆ ಶೇ.91.67ಅಂಕ

Mumbai News Desk

ಬೊಯಿಸರ್  ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಗುರುಪೂರ್ಣಿಮೆ

Mumbai News Desk

ಪತ್ರಕರ್ತ ರೋನ್ಸ್ ಬಂಟ್ವಾಳ್ ಅವರಿಗೆ ಪಿತೃ ವಿಯೋಗ.

Mumbai News Desk