32 C
Mumbai
April 24, 2026
Mumbai News Kannada
ಸುದ್ದಿ

ಬೆಂಗಳೂರು : ಇಬ್ಬರು ಮಕ್ಕಳಲ್ಲಿ ಎಚ್ಎಂಪಿವಿ ವೈರಸ್ ಪತ್ತೆ, ಆತಂಕ ಪಡುವ ಅಗತ್ಯವಿಲ್ಲ – ಆರೋಗ್ಯ ಇಲಾಖೆ





ಬೆಂಗಳೂರಿನಲ್ಲಿ ಇಬ್ಬರು ಶಿಶುಗಳಿಗೆ ಎಚ್ಎಂಪಿವಿ ವೈರಸ್ ಸೋಂಕು ತಗಲಿರುವುದು ದ್ರಢಪಟ್ಟಿದೆ, ಆದರೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಹೇಳಿದೆ. ಈ ವೈರಸ್ ಭಾರತದಲ್ಲಿ ಸಾಮಾನ್ಯವಾಗಿದ್ದು ಚೀನಾದಲ್ಲಿ ಪತ್ತೆಯಾಗಿರುವ ಮ್ಯೂಟೇಟೆಡ್ ವೈರಸ್ ನೊಂದಿಗೆ ಇದಕ್ಕೆ ಸಂಬಂಧ ಇದೆ ಎಂಬುದು ಇಂದು ಸ್ಪಷ್ಟವಾಗಿಲ್ಲ. ಹಾಗಾಗಿ ಚಿಂತಿಸುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಎಂಟು ತಿಂಗಳ ಹಾಗೂ ಮೂರು ತಿಂಗಳ ಮಗುವಿನಲ್ಲಿ ಎಚ್ಎಂಪಿವಿ ವೈರಸ್ ದೃಢಪಟ್ಟಿದ್ದು,
ಮೊದಲನೆಯ ಪ್ರಕರಣದಲ್ಲಿ 8 ತಿಂಗಳ ಮಗುವಿಗೆ ಜ್ವರ ಬಂದ ಕಾರಣ ಕೆಲವು ದಿನಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು, ರಕ್ತಪರೀಕ್ಷೆ ಮಾಡಿದಾಗ ಎಚ್ಎಂಪಿವಿ ವೈರಸ್ ಇರುವುದು ಪತ್ತೆಯಾಗಿದೆ . ಮತ್ತೊಂದು ಪ್ರಕರಣದಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾದ ಮೂರು ತಿಂಗಳ ಹೆಣ್ಣು ಶಿಶುವಿನಲ್ಲಿಯೂ ವೈರಸ್ ದೃಢಪಟ್ಟಿದೆ, ಆದರೆ ಶಿಶುವನ್ನು ಈಗಾಗಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಎಚ್ಎಂಪಿವಿ ವೈರಸ್ ಭಾರತದಲ್ಲೂ ಇದೆ, ಆದರೆ ಅದು ಮ್ಯೂಟೇಷನ್ ಆಗಿದೆ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಇಲ್ಲ. ನಮಗೆ ಚೀನಾದಲ್ಲಿ ಮ್ಯೂಟೇಟ್ ಆಗಿರುವ ವೈರಸ್ ಹೇಗಿದೆ ಎಂದು ತಿಳಿದಿಲ್ಲ, ಹೀಗಾಗಿ ಇಲ್ಲಿ ಪತ್ತೆ ಆಗಿರೋದು ಸಾಮಾನ್ಯ ಎಚ್ಎಂಪಿವಿ ವೈರಸೇ ಅಥವಾ ಚೀನಾದ ತಳಿಯೇ ಎಂಬ ಗೊಂದಲ ಇದೆ ಭಾರತದಲ್ಲಿ ಸಾಮಾನ್ಯ ಎಚ್ಎಂಪಿವಿ ವೈರಸ್ ಶೇ 0.78 ರಷ್ಟು ಕಾಣಿಸುತ್ತದೆ ಎಂದು ಆರೋಗ್ಯ ತಿಳಿಸಿದೆ.
ಸತ್ಯ ಸೋಂಕು ಪತ್ತೆಯಾಗಿರುವ ಮಗುವಿಗೆ ಮತ್ತು ಕುಟುಂಬದವರಿಗೆ ಟ್ರಾವೆಲ್ ಇತರ ಇಲ್ಲ ಈ ಹಿನ್ನೆಲೆಯ ಬಗ್ಗೆ ಆರೋಗ್ಯ ಇಲಾಖೆ ಕೂಡ ಪರಿಶೀಲನೆ ನಡೆಸುತ್ತಿದೆ ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಹರ್ಷಗುಪ್ತ ತಿಳಿಸಿದ್ದಾರೆ.

.

.



Related posts

ಮುಂಬಯಿ : ಕರ್ನಾಟಕ ಬ್ಯಾಂಕ್ ನ ಹಿರಿಯ ಸಿಬ್ಬಂದಿ ನಾರಾಯಣ ಮೊಗವೀರ ಅವರ ಬೀಳ್ಕೊಡುವ ಸಮಾರಂಭ

Mumbai News Desk

ಕಲಾಪೋಷಕ .ಉದ್ಯಮಿ ಕೆ.ಕೆ. ಶೆಟ್ಟಿ ಅಹ್ಮದ್ ನಗರರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ.

Mumbai News Desk

ಆನಂದ ಶೆಟ್ಟಿ ಎಕ್ಕಾರ್ ಬಂಟರ ಸಂಘ ಮುಂಬಯಿ ಇದರ ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾಗಿ ಅಯ್ಕೆ

Mumbai News Desk

ಧರ್ಮಪಾಲ್ ದೇವಾಡಿಗ ಮತ್ತು ಚಂದ್ರಶೇಖರ್ ಬೆಳ್ಚಡ ಇವರಿಂದ ಡಾ. ವೀರೇಂದ್ರ ಹೆಗ್ಗಡೆ ಭೇಟಿ: ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಬಗ್ಗೆ ಸಮಾಲೋಚನೆ

Mumbai News Desk

ಮೊಗವೀರ ಪ್ರೀಮಿಯರ್ ಲೀಗ್ (MPL 2026): ಹರಾಜು ಪ್ರಕ್ರಿಯೆ ಯಶಸ್ವಿ; ₹4 ಲಕ್ಷಕ್ಕೆ ಕುಂದಾಪುರ ಲೆಜೆಂಡ್ಸ್ ಮುಂಚೂಣಿಯಲ್ಲಿ

Mumbai News Desk

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ

Mumbai News Desk