32 C
Mumbai
April 24, 2026
Mumbai News Kannada
ಮುಂಬಯಿ

ಬಿಲ್ಲವರ ಅಸೋಸಿಯೇಷನಿನ ಭಾಯಂದರ್ ಸ್ಥಳೀಯ ಕಚೇರಿ. ಹೊಸ ವರ್ಷದ ಗುರುಪೂಜೆ.





.

.

ಮುಂಬಯಿ, ಜ. 4: ಬಿಲ್ಲವರ ಅಸೋಸಿಯೇಷನಿನ ಭಾಯಿಂದರ್ ಸ್ಥಳೀಯ ಕಚೇರಿಯಲ್ಲಿ ನೂತನ ಕಾರ್ಯಕಾರೀ ಸಮಿತಿಯ ಮುಂದಾಳತ್ವದಲ್ಲಿ ಹೊಸ ವರುಷದ ಮೊದಲ ಗುರುವಾರದ ಗುರುಪೂಜೆಯು ವಿಜ್ರಂಭಣೆಯಿಂದ ಜರಗಿತು. ಸುಮಾರು 55 ಗುರು ಭಕ್ತರು ಗುರುಪೂಜೆ ನೀಡಿ ಸಹಕರಿಸಿದ್ದರು.ಆರಂಭದಲ್ಲಿ ಸದಸ್ಯರಿಂದ ಭಜನೆ ನಡೆದು ಫೋರ್ಟ್ ವೆಸ್ಟರ್ನ್ ಇಂಡಿಯಾ ಶನಿ ಮಹಾತ್ಮಾ ಪೂಜಾ ಸಮಿತಿಯ ಪ್ರಧಾನ ಅರ್ಚಕ ಸತೀಶ್ ಕೋಟ್ಯಾನ್ ರವರಿಂದ ಗುರುಪೂಜೆ, ಮಹಾ ಆರತಿ ನಡೆಯಿತು. ಕಚೇರಿಯ ಅರ್ಚಕ ರಾಕೇಶ್ ಅಮೀನ್ ಸಹಕರಿಸಿದ್ದರು.


ಈ ಸಂದರ್ಭದಲ್ಲಿ ಸತೀಶ್ ಕೋಟ್ಯಾನ್ ರವರು ಗುರುಸಂದೇಶದ ಬಗ್ಗೆ ವಿವರಿಸಿ ಹಿತವಚನ ನೀಡಿದರು. ಕೊನೆಯಲ್ಲಿ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಿತು. ಅಪಾರ ಸಂಖ್ಯೆಯಲ್ಲಿ ಗುರುಭಕ್ತರು ಉಪಸ್ಥಿತರಿದ್ದರು.ಸ್ಥಳೀಯ ಕಚೇರಿಯ ಕಾರ್ಯಾದ್ಯಕ್ಷ ಶೇಕರ ರಾಮ ಪೂಜಾರಿ, ಗೌ.ಕಾರ್ಯದರ್ಶಿ ಜ್ಯೋತಿ ರತ್ನಾಕರ ಪೂಜಾರಿ ಹಾಗೂ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯ ಸಮಿತಿಯ ಅಭಿಮಾನಿಗಳು ಪೂಜಾಕಾರ್ಯ ಯಶಸ್ಸಿಗೆ ಸಹಕರಿಸಿದ್ದರು.

.



Related posts

ಕುಮಾರ ಕ್ಷತ್ರಿಯ ಸಂಘ ಮುಂಬಯಿ 60ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಮಹಾಪೂಜೆ ಮತ್ತು ವಾರ್ಷಿಕ ಮಹಾಸಭೆ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಭಾವೀಶ್ ಮನೋಹರ್ ಶೆಟ್ಟಿ ಗೆ ಶೇ 90.60 ಅಂಕ.

Mumbai News Desk

ಬಿ. ಎಸ್. ಕೆ. ಬಿ. ಎಸೋಸಿಯೇಶನ್, ಗೋಕುಲ, ಮಹಿಳಾ ದಿನಾಚರಣೆ

Mumbai News Desk

ಮುಲುಂಡಿನ ವಿದ್ಯಾ ಪ್ರಸಾರಕ ಮಂಡಳದ ಕನ್ನಡ ಮಾಧ್ಯಮದ ಶಾಲೆಯಲ್ಲಿ ಪಾಲಕ ಶಿಕ್ಷಕ ಸಂಘದ ಮಹಾಸಭೆ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ   ಭೂಮಿಕಾ ಭಂಡಾರಿ  ಗೆ ಶೇ 93 ಅಂಕ.

Mumbai News Desk

ಮುಂಬೈ : ಮುಲುಂಡ್‌ನಲ್ಲಿ ನಿರ್ಮಾಣ ಹಂತದ ಮುಂಬೈ ಮೆಟ್ರೋ ಕಂಬದ ಒಂದು ಭಾಗ ಕುಸಿದು; 1 ಸಾವು, 3 ಜನರಿಗೆ ಗಾಯ

Mumbai News Desk