32 C
Mumbai
March 7, 2026
Mumbai News Kannada
ಪ್ರಕಟಣೆ

ವಸಾಯಿ ಕರ್ನಾಟಕ ಸಂಘ : ಜ.26 ರಂದು 38ನೇ ವಾರ್ಷಿಕ ಮಹಾಸಭೆ,





ವಸಾಯಿ, ಜ.19- ಗ್ರಾಮೀಣ ಭಾಗವಾದ ವಸಾಯಿ ಪರಿಸರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ತುಳು ಕನ್ನಡಿಗರ ಹೆಮ್ಮೆಯ ಸಂಸ್ಥೆ ವಸಾಯಿ ಕರ್ನಾಟಕ ಸಂಘದ  38ನೇ ವಾರ್ಷಿಕ ಮಹಾಸಭೆಯನ್ನು ಸಂಘದ ಅಧ್ಯಕ್ಷ ದೇವೇಂದ್ರ ಬಿ. ಬುನ್ನನ್‌ರವರ ಅಧ್ಯಕ್ಷತೆಯಲ್ಲಿ ಜ.26 ರಂದು ರವಿವಾರ ದಂದು ಸಂಘದ ಕಚೇರಿ ಸಂಖ್ಯೆ 3 ಮತ್ತು 4, ಹ್ಯಾಪಿ ಜೀವನ್ ಸೊಸೈಟಿ ಪಾರ್ವತಿ, ಸಿನೆಮಾದ ಎದುರುಗಡೆ, ವಸಾಯಿ (ಪ)  ಇಲ್ಲಿ 

ಬೆಳಿಗ್ಗೆ 7.30ಕ್ಕೆ ಸತ್ಯ ನಾರಾಯಣ ಮಹಾಪೂಜೆ, ಅನಂತರ ದ್ವಜಾರೋಹಣ, ಬಳಿಕ 10.30 ಕ್ಕೆ ವಾರ್ಷಿಕ ಮಹಾಸಭೆಯು ಸಂಘದ ಕಚೇರಿ  ಎದುರುಗಡೆಯಿರುವ ಸ್ವಾಮಿ ನಾರಾಯಣ ಮಂದಿರದ ಮೊದಲನೇ ಮಹಡಿಯ ಸಭಾಂಗಣ ಪಾರ್ವತಿ ಸಿನಿಮಾ ಹತ್ತಿರ ವಸಯಿ (ಪ)ಇಲ್ಲಿ

 ದೇವತಾ ಪ್ರಾರ್ಥನೆಯೊಂದಿಗೆ , ಗತ ಮಹಾಸಭೆಯ ಟಿಪ್ಪಣಿಯನ್ನು ಮಂಜೂರು ಮಾಡುವುದು, ವಾರ್ಷಿಕ ವರದಿಯನ್ನು ಮಂಜೂರು ಮಾಡುವುದು, 2025-26ರ ಅವಧಿಗೆ ಲೆಕ್ಕಪರಿಶೋಧಕರ ನೇಮಕ, ಅಧ್ಯಕ್ಷರ ಅನುಮತಿ ಮೇರೆಗೆ ಸಂಘದ ಸದಸ್ಯರು ಮಂಡಿಸಿರುವ ವಿಷಯಗಳ ಬಗ್ಗೆ ಚರ್ಚೆ, ಮತ್ತು 2025 -2027 ಕಾರ್ಯವಧಿಗೆ ಸಂಘದ ಕಾರ್ಯಕಾರಿ ಸಮಿತಿ ನೇಮಕ ಮಾಡುವ ಪ್ರಕ್ರಿಯೆ ನಡೆಯಲಿದೆ 

ಆ ಬಳಿಕ ಅಧ್ಯಕ್ಷರ ಭಾಷಣ, ಧನ್ಯವಾದ ಸಮರ್ಪಣೆಯೊಂದಿಗೆ ಕಾರ್ಯಸೂಚಿಯ ಪ್ರಕಾರ ನಡೆಯಲಿದೆ.

ಸಂಘದ ಸದಸ್ಯರಿಗೆ ವಿವರಗಳನ್ನು ವಾಟ್ಸ್‌ಆ್ಯಪ್, ಇ- ಮೇಲ್‌ಗಳಲ್ಲಿ ವಾರ್ಷಿಕ ವರದಿಯನ್ನು ಕಳುಹಿಸಲಾಗುವುದು. ವರದಿ ಲಭಿಸದ ಸದಸ್ಯರು ಸಂಘದ ಕಚೇರಿಯನ್ನು ಸಂಪರ್ಕಿಸಿ ಪಡೆಯಬಹುದು. ಸದಸ್ಯರು ಕ್ಲಪ್ತ ಸಮಯದಲ್ಲಿ ಹಾಜರಿರಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಮಯಕ್ಕೆ ಸರಿಯಾಗಿ ಹಾಜರಾಗದೇ ಇದ್ದಲ್ಲಿ ಅರ್ಧ ತಾಸಿನ ನಂತರ ಅದೇ ಸ್ಥಳದಲ್ಲಿ ಮುಂದುವರಿಸಿದ ಸಭೆಯೆಂದು ಪರಿಗಣಿಸಲಾಗುವುದು.

ಸಂಘದ ಸದಸ್ಯರು ಕ್ಲಪ್ತ ಸಮಯದಲ್ಲಿ ಸಭೆಯಲ್ಲಿ  ಪಾಲ್ಗೊಳ್ಳಬೇಕಾಗಿ ಗೌರವ ಪ್ರಧಾನ ಕಾರ್ಯದರ್ಶಿ, ರವೀಂದ್ರ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ



Related posts

ಮಲಾಡ್ ಕನ್ನಡ ಸಂಘದ ಆಶ್ರಯದಲ್ಲಿ ಡಿ. 29 ರಂದು ಸದಸ್ಯ ಬಾಂಧವರಿಗೆ ಮತ್ತು ಮಕ್ಕಳಿಗಾಗಿ ಒಳಾಂಗಣ ಕ್ರೀಡಾಕೂಟ

Mumbai News Desk

ಸೆ. 22 ರಿಂದ ಅ. 2 ರ ವರೆಗೆ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ 2025

Mumbai News Desk

ಜ.6 ರಂದು ಇನ್ನಂಜೆ ಚಂದ್ರಹಾಸ ಗುರುಸ್ವಾಮಿ ಅವರ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ಶಂಕರಪುರ ಇದರ 38ನೇ ವರ್ಷದ ವಾರ್ಷಿಕ ಮಹಾಪೂಜೆ

Mumbai News Desk

ಕುಮಾರ  ಕ್ಷತ್ರಿಯ ಸಂಘ  ಮುಂಬಯಿ: ಫೆಬ್ರವರಿ 11 : 58 ನೇ ವಾರ್ಷಿಕ ಮಹಾಸಭೆ , ಸತ್ಯನಾರಾಯಣ ಮಹಾಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ :ಫೆಬ್ರವರಿ 18 ರಂದು ಡೊಂಬಿವಲಿ ಸ್ಥಳೀಯ ಸಮಿತಿವತಿಯಿಂದ ಮಹಿಳಾ ಸದಸ್ಯರಿಗಾಗಿ ಹೂವಿನ ರಂಗೋಲಿ ಸ್ಪರ್ಧೆ :

Mumbai News Desk

ಸೆ.14 ರಂದು ಕಲ್ವಾ ಸ್ಥಳೀಯ ಸಮಿತಿಯ ವತಿಯಿಂದ 171ನೇ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಸಮಾರಂಭ

Mumbai News Desk