30.5 C
Mumbai
June 8, 2026
Mumbai News Kannada
ಸುದ್ದಿ

ಬೆಂಗಳೂರು : ಇಬ್ಬರು ಮಕ್ಕಳಲ್ಲಿ ಎಚ್ಎಂಪಿವಿ ವೈರಸ್ ಪತ್ತೆ, ಆತಂಕ ಪಡುವ ಅಗತ್ಯವಿಲ್ಲ – ಆರೋಗ್ಯ ಇಲಾಖೆ





ಬೆಂಗಳೂರಿನಲ್ಲಿ ಇಬ್ಬರು ಶಿಶುಗಳಿಗೆ ಎಚ್ಎಂಪಿವಿ ವೈರಸ್ ಸೋಂಕು ತಗಲಿರುವುದು ದ್ರಢಪಟ್ಟಿದೆ, ಆದರೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಹೇಳಿದೆ. ಈ ವೈರಸ್ ಭಾರತದಲ್ಲಿ ಸಾಮಾನ್ಯವಾಗಿದ್ದು ಚೀನಾದಲ್ಲಿ ಪತ್ತೆಯಾಗಿರುವ ಮ್ಯೂಟೇಟೆಡ್ ವೈರಸ್ ನೊಂದಿಗೆ ಇದಕ್ಕೆ ಸಂಬಂಧ ಇದೆ ಎಂಬುದು ಇಂದು ಸ್ಪಷ್ಟವಾಗಿಲ್ಲ. ಹಾಗಾಗಿ ಚಿಂತಿಸುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಎಂಟು ತಿಂಗಳ ಹಾಗೂ ಮೂರು ತಿಂಗಳ ಮಗುವಿನಲ್ಲಿ ಎಚ್ಎಂಪಿವಿ ವೈರಸ್ ದೃಢಪಟ್ಟಿದ್ದು,
ಮೊದಲನೆಯ ಪ್ರಕರಣದಲ್ಲಿ 8 ತಿಂಗಳ ಮಗುವಿಗೆ ಜ್ವರ ಬಂದ ಕಾರಣ ಕೆಲವು ದಿನಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು, ರಕ್ತಪರೀಕ್ಷೆ ಮಾಡಿದಾಗ ಎಚ್ಎಂಪಿವಿ ವೈರಸ್ ಇರುವುದು ಪತ್ತೆಯಾಗಿದೆ . ಮತ್ತೊಂದು ಪ್ರಕರಣದಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾದ ಮೂರು ತಿಂಗಳ ಹೆಣ್ಣು ಶಿಶುವಿನಲ್ಲಿಯೂ ವೈರಸ್ ದೃಢಪಟ್ಟಿದೆ, ಆದರೆ ಶಿಶುವನ್ನು ಈಗಾಗಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಎಚ್ಎಂಪಿವಿ ವೈರಸ್ ಭಾರತದಲ್ಲೂ ಇದೆ, ಆದರೆ ಅದು ಮ್ಯೂಟೇಷನ್ ಆಗಿದೆ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಇಲ್ಲ. ನಮಗೆ ಚೀನಾದಲ್ಲಿ ಮ್ಯೂಟೇಟ್ ಆಗಿರುವ ವೈರಸ್ ಹೇಗಿದೆ ಎಂದು ತಿಳಿದಿಲ್ಲ, ಹೀಗಾಗಿ ಇಲ್ಲಿ ಪತ್ತೆ ಆಗಿರೋದು ಸಾಮಾನ್ಯ ಎಚ್ಎಂಪಿವಿ ವೈರಸೇ ಅಥವಾ ಚೀನಾದ ತಳಿಯೇ ಎಂಬ ಗೊಂದಲ ಇದೆ ಭಾರತದಲ್ಲಿ ಸಾಮಾನ್ಯ ಎಚ್ಎಂಪಿವಿ ವೈರಸ್ ಶೇ 0.78 ರಷ್ಟು ಕಾಣಿಸುತ್ತದೆ ಎಂದು ಆರೋಗ್ಯ ತಿಳಿಸಿದೆ.
ಸತ್ಯ ಸೋಂಕು ಪತ್ತೆಯಾಗಿರುವ ಮಗುವಿಗೆ ಮತ್ತು ಕುಟುಂಬದವರಿಗೆ ಟ್ರಾವೆಲ್ ಇತರ ಇಲ್ಲ ಈ ಹಿನ್ನೆಲೆಯ ಬಗ್ಗೆ ಆರೋಗ್ಯ ಇಲಾಖೆ ಕೂಡ ಪರಿಶೀಲನೆ ನಡೆಸುತ್ತಿದೆ ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಹರ್ಷಗುಪ್ತ ತಿಳಿಸಿದ್ದಾರೆ.

.

.



Related posts

ಸುರತ್ಕಲ್: ಸಿಲಿಂಡರ್ ಸ್ಫೋಟ ಪ್ರಕರಣ ತೀವ್ರವಾಗಿ ಗಾಯಗೊಂಡ ಮಹಿಳೆಯರಿಬ್ಬರ ಸಾವು

Mumbai News Desk

ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ರವರ ಜನ್ಮ ದಿನಾಚರಣೆಯನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಚರಿಸಲಾಯಿತು

Mumbai News Desk

ಪೊಲಿಪು ಶ್ರೀಧರ್ ಕಾಂಚನ್ ನಿಧನ

Mumbai News Desk

ಇಂದು ಭಾರತ್ ಬಂದ್ : ದೇಶಾದ್ಯಂತ ವ್ಯಾಪಕ ಪ್ರತಿಭಟನೆ! ಏನೇನಿರುತ್ತೆ, ಏನಿರಲ್ಲ?: ಇಲ್ಲಿದೆ ಸಂಪೂರ್ಣ ಮಾಹಿತಿ

Mumbai News Desk

2018 ರ ರೆಮೋ ಡಿಸೋಜಾ ಸುಲಿಗೆ ಪ್ರಕರಣದ ಗ್ಯಾಂಗ್ ಸ್ಟರ್ ರವಿ ಪೂಜಾರಿ ಬಂಧನ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿ ವೈದ್ಯಕೀಯ, ಮನೆ ನಿರ್ಮಾಣಕ್ಕೆ ಸಹಾಯ ಧನದ ಹಸ್ತಾoತರ.

Mumbai News Desk