32 C
Mumbai
April 24, 2026
Mumbai News Kannada
ಸುದ್ದಿ

ಜನವಿಕಾಸ ಸಮಿತಿ ಪುನರೂರು ಇದರ ನೂತನ ಪದಾಧಿಕಾರಿಗಳ ಪದಗ್ರಹಣ






ಸಮಾಜದಒಳಿತಿಗಾಗಿ ಫಲಾಪೇಕ್ಷೆ ಇಲ್ಲದೆ ಮಾಡುವ ಸಹಾಯವೇ ಸೇವೆ*- ಪುನರೂರು

ನಮ್ಮಲ್ಲಿರುವ ಶ್ರಮ, ವಿದ್ಯೆ, ಬುದ್ಧಿ, ಜ್ಞಾನ, ಕೌಶಲ್ಯ, ಆರ್ಥಿಕ ಸೌಲಭ್ಯ ಇತ್ಯಾದಿಗಳನ್ನು ಸಮಾಜದ, ದೇಶದ ಒಳಿತಿಗಾಗಿ ಫಲಾಪೇಕ್ಷೆ ಇಲ್ಲದೆ ಅರ್ಪಣಾಮನೋಭಾವದಿಂದ ನೀಡುವ ಸಹಾಯವೇ ಸೇವೆ. ಸೇವಾ ಚಟುವಟಿಕೆ ನಮ್ಮ ಜೀವನದ ಅವಿಭಾಜ್ಯ ಭಾಗ ಹಾಗೂ ಸ್ವಭಾವವಾಗಬೇಕೆಂದು ಪುನರೂರು ಪ್ರತಿಷ್ಠಾನದ ಗೌರವಾಧ್ಯಕ್ಷರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಹೇಳಿದರು.

ಅವರು ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಸಭಾಂಗಣದಲ್ಲಿ ಜನ ವಿಕಾಸ ಸಮಿತಿ ಮೂಲ್ಕಿಯ ನೂತನ ಅಧ್ಯಕ್ಷರಾದ ಅಕ್ಷತಾ ಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಾಣೇಶ್ ಭಟ್ ದೇಂದಡ್ಕ ರವರಿಗೆ ಅಧಿಕಾರ ಹಸ್ತಾಂತರ ಮಾಡಿಸಿ ಪದಗ್ರಹಣ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು ಅಧ್ಯಕ್ಷತೆ ವಹಿಸಿದರು.

ಈ ಸಂದರ್ಭದಲ್ಲಿ ಪುನರೂರು ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಶ್ರೇಯಾ ಪುನರೂರು, ಜನ ವಿಕಾಸ ಸಮಿತಿ ಮೂಲ್ಕಿಯ ಉಪಾಧ್ಯಕ್ಷರಾದ ಆನಂದ ಮೇಲಾಂಟ, ಕಾರ್ಯದರ್ಶಿ ದಾಮೋದರ ಶೆಟ್ಟಿ, ಕೊಡೆತ್ತೂರು, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಪಿ. ಎಸ್. ಸುರೇಶ್ ರಾವ್, ಶಶಿಕರ ಕೆರೆಕಾಡು, ಶೋಭಾ ರಾವ್, ಜೀವನ್ ಶೆಟ್ಟಿ, ಗೀತಾ ಶೆಟ್ಟಿ ಉಪಸ್ಥಿತರಿದ್ದರು.

ಶಿಮಂತೂರಿನ ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್ ನ ಪ್ರಾಂಶುಪಾಲರಾದ ಜಿತೇಂದ್ರ ವಿ ರಾವ್ ಕಾರ್ಯಕ್ರಮ ನಿರೂಪಿಸಿದರು.



Related posts

ಬಂಟ್ವಾಳ : ನೇತ್ರಾವತಿ ನದಿ ದಡದಲ್ಲಿ ಅನಾಥವಾಗಿ ಬಿದ್ದ ನೂರಾರು ಆಧಾರ್ ಕಾರ್ಡ್‌ಗಳು – ತನಿಖೆಗೆ ಯು.ಟಿ. ಖಾದರ್ ಸೂಚನೆ.

Mumbai News Desk

ಗನ್​ನಿಂದ ಕಾಲಿಗೆ ಶೂಟ್ ಮಾಡಿಕೊಂಡ ನಟ ಗೋವಿಂದ, ಐಸಿಯುಗೆ ದಾಖಲು

Mumbai News Desk

ಭಿವಂಡಿ:ಹಿರಿಯ ಹೋಟೆಲ್ ಉದ್ಯಮಿ ಸಮಾಜ ಸೇವಕ ದೇವು ಎಸ್ ಪೂಜಾರಿ ನಿಧನ

Mumbai News Desk

ಚಿತ್ರರಂಗದ ಮಿನುಗು ತಾರೆ ರೀಟಾ ಆರ್. ಅಂಚನ್ ವಿಧಿವಶ

Mumbai News Desk

ಕುಲಾಲ ಪ್ರತಿಷ್ಠಾನದ ಮಂಗಳೂರು, ವಿಜಯ ಕಲಾವಿದರ ಕಿನ್ನಿಗೋಳಿಯ ನಾಟಕ ಪ್ರದರ್ಶನ, ಮುಂಬಯಿ ಪ್ರವಾಸದ ಉದ್ಘಾಟನೆ.

Mumbai News Desk

ಮಹಾರಾಷ್ಟ್ರ ಪ್ರದೇಶ ಕಿಸನ್ ಕಾಂಗ್ರೆಸ್ ಸಮಿತಿಯ ಕಾರ್ಯಧ್ಯಕ್ಷರಾಗಿ ಸುರೇಶ್ ಶೆಟ್ಟಿ ಯೆಯ್ಯಾಡಿ ನಿಯುಕ್ತಿ.

Mumbai News Desk