32 C
Mumbai
April 24, 2026
Mumbai News Kannada
ಮುಂಬಯಿ

ಮುಂಬಯಿ : ಹೋಟೆಲ್ ಉದ್ಯಮಿಗೆ ಕೊಲೆ ಬೆದರಿಕೆ ಗ್ಯಾಂಗ್ ಸ್ಟರ್ ಡಿ. ಕೆ ರಾವ್ ಬಂಧನ





ಮುಂಬೈಯ ಅಂಧೇರಿ ಮೂಲದ ಹೋಟೆಲ್ ಮಾಲಕನಿಗೆ ಆಸ್ತಿ ಮಾರಾಟ ಮಾಡುವಂತೆ ಕೊಲೆ ಬೆದರಿಕೆ ಹಾಕಿದ್ದ ಗ್ಯಾಂಗ್ಸ್ಟರ್ ರವಿ ಮಲ್ಲೇಶ್ ಬೋರ ಅಲಿಯಾಸ್ ಡಿ ಕೆ ರಾವ್ ಮತ್ತು ಆತನ ಆರು ಮಂದಿ ಸಹಾಯಕರನ್ನು ಮುಂಬೈ ಕ್ರೈಮ್ ಬ್ರಾಂಚ್ ಬಂಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
30ಕ್ಕೂ ಹೆಚ್ಚು ಕೊಠಡಿಗಳನ್ನು ಹೊಂದಿರುವ ಹೋಟೆಲ್ ಅನ್ನು ಹಿರಿಯ ನಾಗರಿಕರೊಬ್ಬರು ನಡೆಸುತ್ತಿದ್ದು, ಅದನ್ನು 2.5 ಕೋಟಿ ರೂಪಾಯಿಗೆ ಮಾರಟ ಮಾಡುವಂತೆ ಡಿ ಕೆ ರಾವ್ ಕಳೆದ ಒಂದು ವರ್ಷದಿಂದ ಬೆದರಿಕೆ ಹಾಕುತಿದ್ದರು.
ಡಿ. ಕೆ ರಾವ್ ಮತ್ತು ಇತರ ಆರು ಜನ ತಮ್ಮ ಹೋಟೆಲ್ ಅನ್ನು ಸ್ವಾಧೀನ ಪಡಿಸಿಕೊಳ್ಳಲು ಸಂಚುರೂಪಿಸಿದ್ದಾರೆ ಎಂದು ಆರೋಪಿಸಿ ಅಪರಾಧ ವಿಭಾಗದ ಸುಲಿಗೆ ನಿಗ್ರಹ ದಳಕ್ಕೆ, ಹೋಟೆಲ್ ಉದ್ಯಮಿ ದೂರು ನೀಡಿದ ಆದಾರದಲ್ಲಿ ಡಿ ಕೆ ರಾವ್ ಮತ್ತು ಅವರ ಸಹಚರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವರದಿಗಳ ಪ್ರಕಾರ ಡಿ. ಕೆ ರಾವ್ ಅವರ ವಿರುದ್ಧ 41 ಪ್ರಕರಣಗಳು ದಾಖಲಾಗಿವೆ. ಅವರು ಕುಖ್ಯಾತ ಡಾನ್ ಚೋಟ ರಾಜನ್ ನ ಗ್ಯಾಂಗ್ ನ ಪ್ರಮಖ ಸದಸ್ಯನಾಗಿದ್ದು, ಮುಂಬೈಯ ಧಾರವಿ ನಿವಾಸಿ.
ರಾವ್ ವಿರುದ್ಧ ದಾಖಲಾಗಿರುವ ಪ್ರಕರಣಗಳಲ್ಲಿ 6 ಕೊಲೆ, ಐದು ಡಕಾಯಿತಿ, ಮತ್ತು ಇತರ ಸುಲಿಗೆಗೆ ಸಂಬಂಧಿಸಿದ ಪ್ರಕರಣಗಳು ಸೇರಿವೆ. 2022ರ ಅಕ್ಟೋಬರ್ ನಲ್ಲಿ ಸಂಘಟಿತ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ನಿಂದ ಡಿ ಕೆ ರಾವ್ ಅವರಿಗೆ ಜಮೀನು ನೀಡಲಾಯಿತು.



Related posts

ಹರಟೆ ಸಾಹಿತಿ ದಿ. ಚಂದ್ರಶೇಖರ ರಾವ್ ಜನ್ಮದಿನಾಚರಣೆ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

Mumbai News Desk

ಭಾರತ್ ಬ್ಯಾಂಕ್ ಸಿಬ್ಬಂದಿ ಆಶಾಲತಾ ಎಸ್ ಕೋಟ್ಯಾನ್ ಸೇವಾ ನಿವೃತ್ತಿ

Mumbai News Desk

ಶ್ರೀ ಮಹಿಷಮರ್ದಿನಿ ದೇವಸ್ಥಾನ ಟ್ರಸ್ಟ್ ಬೊರಿವಿಲಿ 35ನೇ ವಾರ್ಷಿಕ ಶರವನ್ನರಾತ್ರಿ ಮಹೋತ್ಸವ ಚಂಡಿಕಾ ಹೋಮ,ಙ ಧಾರ್ಮಿಕ ಕಾರ್ಯಕ್ರಮಗಳು.

Mumbai News Desk

ಕುಲಾಲ ಸಂಘ ಮುಂಬಯಿ ; 93ನೇ ವಾರ್ಷಿಕ ಮಹಾಸಭೆ

Mumbai News Desk

ಸಿರಿನಾಡ ವೆಲ್ಪೆರ್ ಅಸೋಷಿಯೇಶನ್ ನ 23 ನೇ ವಾರ್ಷಿಕೋತ್ಷವ. ಸಾಮೂಹಿಕ ಶ್ರೀಶನೀಶ್ವರ ಪೂಜೆ ಸoಪನ್ನ

Mumbai News Desk

ತುಳು ಸಂಘ ಬೊರಿವಲಿ, ಮಹಿಳಾ ವಿಭಾಗದಿಂದ ಅರಸಿನ ಕುಂಕುಮ

Mumbai News Desk