32 C
Mumbai
March 7, 2026
Mumbai News Kannada
ಸುದ್ದಿ

ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ : ಮೂವರು ದರೋಡೆಕೋರರ ಬಂಧನ






ಮಂಗಳೂರಿನ ಕೋಟೆಕಾರ್ ಬ್ಯಾಂಕಿನಲ್ಲಿ ಸುಮಾರು 12 ಕೋಟಿಗೂ ಅಧಿಕ ಮೌಲ್ಯದ ಹಣ ಹಾಗೂ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಮಿಳುನಾಡಿನ ಮಧುರೈ ನಲ್ಲಿ ಮೂವರು ದರೋಡೆಕೋರರನ್ನು ಬಂಧಿಸಿದ್ದು ಬಂದಿತರಿಂದ ಪಿಎಟ್ ಕಾರು ಸಹಿತ ಎರಡು ಚೀಲದಲ್ಲಿದ್ದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಮುರುಗಂಡಿ ದೇವರ್, ಪ್ರಕಾಶ್ ಆಲಿಯಾಸ್ ಜೋಶ್ವ, ಮನಿವಣ್ಣನ್ ಬಂಧಿತ ಆರೋಪಿಗಳಾಗಿದ್ದಾರೆ.
ಇದೆ ವೇಳೆ ಬಂಧನದ ಬಳಿಕ ಪ್ರತಿಕ್ರಿಯೆ ನೀಡಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ ಅಗರ್ವಾಲ್ ಅವರು ಮುಂಬೈ ಹಾಗೂ ತಮಿಳುನಾಡು ಮೂಲಕ ಬಂಧನ ಮಾಡಲಾಗಿದೆ. ಆರೋಪಿಗಳು ದರೋಡೆಗೆಂದೇ ಮಂಗಳೂರಿಗೆ ಬಂದಿದ್ದರು. ಮುಂಬೈಯಿಂದ ಮಾಹಿತಿ ಕಲೆಹಾಕಿ ತಮಿಳುನಾಡಿಗೆ ತೆರಳಿ ಬಂಧನ ಮಾಡಿದ್ದೇವೆ. ರಾಜ್ಯದ ಗುಪ್ತಚರ ಇಲಾಖೆಯ ಸಹಾಯದಿಂದ ಡಕಾಯಿತರ ಚಲನ ವಲನಗಳ ಮಾಹಿತಿ ಲಭ್ಯವಾಯಿತು. ಮೂವರು ಆರೋಪಿಗಳು ತಮಿಳುನಾಡು ಮೂಲದವರಾದರೂ, ಮುಂಬೈ ಮೂಲದ ಗ್ಯಾಂಗಿಗೆ ಸೇರಿಕೊಂಡಿದ್ದರು. ನಾವು ಮುಂಬೈಗೆ ತನಿಖಾ ತಂಡ ಕಳಿಸಿ ಮಾಹಿತಿ ಕಲೆಹಾಕಿದ್ದೆವು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.



Related posts

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ  ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ತೋನ್ಸೆ ಶಶಿರೇಖಾ ಆನಂದ  ಶೆಟ್ಟಿ ಓಪನ್ ಏರ್ ಗಾರ್ಡನ್” ಹೆಸರಿನಲ್ಲಿ ತೆರೆದ ವೇದಿಕೆ  ನಿರ್ಮಾಣ

Mumbai News Desk

ಮೊಗವೀರ ಮಹಾಜನ ಸೇವಾ ಸಂಘದ ವಾರ್ಷಿಕ ಮಹಾಸಭೆ. ಒಗ್ಗಟ್ಟಿನಿಂದ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸೋಣ, :ರಾಜು ಮೆಂಡನ್ 

Mumbai News Desk

ಸಂಸದ ಕೋಟ ಅವರ ಅವಿರತ ಪ್ರಯತ್ನದ ಫಲ :ಫೆ. 17ರಿಂದ ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲು ಅತ್ಯಾಧುನಿಕ ತಂತ್ರಜ್ಞಾನದ ಎಲ್ಎಚ್ ಬಿ ಕೋಚ್ ಮೂಲಕ ಪ್ರಯಾಣ

Mumbai News Desk

ಉಡುಪಿ : 70ನೇ ಕನ್ನಡ ರಾಜ್ಯೋತ್ಸವ ಆಚರಣೆ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ: ಪ್ರಶಸ್ತಿ ಸ್ವೀಕರಿಸಿದ ಮುಂಬೈಯ ಸಮಾಜ ಸೇವಕ, ಕಲಾ ಪೋಷಕ ನವೀನ್ ಎಮ್ ಪೂಜಾರಿ ಪಡು ಇನ್ನಾ

Mumbai News Desk

77ನೇ ಗಣರಾಜ್ಯೋತ್ಸವದ ಸಂಭ್ರಮ: ಭಾರತದ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

Mumbai News Desk

ಬಜೆಟ್ ನಲ್ಲಿ ನಿರ್ಲಕ್ಷ್ಯ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆಗ್ರಹ* ಬಂಟರ ಅಭಿವೃದ್ದಿ ನಿಗಮ ಸ್ಥಾಪಿಸಿ : ಐಕಳ ಹರೀಶ್ ಶೆಟ್ಟಿ

Mumbai News Desk