July 23, 2026
Mumbai News Kannada
ಕ್ರೀಡೆ

ತುಳು ಸಂಘ ಬೊರಿವಲಿ, ಯುವ ವಿಭಾಗದಿಂದ ಗಣ್ಯರ ಉಪಸ್ಥಿತಿಯಲ್ಲಿ ಯಶಸ್ವೀ ಮ್ಯಾರಥಾನ್







.

.

ಮುಂಬಯಿ : ತುಳು ಸಂಘ ಬೊರಿವಲಿಯ ಯುವ ವಿಭಾಗವು ಮೊದಲ ಬಾರಿಗೆ ಜ. 5 ರಂದು ಮುಂಜಾನೆ ಬೊರಿವಲಿ ಪೂರ್ವ ಸಂಜಯ್ ಗಾಂಧಿ ರಾಷ್ಟ್ರೀಯ ಉದ್ಯಾನ, ಇಲ್ಲಿ ಮಿನಿ ಮ್ಯಾರಥಾನ್ ಆಯೋಜಿಸಿದ್ದು ನೂರಾರು ಹಿರಿ ಕಿರಿಯ ತುಳು ಕನ್ನಡಿಗರು ಪಾಲ್ಗೊಂಡಿದ್ದರು. ಮ್ಯಾರಥಾನ್ 2 ವರ್ಗ 10 ಕಿಮೀ ಮಿನಿ-ಮ್ಯಾರಥಾನ್ ಮತ್ತು 3 ಕಿಮೀ ಫನ್ ರನ್ ಆಯೋಜಿಸಲಾಗಿತ್ತು.
ಬಿ.ಸಿ.ಸಿ.ಐ. ಯ ಮಾಜಿ ಜೊತೆ ಕಾರ್ಯದರ್ಶಿ ಡಾ. ಪಿ. ವಿ. ಶೆಟ್ಟಿ, ತುಳು ಸಂಘ ಬೊರಿವಲಿಯ ಅಧ್ಯಕ್ಷ ಹರೀಶ್ ಮೈಂದನ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶೋಭಾ ಶೆಟ್ಟಿ, ಸಲಹಾ ಸಮಿತಿಯ ಪ್ರದೀಪ್ ಸಿ. ಶೆಟ್ಟಿ ಕೊಳಕೆಬೈಲು, ಸಂಘದ ಸ್ಥಾಪಕಾಧ್ಯಕ್ಷ ವಾಸು ಪುತ್ರನ್, ಪ್ರಧಾನ ಕಾರ್ಯದರ್ಶಿ ಕೃಷ್ಣರಾಜ್ ಸುವರ್ಣ, ಕೋಶಾಧಿಕಾರಿ ದಿವಾಕರ ಕರ್ಕೇರ, ಟಿ. ವಿ. ಪೂಜಾರಿ, ತಿಲ್ಲೋತ್ತಮ ವೈದ್ಯ, ಚಂದ್ರಹಾಸ ಬೆಳ್ಚಡ, ಅನಿಲ್ ಶೆಟ್ಟಿ, ವಿಜಯಲಕ್ಷ್ಮಿ ದೇವಾಡಿಗ, ಶಿವರಾಮ ಅಮೀನ್, ಅನಿಲ್ ಕುಮಾರ್ ಶೆಟ್ಟಿ ಮತ್ತು ಸಂಘದ ಇತರ ಪದಾಧಿಕಾರಿಗಳು, ಮಹಿಳಾ ವಿಭಾಗ ಹಾಗೂ ಯುವ ವಿಭಾಗದ ಸದಸ್ಯರುಗಳ ಸಹಕಾರದಿಂದ, ಯುವ ವಿಭಾಗದ ಕಾರ್ಯಾಧ್ಯಕ್ಷ ನ್ಯಾ. ರಾಘವ ಎಂ. ಇವರ ಮಾರ್ಗದರ್ಶನದಲ್ಲಿ ನಡೆದ ಈ ಮಿನಿ ಮ್ಯಾರಥಾನ್ ಗೆ ಸಂಜಯ್ ಗಾಂಧಿ ರಾಷ್ಟ್ರೀಯ ಉದ್ಯಾನ ದ ನಿರ್ದೇಶಕ ಮಲ್ಲಿಕಾರ್ಜುನ ಜಿ, ಮತ್ತು ಓಂ ಜ್ಯುವೆಲ್ಲರ್ಸ್ ನ ಮುಖೇಶ್ ಜಖಿಯಾ, ಚಾಲನೆಯಿತ್ತರು. ಸಂಘದ ಗೌರವ ಅಧ್ಯಕ್ಷ ವಿರಾರ್ ಶಂಕರ್ ಶೆಟ್ಟಿಯವರು ದೊಡ್ಡ ಮೊತ್ತದ ದೇಣಿಗೆಯಿತ್ತು ಈ ಕಾರ್ಯಕ್ರಮಕ್ಕೆ ಸಹಕರಿಸಿದ್ದಾರೆ.

ಡಾ. ಪಿ. ವಿ. ಶೆಟ್ಟಿ, ಮಲ್ಲಿಕಾರ್ಜುನ ಜಿ, ಮುಖೇಶ್ ಜಖಿಯಾ ಇವರು ಮ್ಯಾರಥಾನ್ ನಲ್ಲಿ ಬಾಗವಹಿಸಿದ ಎಲ್ಲರಿಗು ಶುಭ ಕೋರಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು. ಪ್ರಥಮ, ದ್ವೀತೀಯ ಹಾಗೂ ತೃತೀಯ ವಿಜೇತರಿಗೆ ಟ್ರೋಫಿಗಳು ಮತ್ತು ಪುರುಷ ಮತ್ತು ಮಹಿಳಾ ವಿಭಾಗದಲ್ಲಿ ವಿಜೇತರಿಗೆ ವಿಶೇಷ ಬಹುಮಾನ ಹಾಗೂ ಹಿರಿಯ ನಾಗರಿಕರಿಗೆ ಪ್ರತ್ಯೇಕ ಬಹುಮಾನ ನೀಡಲಾಯಿತು. ಉಪಹಾರದ ನಂತರ ಭಾಗವಹಿಸಿದ ಎಲ್ಲರಿಗೂ ಟಿ ಶರ್ಟ್‌, ಪ್ರಮಾಣ ಪತ್ರ ಟ್ರೋಫಿಗಳು ಮತ್ತು ವಿಶೇಷ ಬಹುಮಾನ ನೀಡಲಾಯಿತು. ನ್ಯಾ. ಅನ್ವಿತ ಐಲ್ ಸುವರ್ಣ ಕಾರ್ಯಕ್ರಮವನ್ನು ನಿರೂಪಿಸಿದರು.

ತುಳು ಸಂಘದ ಇತಿಹಾಸದಲ್ಲಿ ಯುವ ಜನಾಂಗಕ್ಕೆ ಸ್ಫೂರ್ತಿ ನೀಡಲು ಇಂತಹ ಕಾರ್ಯಕ್ರಮ ಪ್ರಥಮ ಬಾರಿ ನಮ್ಮ ಯುವ ವಿಭಾಗದಿಂದ ನಡೆದಿದೆ. ಸಂಘದ ವೆಭ್ ಸೈಟ್ ನ್ನು ಆದಷ್ಟು ಬೇಗನೆ ಲೋಕಾರ್ಪಣೆ ಮಾಡಲಿದ್ದೇವೆ. ಈ ರೀತಿ ಹೆಚ್ಚಿನ ಸಂಖ್ಯೆಯಲ್ಲಿ ಯುವ ಜನಾಂಗವನ್ನು ಸಂಘದಲ್ಲಿ ಕ್ರೀಯಾಶೀಲರನ್ನಾಗಿ ಮಾಡುವ ಪ್ರಯತ್ನ ನಮ್ಮದು. – ಹರೀಶ್ ಮೈಂದನ್, ಅಧ್ಯಕ್ಷರು ತುಳು ಸಂಘ ಬೊರಿವಲಿ.

ತುಳು ನಾಡಿನ ಯುವ ಜನಾಂಗಕ್ಕೆ ಸ್ಪೂರ್ತಿ ತುಂಬುವ ಇಂತಹ ಹೊಸ ಯೋಜನೆಗೆ ನನ್ನ ಸಹಾಯ ಹಾಗೂ ಪ್ರೋತ್ಸಾಹವಿದೆ. ತುಳು ಸಮಾಜ ಬಾಂಧವರು ಈ ರೀತಿ ಹಿರಿ ಕಿರಿಯರಿಗೆ ತುಂಬುವ ಕಾರ್ಯ ಮಾಡುತ್ತಿರಲಿ.
-ಡಾ. ಪಿ. ವಿ. ಶೆಟ್ಟಿ, ಬಿ.ಸಿ.ಸಿ.ಐ. ಯ ಮಾಜಿ ಜೊತೆ ಕಾರ್ಯದರ್ಶಿ ಹಾಗೂ ಬಂಟರ ಸಂಘ ಮುಂಬಯಿಯ ಮಾಜಿ ಅಧ್ಯಕ್ಷ



Related posts

ಭಾರತಕ್ಕೆ ಚೊಚ್ಚಲ ವಿಶ್ವಕಪ್ ಕಿರೀಟ! ವನಿತಾ ವಿಶ್ವಕಪ್ 2025 ಫೈನಲ್: ದಕ್ಷಿಣ ಆಫ್ರಿಕಾ ವಿರುದ್ಧ 52 ರನ್‌ಗಳ ಐತಿಹಾಸಿಕ ಜಯ

Mumbai News Desk

ಏಷ್ಯಾ ಕಪ್ 2025 : ಭಾರತ ತಂಡ ಪ್ರಕಟ: ಶುಭಮನ್ ಗಿಲ್ ಉಪನಾಯಕ, ಶ್ರೇಯಸ್ ಅಯ್ಯರ್‌ಗೆ ಸ್ಥಾನವಿಲ್ಲ

Mumbai News Desk

ಬಿ ಎಸ್ ಕೆ ಬಿ ಎಸ್ಸೋಸಿಯೇಷನ್ ಮುಂಬಯಿ; ಗೋಕುಲ ಶತಮಾನೋತ್ಸವ ಆಚರಣೆಯ ನಿಮಿತ್ತ ತುಳು ಕನ್ನಡಿಗ ಗೇಮ್ಸ್ 2025,

Mumbai News Desk

ಗುರು ನಾರಾಯಣ ರಾತ್ರಿ ಪ್ರೌಢ ಶಾಲಾ ವಾರ್ಷಿಕ ಕ್ರೀಡಾ ಮಹೋತ್ಸವ

Mumbai News Desk

ವಿಶ್ವ ಬ್ಯಾಡ್ಮಿಂಟನ್ ದಿನಾಚರಣೆ: ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್ ಪ್ರಥಮ ಬ್ಯಾಡ್ಮಿಂಟನ್ ಪಂದ್ಯಾಟ ಯಶಸ್ವಿ

Mumbai News Desk

ವೈಭವ್ ಸೂರ್ಯವಂಶಿ ಬಿರುಗಾಳಿ ಬ್ಯಾಟಿಂಗ್ ಗೆ ಇಂಗ್ಲೆಂಡ್ ನಿರುತ್ತರ; 6ನೇ ಬಾರಿ ಅಂಡರ್ 19 ವಿಶ್ವಕಪ್ ಎತ್ತಿ ಹಿಡಿದ ಭಾರತ

Mumbai News Desk