30.9 C
Mumbai
June 8, 2026
Mumbai News Kannada
ಸುದ್ದಿ

ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ : ಮೂವರು ದರೋಡೆಕೋರರ ಬಂಧನ






ಮಂಗಳೂರಿನ ಕೋಟೆಕಾರ್ ಬ್ಯಾಂಕಿನಲ್ಲಿ ಸುಮಾರು 12 ಕೋಟಿಗೂ ಅಧಿಕ ಮೌಲ್ಯದ ಹಣ ಹಾಗೂ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಮಿಳುನಾಡಿನ ಮಧುರೈ ನಲ್ಲಿ ಮೂವರು ದರೋಡೆಕೋರರನ್ನು ಬಂಧಿಸಿದ್ದು ಬಂದಿತರಿಂದ ಪಿಎಟ್ ಕಾರು ಸಹಿತ ಎರಡು ಚೀಲದಲ್ಲಿದ್ದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಮುರುಗಂಡಿ ದೇವರ್, ಪ್ರಕಾಶ್ ಆಲಿಯಾಸ್ ಜೋಶ್ವ, ಮನಿವಣ್ಣನ್ ಬಂಧಿತ ಆರೋಪಿಗಳಾಗಿದ್ದಾರೆ.
ಇದೆ ವೇಳೆ ಬಂಧನದ ಬಳಿಕ ಪ್ರತಿಕ್ರಿಯೆ ನೀಡಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ ಅಗರ್ವಾಲ್ ಅವರು ಮುಂಬೈ ಹಾಗೂ ತಮಿಳುನಾಡು ಮೂಲಕ ಬಂಧನ ಮಾಡಲಾಗಿದೆ. ಆರೋಪಿಗಳು ದರೋಡೆಗೆಂದೇ ಮಂಗಳೂರಿಗೆ ಬಂದಿದ್ದರು. ಮುಂಬೈಯಿಂದ ಮಾಹಿತಿ ಕಲೆಹಾಕಿ ತಮಿಳುನಾಡಿಗೆ ತೆರಳಿ ಬಂಧನ ಮಾಡಿದ್ದೇವೆ. ರಾಜ್ಯದ ಗುಪ್ತಚರ ಇಲಾಖೆಯ ಸಹಾಯದಿಂದ ಡಕಾಯಿತರ ಚಲನ ವಲನಗಳ ಮಾಹಿತಿ ಲಭ್ಯವಾಯಿತು. ಮೂವರು ಆರೋಪಿಗಳು ತಮಿಳುನಾಡು ಮೂಲದವರಾದರೂ, ಮುಂಬೈ ಮೂಲದ ಗ್ಯಾಂಗಿಗೆ ಸೇರಿಕೊಂಡಿದ್ದರು. ನಾವು ಮುಂಬೈಗೆ ತನಿಖಾ ತಂಡ ಕಳಿಸಿ ಮಾಹಿತಿ ಕಲೆಹಾಕಿದ್ದೆವು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.



Related posts

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಡಾ.ರವಿರಾಜ್ ಸುವರ್ಣ ನೇಮಕ.

Mumbai News Desk

ಮುಂಬೈ: 67 ವರ್ಷದ ಹಿರಿಯ ನಾಗರಿಕ ಗೋವಿಂದ ನಾರಾಯಣ ಧುರಿ ನಾಪತ್ತೆ; ಸುಳಿವು ನೀಡಲು ಕುಟುಂಬಸ್ಥರ ಮನವಿ

Mumbai News Desk

ಪ್ಯಾರಿಸ್ ಫ್ಯಾಶನ್ ವೇದಿಕೆಯಲ್ಲಿ ಮುಂಬೈಯ ಪ್ರಭಾ ಸುವರ್ಣ ಮಿಂಚಿನ ಸಂಚಲನ:

Mumbai News Desk

” ಸಾಧನೆಯ ಮೂಲಕ ಮನಸ್ಸನ್ನು ತಿಳಿಗೊಳಿಸುವುದೇ ಜೀವನದ ಮುಖ್ಯ ಉದ್ದೇಶ “: ಶ್ರೀ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ.

Mumbai News Desk

‘ಜಯಲಕ್ಷ್ಮೀ ಎಸ್ ಜೋಕಟ್ಟೆಯವರ ಕವಿತೆಗಳು’ ಕೃತಿ ಬಿಡುಗಡೆ

Mumbai News Desk

ಮಂಗಳೂರು : ಮೂಲತ್ವ ಫೌಂಡೇಶನ್ ಮತ್ತು ವಿವಿಧ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಮಾದಕ ದ್ರವ್ಯ ವಿರೋಧಿ ಅಭಿಯಾನ

Mumbai News Desk