July 23, 2026
Mumbai News Kannada
ಸುದ್ದಿ

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಹೊರ ರಾಜ್ಯದಲ್ಲೂ ಅಸಾಯಕರಿಗೆ ಸಹಾಯ ಹಸ್ತ

ಮುಂಬಯಿ : ಕರ್ನಾಟಕದ ಕರಾವಳಿಯ ಮೊಯಾ (ಬೋವಿ) ಸಮಾಜದ ಅಂತರಾಷ್ಟ್ರೀಯ ಮಟ್ಟದ ಏಕೈಕ ಸಂಘಟನೆ ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ಮಹಾರಾಷ್ಟ್ರ, ಮಾತ್ರವಲ್ಲದೆ ಕರ್ನಾಟಕ ಹಾಗೂ ಕೇರಳದ ಕರಾವಳಿ ಜಿಲ್ಲೆಗಳಲ್ಲಿ ಸಮಾಜಪರ ಸೇವಾ ನಿರತವಾಗಿದ್ದು ಇದೀಗ ಹೊಸ ವರ್ಷದ ಆರಂಭದಲ್ಲೇ ಚೆನ್ನೈಯಲ್ಲಿ ಅಧ್ಯಕ್ಷರಾದ ರವಿ ಉಚ್ಚಿಲ್ ಅವರ ತಂಡವು ಪಿ.ಅರ್. ಎ. ರಾಮಕೃಷ್ಣನ್ ಅವರ ತಂಡದೊಂದಿಗೆ ಜ. 2 ರಂದು ಕಾಕ್ಕುಂ ಕರಂಗಲ್ ಮಹಿಳಾ ವೃದ್ಧಾಶ್ರಮಕ್ಕೆ ಭೇಟಿ ನೀಡಿತು.
ಸಂಸ್ಥೆಯ ಚೆನ್ನೈ ತಂಡವು ಈ ಕೇಂದ್ರದ ನಿರ್ಗತಿಕ ಮಹಿಳೆಯರಿಗೆ ಬೆಂಬಲಿಸಲು ಅಗತ್ಯ ದ ವಸ್ತುಗಳನ್ನು ವಿತರಿಸಿದೆ. ಅಲ್ಲಿನ ಮಹಿಳೆಯರು ಈ ತಂಡಕ್ಕೆ ಆಶೀರ್ವಾದದ ನುಡಿಗಳನ್ನಾಡಿದರು.


ಜ. 4 ರಂದು ಥಾಣೆಯಲ್ಲಿರುವ ನವಜೀವನ ಹಿಂದುಳಿದ ಶಾಲೆಗೆ ಭೇಟಿ ನೀಡುವ ಮೂಲಕ ನಿರ್ಗತಿಕ ವಿದ್ಯಾರ್ಥಿಗಳ ಜೀವನೋಪಾಯಕ್ಕೆ ಅಗತ್ಯ ಆಹಾರ ಮತ್ತು ಬಟ್ಟೆಗಳನ್ನು ವಿತರಿಸಿದರು. ಮಕ್ಕಳು ಕೃತಜ್ಞತೆ ಅರ್ಪಿಸಿದರು. ಈ ಕಾರ್ಯದಲ್ಲಿ ಲಕ್ಷ್ಮೀನಾರಾಯಣ ಮಾತ್ರವಲ್ಲದೆ ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ಮುಖ್ಯ ಸಲಹೆಗಾರ ಈಶ್ವರ್ ಕೆ. ಐಲ್, ಸಮಿತಿಯ ಪ್ರಮುಖರಾದ ಪ್ರೀತಿ ಉಚ್ಚಿಲ್, ಚಂದ್ರಕಲಾ ಉಚ್ಚಿಲ್, ರವೀಂದ್ರ ಬತ್ತೇರಿ, ಸರೋಜ ವಿಟ್ಠಲ್ ಮತ್ತಿತರರು ಉಪಸ್ಥಿತರಿದ್ದು ಸಹಕರಿಸಿದರು.

ಮುಂಬಯಿಯ ಕೋರ್ ಕಮಿಟಿಯು, ದಾನಿಗಳು ನೀಡಿದ ಮೊತ್ತವನ್ನು ನಿರ್ಗತಿಕ ಹಾಗೂ ಅಸಾಯಕರಿಗಾಗಿ ಉಪಯೋಗಿಸಲು, ವಿಶೇಷವಾಗಿ ಅಗತ್ಯವಿರುವ ಮಕ್ಕಳ ಉನ್ನತ ಶಿಕ್ಷಣ ಕ್ಕಾಗಿ ಸಹಕರಿಸುವ ಅಗತ್ಯವಿದೆ ಎಂಬುದಾಗಿ ನಿರ್ಧರಿಸಿದೆ.

Related posts

ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ), ಕೆ.ಎಸ್.ರಾವ್ ನಗರ ಮೂಲ್ಕಿ ಇದರ ಮಾಜಿ ಅಧ್ಯಕ್ಷರ ಧರ್ಮಪತ್ನಿ ಶ್ರೀ ಕುಸುಮ ಆರ್ ಸುವರ್ಣ ನಿಧನ

Mumbai News Desk

ಸಿ.ಎಮ್.ಎ. ಪರೀಕ್ಷೆಯಲ್ಲಿ ಸೃಷ್ಟಿ ಹಳೆಯಂಗಡಿಗೆ ದೇಶದಲ್ಲೇ 21 ನೇ ಶ್ರೇಣಿ ರಾಷ್ಟ್ರಪತಿಯಿಂದ ಪ್ರಮಾಣ ಪತ್ರ ಸ್ವೀಕಾರ

Mumbai News Desk

ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ, ಶತ ಸಂವತ್ಸರೋತ್ಸಮ ಸಂಭ್ರಮದ ಮನವಿ ಪತ್ರ ಬಿಡುಗಡೆ .

Mumbai News Desk

ಕರಾವಳಿ ಜಿಲ್ಲೆಗಳಿಗೆ ನಿರಂತರ ವಿದ್ಯುತ್ ಪೂರೈಸಲು ಜಯಶ್ರೀಕ್ರಷ್ಣ ಪರಿಸರ ಪ್ರೇಮಿ ಸಮಿತಿ ಉಪಮುಖ್ಯಮಂತ್ರಿಗಳಿಗೆ ಮನವಿ

Mumbai News Desk

ಸಾಹಿತಿ ಡಾ. ವಿಶ್ವನಾಥ್ ಕಾರ್ನಡ್ ಅವರಿಗೆ ಮದರ್ ಇಂಡಿಯಾ ಎಕ್ಸ್ ಸ್ಟೂಡೆಂಟ್ಸ್ ಫೌಂಡೇಶನ್ ವತಿಯಿಂದ ಅಭಿನಂದನೆ

Mumbai News Desk

ಯುವ ಪ್ರತಿಭೆ ಆಶಿಕಿ (Aashiqui) ಸಾಹಿತ್ಯ ಬರೆದು ಸ್ವರ ನೀಡಿದ ಆಲ್ಬಮ್ ಸಾಂಗ್ ಬಿಡುಗಡೆ

Mumbai News Desk