September 6, 2026
Mumbai News Kannada
ಮುಂಬಯಿ

ಮುಂಬಯಿ : ಹೋಟೆಲ್ ಉದ್ಯಮಿಗೆ ಕೊಲೆ ಬೆದರಿಕೆ ಗ್ಯಾಂಗ್ ಸ್ಟರ್ ಡಿ. ಕೆ ರಾವ್ ಬಂಧನ





ಮುಂಬೈಯ ಅಂಧೇರಿ ಮೂಲದ ಹೋಟೆಲ್ ಮಾಲಕನಿಗೆ ಆಸ್ತಿ ಮಾರಾಟ ಮಾಡುವಂತೆ ಕೊಲೆ ಬೆದರಿಕೆ ಹಾಕಿದ್ದ ಗ್ಯಾಂಗ್ಸ್ಟರ್ ರವಿ ಮಲ್ಲೇಶ್ ಬೋರ ಅಲಿಯಾಸ್ ಡಿ ಕೆ ರಾವ್ ಮತ್ತು ಆತನ ಆರು ಮಂದಿ ಸಹಾಯಕರನ್ನು ಮುಂಬೈ ಕ್ರೈಮ್ ಬ್ರಾಂಚ್ ಬಂಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
30ಕ್ಕೂ ಹೆಚ್ಚು ಕೊಠಡಿಗಳನ್ನು ಹೊಂದಿರುವ ಹೋಟೆಲ್ ಅನ್ನು ಹಿರಿಯ ನಾಗರಿಕರೊಬ್ಬರು ನಡೆಸುತ್ತಿದ್ದು, ಅದನ್ನು 2.5 ಕೋಟಿ ರೂಪಾಯಿಗೆ ಮಾರಟ ಮಾಡುವಂತೆ ಡಿ ಕೆ ರಾವ್ ಕಳೆದ ಒಂದು ವರ್ಷದಿಂದ ಬೆದರಿಕೆ ಹಾಕುತಿದ್ದರು.
ಡಿ. ಕೆ ರಾವ್ ಮತ್ತು ಇತರ ಆರು ಜನ ತಮ್ಮ ಹೋಟೆಲ್ ಅನ್ನು ಸ್ವಾಧೀನ ಪಡಿಸಿಕೊಳ್ಳಲು ಸಂಚುರೂಪಿಸಿದ್ದಾರೆ ಎಂದು ಆರೋಪಿಸಿ ಅಪರಾಧ ವಿಭಾಗದ ಸುಲಿಗೆ ನಿಗ್ರಹ ದಳಕ್ಕೆ, ಹೋಟೆಲ್ ಉದ್ಯಮಿ ದೂರು ನೀಡಿದ ಆದಾರದಲ್ಲಿ ಡಿ ಕೆ ರಾವ್ ಮತ್ತು ಅವರ ಸಹಚರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವರದಿಗಳ ಪ್ರಕಾರ ಡಿ. ಕೆ ರಾವ್ ಅವರ ವಿರುದ್ಧ 41 ಪ್ರಕರಣಗಳು ದಾಖಲಾಗಿವೆ. ಅವರು ಕುಖ್ಯಾತ ಡಾನ್ ಚೋಟ ರಾಜನ್ ನ ಗ್ಯಾಂಗ್ ನ ಪ್ರಮಖ ಸದಸ್ಯನಾಗಿದ್ದು, ಮುಂಬೈಯ ಧಾರವಿ ನಿವಾಸಿ.
ರಾವ್ ವಿರುದ್ಧ ದಾಖಲಾಗಿರುವ ಪ್ರಕರಣಗಳಲ್ಲಿ 6 ಕೊಲೆ, ಐದು ಡಕಾಯಿತಿ, ಮತ್ತು ಇತರ ಸುಲಿಗೆಗೆ ಸಂಬಂಧಿಸಿದ ಪ್ರಕರಣಗಳು ಸೇರಿವೆ. 2022ರ ಅಕ್ಟೋಬರ್ ನಲ್ಲಿ ಸಂಘಟಿತ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ನಿಂದ ಡಿ ಕೆ ರಾವ್ ಅವರಿಗೆ ಜಮೀನು ನೀಡಲಾಯಿತು.



Related posts

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಮುಂಬಯಿ ವತಿಯಿಂದ ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಆಹ್ವಾನ

Mumbai News Desk

ರೈ ಸಮಿತಿ ಎಜುಕೇಶನಲ್ ಟ್ರಸ್ಟ್‌ನ ಮಲಾಡ್‌ನ ಸ್ಕಾಲರ್ ಅಕಾಡೆಮಿ ಶಾಲೆಯ ವಾರ್ಷಿಕೋತ್ಸವ

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಆಟಿಡೊಂಜೆ ಬಂಟರೆ ಕೂಟ

Mumbai News Desk

ವಿಜಯ ಕಾಲೇಜು ಮೂಲ್ಕಿ ಜಾಗತಿಕ ಹಳೆವಿದ್ಯಾರ್ಥಿ ಸಂಘದ ಮಹಾಸಭೆ

Mumbai News Desk

ಬಂಟರ ಸಂಘ ಮುಂಬಯಿ, ಡೊಂಬಿವಲಿ ಪ್ರಾದೇಶಿಕ ಸಮಿತಿ, ಮಹಿಳಾ ವಿಭಾಗದ ವತಿಯಿಂದ ಆಟಿದ ಸೊಗಸ್ ಮತ್ತು ” ಸಂಜೀವಿನಿ ” ಯೋಜನೆಯ ಉದ್ಘಾಟನೆ

Mumbai News Desk

ವಿಶ್ವ ರಂಗ ದಿನಾಚರಣೆ- 2024ರ ಅಂಗವಾಗಿನಾಟಕ ರಚನಾ ಕಮ್ಮಟ ಮತ್ತು ರಂಗ ನಿರ್ದೇಶಕರ ಸಮ್ಮಿಲನ

Mumbai News Desk