April 1, 2025
ಸುದ್ದಿ

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಹೊರ ರಾಜ್ಯದಲ್ಲೂ ಅಸಾಯಕರಿಗೆ ಸಹಾಯ ಹಸ್ತ

ಮುಂಬಯಿ : ಕರ್ನಾಟಕದ ಕರಾವಳಿಯ ಮೊಯಾ (ಬೋವಿ) ಸಮಾಜದ ಅಂತರಾಷ್ಟ್ರೀಯ ಮಟ್ಟದ ಏಕೈಕ ಸಂಘಟನೆ ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ಮಹಾರಾಷ್ಟ್ರ, ಮಾತ್ರವಲ್ಲದೆ ಕರ್ನಾಟಕ ಹಾಗೂ ಕೇರಳದ ಕರಾವಳಿ ಜಿಲ್ಲೆಗಳಲ್ಲಿ ಸಮಾಜಪರ ಸೇವಾ ನಿರತವಾಗಿದ್ದು ಇದೀಗ ಹೊಸ ವರ್ಷದ ಆರಂಭದಲ್ಲೇ ಚೆನ್ನೈಯಲ್ಲಿ ಅಧ್ಯಕ್ಷರಾದ ರವಿ ಉಚ್ಚಿಲ್ ಅವರ ತಂಡವು ಪಿ.ಅರ್. ಎ. ರಾಮಕೃಷ್ಣನ್ ಅವರ ತಂಡದೊಂದಿಗೆ ಜ. 2 ರಂದು ಕಾಕ್ಕುಂ ಕರಂಗಲ್ ಮಹಿಳಾ ವೃದ್ಧಾಶ್ರಮಕ್ಕೆ ಭೇಟಿ ನೀಡಿತು.
ಸಂಸ್ಥೆಯ ಚೆನ್ನೈ ತಂಡವು ಈ ಕೇಂದ್ರದ ನಿರ್ಗತಿಕ ಮಹಿಳೆಯರಿಗೆ ಬೆಂಬಲಿಸಲು ಅಗತ್ಯ ದ ವಸ್ತುಗಳನ್ನು ವಿತರಿಸಿದೆ. ಅಲ್ಲಿನ ಮಹಿಳೆಯರು ಈ ತಂಡಕ್ಕೆ ಆಶೀರ್ವಾದದ ನುಡಿಗಳನ್ನಾಡಿದರು.


ಜ. 4 ರಂದು ಥಾಣೆಯಲ್ಲಿರುವ ನವಜೀವನ ಹಿಂದುಳಿದ ಶಾಲೆಗೆ ಭೇಟಿ ನೀಡುವ ಮೂಲಕ ನಿರ್ಗತಿಕ ವಿದ್ಯಾರ್ಥಿಗಳ ಜೀವನೋಪಾಯಕ್ಕೆ ಅಗತ್ಯ ಆಹಾರ ಮತ್ತು ಬಟ್ಟೆಗಳನ್ನು ವಿತರಿಸಿದರು. ಮಕ್ಕಳು ಕೃತಜ್ಞತೆ ಅರ್ಪಿಸಿದರು. ಈ ಕಾರ್ಯದಲ್ಲಿ ಲಕ್ಷ್ಮೀನಾರಾಯಣ ಮಾತ್ರವಲ್ಲದೆ ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ಮುಖ್ಯ ಸಲಹೆಗಾರ ಈಶ್ವರ್ ಕೆ. ಐಲ್, ಸಮಿತಿಯ ಪ್ರಮುಖರಾದ ಪ್ರೀತಿ ಉಚ್ಚಿಲ್, ಚಂದ್ರಕಲಾ ಉಚ್ಚಿಲ್, ರವೀಂದ್ರ ಬತ್ತೇರಿ, ಸರೋಜ ವಿಟ್ಠಲ್ ಮತ್ತಿತರರು ಉಪಸ್ಥಿತರಿದ್ದು ಸಹಕರಿಸಿದರು.

ಮುಂಬಯಿಯ ಕೋರ್ ಕಮಿಟಿಯು, ದಾನಿಗಳು ನೀಡಿದ ಮೊತ್ತವನ್ನು ನಿರ್ಗತಿಕ ಹಾಗೂ ಅಸಾಯಕರಿಗಾಗಿ ಉಪಯೋಗಿಸಲು, ವಿಶೇಷವಾಗಿ ಅಗತ್ಯವಿರುವ ಮಕ್ಕಳ ಉನ್ನತ ಶಿಕ್ಷಣ ಕ್ಕಾಗಿ ಸಹಕರಿಸುವ ಅಗತ್ಯವಿದೆ ಎಂಬುದಾಗಿ ನಿರ್ಧರಿಸಿದೆ.

Related posts

ಕುಲಾಲ ಪ್ರತಿಷ್ಠಾನ (ರಿ) ಮಂಗಳೂರು ಆಶ್ರಯದಲ್ಲಿ ತುಳು ನಾಟಕ ಪ್ರದರ್ಶನ   ಸಾಧಕರಿಗೆ ಸನ್ಮಾನ

Mumbai News Desk

ನ್ಯೂ ಪನ್ವೇಲ್  ಶ್ರೀ ವೃಂದಾವನ ಬಾಬಾ ಅಯ್ಯಪ್ಪ ಭಕ್ತ ವೃಂದ19ನೇ ಶ್ರೀ ಅಯ್ಯಪ್ಪ ಮಹಾಪೂಜೆ

Mumbai News Desk

ಮಂಗಳೂರಿಗೊಂದು ಹೊಸ ರಂಗ ಮಂದಿರ – ಕಲಾಗ್ರಾಮದ ಉದ್ಘಾಟನಾ ಸಮಾರಂಭ

Mumbai News Desk

ಶ್ರೀ ಭಗವತೀ ಕ್ಷೇತ್ರ ಉಪ್ಪಳ, ಮುಂಬಯಿ ಸಮಿತಿ ರಚನೆ

Mumbai News Desk

ಯುಎಇ ಬಂಟ್ಸ್ ನ  “ಕ್ರೀಡಾ ಉತ್ಸವ -2025”

Mumbai News Desk

ಬಂಟರ ಸಂಘ ಬಂಟವಾಳ  ಯುವ ವಿಭಾಗದ    ಹಬ್ಬ ದೀಪಾವಳಿ ಸಂಭ್ರಮದ  ಬೊಲ್ಪುದ ಐಸಿರಿ-೨ . ಬಂಟರ   ಸಂಸ್ಕೃತಿಯನ್ನು ಬಿಂಬಿಸಿದೆ:  ಐಕಳ ಹರೀಶ್ ಶೆಟ್ಟಿ

Mumbai News Desk