September 6, 2026
Mumbai News Kannada
ಮುಂಬಯಿ

ಬಂಟರ ಸಂಘ ಮುಂಬೈ ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ವತಿಯಿಂದ ಉಚಿತ ವೈದ್ಯಕೀಯ ಶಿಬಿರ





.

.

ಸಂಸ್ಥೆಗಳಲ್ಲಿ ನಾವು ಎಂಬ ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಯಶಸ್ಸು ಲಭಿಸುತ್ತದೆ – ಪ್ರವೀಣ್ ಭೋಜ ಶೆಟ್ಟಿ

ಮುಂಬೈ ಜ 6.  ನಮ್ಮ ಬಂಟರ ಸಂಘದ ಪ್ರಾದೇಶಿಕ ಸಮಿತಿಗಳ ಮುಖೇನ ಉತ್ತಮವಾದ ಕೆಲಸವನ್ನು ಮಾಡುತ್ತಿದ್ದೇವೆ.  ಪ್ರಾದೇಶಿಕ ಸಮಿತಿಯವರು ಇವತ್ತು ಆಯೋಜಿಸಿರುವಂತಹ ಈ ಉಚಿತ ವೈದ್ಯಕೀಯ ಶಿಬಿರ ಪ್ರತಿ ಮೂರು ತಿಂಗಳಿಗೊಮ್ಮೆ ಆದರೂ ನಡೆಯಬೇಕು. ಮೂಲಕ ನಮ್ಮ ಜನರನ್ನು ಆರೋಗ್ಯದಿಂದ ಪಾರು ಮಾಡುವ ನಿಟ್ಟಿನಲ್ಲಿ ಸ್ವಲ್ಪವಾದರೂ ಸಹಾಯವಾದೀತು.  ಜನರಿಗೆ ಮನೆ ಮನೆಗೆ ವೈದ್ಯಕೀಯ ಸಹಾಯ ದೊರೆಯುವಲ್ಲಿ ಡಾ. ಆರ್ ಕೆ ಶೆಟ್ಟಿಯವರು,  ಮಹೇಶ್ ಶೆಟ್ಟಿ ಅವರು  ಮುತುರ್ವರ್ಜಿಯಿಂದ ಕೆಲಸ ಮಾಡುತ್ತಿದ್ದಾರೆ.ಅದಕ್ಕೆ ಪೂರಕವಾಗಿ ಈ ಪ್ರಾದೇಶಿಕ ಸಮಿತಿಯ ಮೂಲಕ ಸೂರಜ್ ಶೆಟ್ಟಿ, ಪ್ರಶಾಂತ್ ಶೆಟ್ಟಿ, ಸಂತೋಷ್ ಶೆಟ್ಟಿ ಮೊದಲಾದವರು ಶ್ರಮಿಸುತ್ತಿದ್ದಾರೆ. ಇವೆಲ್ಲವೂ ಒಗ್ಗಟ್ಟಿನಿಂದ ಮಾತ್ರ ಸಾಧ್ಯ. ಸಂಸ್ಥೆಯಲ್ಲಿ ನಾನು ಎನ್ನದೇ ನಾವು ಎಂದು ಕೈಜೋಡಿಸಿ ಕೆಲಸ ಮಾಡಬೇಕು. ಆಗ ಯಶಸ್ಸು ನಮ್ಮದಾಗುತ್ತದೆ ಎಂದು ಎಲ್ಲರೂ ಆರೋಗ್ಯವಂತರಾಗಿ ಬಾಳುವಂತಾಗಲಿ ಎಂದು ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ ಭೋಜ ಶೆಟ್ಟಿ ಅವರು ನುಡಿದರು.‌ಅವರು ಬಂಟರ ಸಂಘ,  ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ವೈದ್ಯಕೀಯ ಸಮಿತಿಯ ನೇತೃತ್ವದಲ್ಲಿ ನಡೆದ ಉಚಿತ ವೈದ್ಯಕೀಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಶರಾದ ಸೂರಜ್ ಶೆಟ್ಟಿ ಅವರು ಮಾತನಾಡುತ್ತಾ ಮನುಷ್ಯನಿಗೆ ಬದುಕಿನಲ್ಲಿ ಎಲ್ಲ ಸವಲತ್ತುಗಳಿಗಿಂತ ಆರೋಗ್ಯ ಸಂಪತ್ತು ಮುಖ್ಯವಾಗುತ್ತದೆ. ನಮ್ಮ ಸಮಿತಿಯ ಮೂಲಕ ಜನರಿಗೆ ಉಪಯೋಗವಾಗಲೆಂಬ ಸದಾಶಯದೊಂದಿಗೆ ಈ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸಿದ್ದೇವೆಮ್ ನಮ್ಮ ಈ ಯೋಜನೆಗೆ ಹೀರಾನಂದಾನಿ ಆಸ್ಪತ್ರೆಯ ಸಂಪೂರ್ಣ ಸಹಕಾರವೂ ದೊರೆತಿದೆ ಎನ್ನಲು ಸಂತೋಷವಾಗುತ್ತದೆ ಎಂದು ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಬಂಟರ ಸಂಘದಲ್ಲಿ ಸಮನ್ವಯಕರಾಗಿರುವ ರವೀಂದ್ರನಾಥ ಭಂಡಾರಿ ಅವರು ಮಾತನಾಡುತ್ತಾ ಇಂದಿನ ಈ ಉಚಿತ ವೈದ್ಯಕೀಯ ಶಿಬಿರ ಮನಸ್ಸಿಗೆ ಹತ್ತಿರವಾಗಿರುವಂತದ್ದು. ಇದರಿಂದ ಎಷ್ಟೋ ಜನರಿಗೆ ಉಪಯೋಗವಾಗುತ್ತದೆ. ಪ್ರತಿ ಸಮಿತಿಯಲ್ಲೂ ಇಂತಹ ಜನಪರ ಕಾರ್ಯಗಳನ್ನು ಹಮ್ಮಿಕೊಳ್ಳಬೇಕು. ನಾವು ಒಬ್ಬರು ಸುಖದಿಂದ ಇದ್ದರೆ ಸಾಲದು ನಾವೆಲ್ಲರೂ ಆರೋಗ್ಯಪೂರ್ಣರಾಗಿ ಬಾಳಬೇಕು ಎಂದು ಸಂದೇಶವನ್ನು ಈ ಉಚಿತ ಶಿಬಿರ ಸಾರುತ್ತದೆ. ನನಗೆ ಈ ಸಂಸ್ಥೆಯ ಕಾರ್ಯಕ್ರಮಗಳು ಬಲು ಮೆಚ್ಚಿನವು. ಹಿಂದಿನ ಕೆಲವು ಕಾರ್ಯಕ್ರಮಗಳಿಗೆ ಬರಲು ಆಗಲಿಲ್ಲ ಎನ್ನುವ ಬೇಸರವಿದೆ. ಕೆಲವೊಮ್ಮೆ ಸಮಯದ ಅಭಾವವಿರುತ್ತದೆ. ಆದರೂ ನಿಮ್ಮೆಲ್ಲರ ಉತ್ತಮ ಕೆಲಸಗಳಿಗೆ ನನ್ನ ಸಂಪೂರ್ಣ ಪ್ರೋತ್ಸಾಹವಿದೆ ಎಂದರು. ಇದೇ ಸಂದರ್ಭದಲ್ಲಿ ಕರಾಟೆಯಲ್ಲಿ  ದೇಶ ವಿದೇಶಗಳಲ್ಲಿ ಗೆಲುವನ್ನು ಸಾಧಿಸಿದ ತನುಷ್ ಲಕ್ಷ್ಮಣ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. 

ವೇದಿಕೆಯಲ್ಲಿ ಉಪಾಧ್ಯಕ್ಷರಾದ ಯಶವಂತ ಶೆಟ್ಟಿ, ರಮೇಶ್ ರೈ ಕಯ್ಯಾರ್, ವೈದ್ಯಕೀಯ ಸಮಿತಿಯ ಕಾರ್ಯಾಧ್ಯಕ್ಷರಾದ ಪ್ರಶಾಂತ್ ಶೆಟ್ಟಿ, ಉಪಾಧ್ಯಕ್ಷರಾದ ಸಂತೋಷ್ ಶೆಟ್ಟಿ, ಲಕ್ಷ್ಮಣ್ ಶೆಟ್ಟಿ, ಸಂಚಾಲಕರಾದ ರವೀಂದ್ರ ಶೆಟ್ಟಿ, ಅಶೋಕ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶೋಭಾ ಅಮರನಾಥ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಡಾ. ಪೂರ್ಣಿಮಾ ಶೆಟ್ಟಿ ನಿರೂಪಿಸಿದರು,

ಜಯಲಕ್ಷ್ಮೀ ಶೆಟ್ಟಿ ಅವರು ಪ್ರಾರ್ಥನೆ ಹಾಡಿದರು. ಶೋಭಾ. ಎ. ಶೆಟ್ಟಿ ಧನ್ಯವಾದ ಸಮರ್ಪಿಸಿದರು.

     ಕಾರ್ಯಕ್ರಮ ದ  ಯಶಸ್ವಿಗೆ    ಪ್ರಾದೇಶಿಕ ಸಮಿತಿಯ ಎಲ್ಲಾ  ಪಧಾಧಿಕಾರಿ ,  ಮಹಿಳಾ ವಿಭಾಗ , ಯುವ ವಿಭಾಗದ ಸದಸ್ಯರು ಸಹಕರಿಸಿದರು,



Related posts

ಬಿಲ್ಲವರ ಎಸೋಸಿಯೇಷನ್ ಬೊರಿವಿಲಿ ದಹಿಸರ್ ಸ್ಥಳೀಯ ಕಚೇರಿ ಮಹಿಳಾ ಸದಸ್ಯರಿಂದ ಹಳದಿ ಕುಂಕುಮ ಕಾರ್ಯಕ್ರಮ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟ: ಡಾ. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ಸಭಾಭವನದ ಕಾಮಗಾರಿಯ ಕುರಿತು ವಿಶೇಷ ಸಭೆ

Mumbai News Desk

ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್ – ದಹಿಸರ್  ಸ್ಥಳೀಯ ಸಮಿತಿ, ಕಾರ್ಯಾಧ್ಯಕ್ಷರಾಗಿ ಆನಂದ ಕೆ. ಕುಲಾಲ್ , ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ  ರತ್ನಾ ಡಿ ಕುಲಾಲ್  ಆಯ್ಕೆ

Mumbai News Desk

ಬಂಟರ ಸಂಘ ಮುಂಬಯಿ ಮೀರಾ-ಭಾಯಂದರ್ ಪ್ರಾದೇಶಿಕ ಸಮಿತಿಯಿಂದ  “ಶ್ರೀ ಶನೀಶ್ವರ ಮಹಾತ್ಮ” ತಾಳಮದ್ದಳೆ.

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಮುಂಬಯಿ ವತಿಯಿಂದ ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಆಹ್ವಾನ

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬೈ ಜೋಗೇಶ್ವರಿ ಸ್ಥಳೀಯ ಕಚೇರಿ ವತಿಯಿಂದ ಶ್ರೀ ಶನೇಶ್ವರ ಗ್ರಂಥ ಪಾರಾಯಣ

Mumbai News Desk