30.9 C
Mumbai
June 8, 2026
Mumbai News Kannada
ಸುದ್ದಿ

ಕರ್ನಾಟಕದ ಜನರಿಗೆ ಹೊಸ ವರ್ಷಕ್ಕೆ ಶಾಕ್ ನೀಡಿದ ಸರ್ಕಾರ – ಬಸ್ ಪ್ರಯಾಣ ದರ ಶೇಕಡ 15ರಷ್ಟು ಏರಿಕೆ





.

ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಬಸ್ ಪ್ರಯಾಣ ದರಗಳನ್ನು ಶೇಕಡ 15ರಷ್ಟು ಏರಿಸಲು ಅನುಮೋದನೆ ನೀಡಿದೆ.
ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇಕಡ 15ರಷ್ಟು ಏರಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಆ ಮೂಲಕ ಕರ್ನಾಟಕದ ಜನರಿಗೆ ಹೊಸ ವರ್ಷಕ್ಕೆ ಸರ್ಕಾರ ಬಿಗ್ ಶಾಕ್ ನೀಡಿದೆ.
ಈಗಾಗಲೇ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಆಗಸ್ಟ್ ನಲ್ಲಿ ನಾಲ್ಕು ಸಾರಿಗೆ ನಿಗಮಗಳು ಪ್ರಸ್ತಾವನೆ ಸಲ್ಲಿಸಿದ್ದವು. ಅದರ ಬೆನ್ನಲ್ಲೇ ಇಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಸಚಿವ ಸಂಪುಟ ಟಿಕೆಟ್ ದರ ಏರಿಕೆ ಮಾಡುತ್ತಿದ್ದಂತೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ದರ ಹೆಚ್ಚಳ ಮಾಡಬಾರದು, ಮಹಿಳೆಯರಿಗೆ ಉಚಿತ ಅಂದರೆ ನಮಗೆ ಉಚಿತ ಮಾಡಿ, ಅವರಿಗೊಂದು ನ್ಯಾಯ ನಮಗೊಂದು ನ್ಯಾಯ ಮಾಡುವುದು ಸರಿಯೇ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಬಿಎಂಟಿಸಿ, ಕೆಎಸ್ಆರ್ಟಿಸಿ, ಕೆಡಬ್ಲ್ಯೂಕೆಆರ್ಟಿಸಿ ಮತ್ತು ಕೆಕೆಆರ್‌ಟಿಸಿ ಸೇರಿದಂತೆ 4 ಸಾರಿಗೆ ನಿಗಮಗಳು ಈ ಹಿಂದೆ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು.

.



Related posts

ಪುತ್ತಿಗೆ ಶ್ರೀಪಾದಂಗಳವರಿಂದ ಡಾ| ರಾಮದಾಸ ಉಪಾಧ್ಯಾಯರಿಗೆ ಗೌರವಾರ್ಪಣೆ,

Mumbai News Desk

ಮಂಗಳೂರು : ಮೂಲತ್ವ ಪೌಂಡೇಶನ್ ಚಾರಿಟೇಬಲ್ ಟ್ರಸ್ಟ್,ಪೃಥ್ವಿ ಸೇವಾ ಟ್ರಸ್ಟ್, ವಿಶ್ವ ಬೆಳಕು ಸೌಹಾರ್ದ ಸಹಕಾರಿ ಸಂಘದ ಜಂಟಿ ಆಶ್ರಯದಲ್ಲಿ ಬ್ರಹತ್ ರಕ್ತದಾನ ಶಿಬಿರ

Mumbai News Desk

ಮುಲುಂಡ್ ಕ್ಷೇತ್ರದ ‌ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ರಾಕೇಶ್ ಶೆಟ್ಟಿ  ಕಣಕ್ಕೆ

Mumbai News Desk

​ತಿರುವನಂತಪುರದಲ್ಲಿ ಜ್ಞಾನದೀಪ ‘ಗುರುದರ್ಶನ’ ಕೃತಿ ಬಿಡುಗಡೆ: ಗಡಿನಾಡಲ್ಲಿ ಕನ್ನಡ ಸಾಹಿತ್ಯದ ಬೆಳಕು!

Mumbai News Desk

ಸಾಗರ ವಿದ್ಯಾ ಮಂದಿರ ಪಡುಬಿದ್ರಿ : ಕರ್ನಾಟಕ ರಾಜ್ಯೋತ್ಸವ ಆಚರಣೆ

Mumbai News Desk

ಜಾಗತಿಕ ಮತ್ತು ರಾಷ್ಟ್ರೀಯ ವಿದ್ಯಮಾನಗಳೊಂದಿಗೆ ಕರ್ನಾಟಕ ಹಾಗೂ ಮಹಾರಾಷ್ಟ್ರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (27/05)ಪ್ರಮುಖ ಅಪ್‌ಡೇಟ್‌ಗಳು

Mumbai News Desk