32 C
Mumbai
April 23, 2026
Mumbai News Kannada
ಮುಂಬಯಿ

ಮುಂಬೈ : ಘಾಟ್ಕೋಪರ್ ನಲ್ಲಿ ಪಾದಚಾರಿಗಳ ಮೇಲೆ ಟೆಂಪೋ ಡಿಕ್ಕಿ 1 ಸಾವು, 5 ಮಂದಿಗೆ ಗಾಯ.





ಘಾಟ್ ಕೋಪರ್ ಪಶ್ಚಿಮ ಚಿರಾಗ್ ನಗರದಲ್ಲಿ ನಿನ್ನೆ (ಡಿ. 27) ತಡ ಸಂಜೆ ವೇಗವಾಗಿ ಬಂದ ಟೆಂಪೋ ಪಾದಾಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ 35 ವರ್ಷದ ಮಹಿಳೆ ಸಾವನ್ನಪ್ಪಿದ್ದು, ಆಕೆಯ 65 ವರ್ಷದ ತಾಯಿ ಮತ್ತು ಇತರ ನಾಲ್ವರು ಗಾಯಗೊಂಡಿದ್ದಾರೆ.
ಮೃತ ಮಹಿಳೆಯನ್ನು ಪ್ರೀತಿ ರಿತೇಶ್ ಪಟೇಲ್ ಎಂದು ಗುರುತಿಸಲಾಗಿದ್ದು ವಾರ್ಶಿವಾಡಿಯ ಭಾಗೀರಥಿ ಚಾಲ್ ನಿವಾಸಿಯಾಗಿದ್ದು, ಗಾಯಗೊಂಡ ಐವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ನಂತರ ಟೆಂಪೋ ಚಾಲಕ 25 ವರ್ಷದ ಉತ್ತಮ್ ಬಬನ್ ಖಾರತ್ ನನ್ನು ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಕಳುಹಿಸಿದ್ದಾರೆ. ಪೊಲೀಸರ ಪ್ರಕಾರ ಶುಕ್ರವಾರ ಸಂಜೆ 6:55ರ ಸುಮಾರಿಗೆ ಚಿರಾಗ್ ನಗರದ ಮೀನು ಮಾರುಕಟ್ಟೆ ರಸ್ತೆಯಲ್ಲಿರುವ ಅಜಾದ ಮಸಾಲಾ ಅಂಗಡಿಯ ಮುಂದೆ ಈ ಘಟನೆ ಸಂಭವಿಸಿದೆ, ಕಿರಿದಾದ ರಸ್ತೆಯಲ್ಲಿ ಜನರು ತರಕಾರಿ ಖರೀದಿಸುತ್ತಿದ್ದಾಗ ಮಾರುಕಟ್ಟೆಗೆ ಕೆಲವು ಉತ್ಪನ್ನಗಳನ್ನು ತಲುಪಿಸಿದ ಖಾರತ್ ಚಾಲನೆ ಮಾಡುತಿದ್ದ ಟೆಂಪೋ ನಿಯಂತ್ರಣ ಕಳೆದುಕೊಂಡು ಆರು ಪಾದಚಾರಿಗಳ ಮೇಲೆ ಡಿಕ್ಕಿ ಹೊಡೆದಿದೆ.
ಖಾರತ್ ವಾಹನ ಚಲಿಸುವಾಗ ಮೂರ್ಛೆ ಹೊಂದಿದ್ದು ಸ್ಟಿರಿಂಗ್ ನಿಯಂತ್ರಣ ತಪ್ಪಿದಂತಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ತಿಳಿಸಿದ್ದಾರೆ.
ಡಿಸೇಂಬರ್ 10ರಂದು ಕುರ್ಲಾ ಪಶ್ಚಿಮದಲ್ಲಿ ಬೆಸ್ಟ್ ಬಸ್ ಚಾಲಕನ ನಿಯಂತ್ರಣ ಕಳಕೊಂಡು ಹಾರಾಟ ನಡೆಸಿ, 8 ಜನರು ಸಾವನಪ್ಪಿ, 49 ಜನರು ಗಂಭೀರ ಗಾಯಗೊಂಡ ಘಟನೆ ಇನ್ನೂ ಮಾಸದಿರುವ ಮುನ್ನವೇ, ಘಾಟ್ ಕೋಪರ್ ನ ಟೆಂಪೋ ಅಪಘಾತ ಜನರನ್ನು ಗಾಬರಿಗೊಳಿಸಿದೆ.



Related posts

ಬಿಲ್ಲವರ ಅಸೋಸಿಯೇಶನ್ ಕಲ್ಯಾಣ್ ಸ್ಥಳೀಯ ಕಛೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಭಕ್ತಿ ವಿಜೃಂಭಣೆಯಿಂದ ಆಚರಣೆ

Mumbai News Desk

ಕಲ್ಯಾಣ ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ಸಂಭ್ರಮದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ

Mumbai News Desk

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತು, ಮಹಾರಾಷ್ಟ್ರ ಘಟಕ, ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥಾ, ( ರಿ.) ಮುಂಬೈ ಇದರ ವಾರ್ಷಿಕೋತ್ಸವದ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ.

Mumbai News Desk

ಮುಂಬಯಿಯ ಚಾರ್ಕೋಪ್ ಕನ್ನಡಿಗರ ಬಳಗದಲ್ಲಿ ರಂಗೋಲಿ ಸ್ಪರ್ಧೆ

Mumbai News Desk

ಮೀರಾ ರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಭಕ್ತಿ ಸಡಗರದ  ಶ್ರೀ  ಸಾರ್ವಜನಿಕ ಸತ್ಯ ನಾರಾಯಣ ಮಹಾಪೂಜೆ. ಸಂಪನ್ನ

Mumbai News Desk

ತೋನ್ಸೆ ಶ್ರೀ ಬ್ರಹ್ಮ ಬೈದರ್ಕಳ ಪಂಚ ಧೂಮಾವತಿ ಗರೋಡಿ ಸೇವಾ ಟ್ರಸ್ಟ್ ಮುಂಬಯಿ (ರಿ).ಇದರ ವಿಹಾರಕೂಟದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk