July 23, 2026
Mumbai News Kannada
ಮುಂಬಯಿ

ಮುಂಬಯಿ : ಹೋಟೆಲ್ ಉದ್ಯಮಿಗೆ ಕೊಲೆ ಬೆದರಿಕೆ ಗ್ಯಾಂಗ್ ಸ್ಟರ್ ಡಿ. ಕೆ ರಾವ್ ಬಂಧನ







ಮುಂಬೈಯ ಅಂಧೇರಿ ಮೂಲದ ಹೋಟೆಲ್ ಮಾಲಕನಿಗೆ ಆಸ್ತಿ ಮಾರಾಟ ಮಾಡುವಂತೆ ಕೊಲೆ ಬೆದರಿಕೆ ಹಾಕಿದ್ದ ಗ್ಯಾಂಗ್ಸ್ಟರ್ ರವಿ ಮಲ್ಲೇಶ್ ಬೋರ ಅಲಿಯಾಸ್ ಡಿ ಕೆ ರಾವ್ ಮತ್ತು ಆತನ ಆರು ಮಂದಿ ಸಹಾಯಕರನ್ನು ಮುಂಬೈ ಕ್ರೈಮ್ ಬ್ರಾಂಚ್ ಬಂಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
30ಕ್ಕೂ ಹೆಚ್ಚು ಕೊಠಡಿಗಳನ್ನು ಹೊಂದಿರುವ ಹೋಟೆಲ್ ಅನ್ನು ಹಿರಿಯ ನಾಗರಿಕರೊಬ್ಬರು ನಡೆಸುತ್ತಿದ್ದು, ಅದನ್ನು 2.5 ಕೋಟಿ ರೂಪಾಯಿಗೆ ಮಾರಟ ಮಾಡುವಂತೆ ಡಿ ಕೆ ರಾವ್ ಕಳೆದ ಒಂದು ವರ್ಷದಿಂದ ಬೆದರಿಕೆ ಹಾಕುತಿದ್ದರು.
ಡಿ. ಕೆ ರಾವ್ ಮತ್ತು ಇತರ ಆರು ಜನ ತಮ್ಮ ಹೋಟೆಲ್ ಅನ್ನು ಸ್ವಾಧೀನ ಪಡಿಸಿಕೊಳ್ಳಲು ಸಂಚುರೂಪಿಸಿದ್ದಾರೆ ಎಂದು ಆರೋಪಿಸಿ ಅಪರಾಧ ವಿಭಾಗದ ಸುಲಿಗೆ ನಿಗ್ರಹ ದಳಕ್ಕೆ, ಹೋಟೆಲ್ ಉದ್ಯಮಿ ದೂರು ನೀಡಿದ ಆದಾರದಲ್ಲಿ ಡಿ ಕೆ ರಾವ್ ಮತ್ತು ಅವರ ಸಹಚರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವರದಿಗಳ ಪ್ರಕಾರ ಡಿ. ಕೆ ರಾವ್ ಅವರ ವಿರುದ್ಧ 41 ಪ್ರಕರಣಗಳು ದಾಖಲಾಗಿವೆ. ಅವರು ಕುಖ್ಯಾತ ಡಾನ್ ಚೋಟ ರಾಜನ್ ನ ಗ್ಯಾಂಗ್ ನ ಪ್ರಮಖ ಸದಸ್ಯನಾಗಿದ್ದು, ಮುಂಬೈಯ ಧಾರವಿ ನಿವಾಸಿ.
ರಾವ್ ವಿರುದ್ಧ ದಾಖಲಾಗಿರುವ ಪ್ರಕರಣಗಳಲ್ಲಿ 6 ಕೊಲೆ, ಐದು ಡಕಾಯಿತಿ, ಮತ್ತು ಇತರ ಸುಲಿಗೆಗೆ ಸಂಬಂಧಿಸಿದ ಪ್ರಕರಣಗಳು ಸೇರಿವೆ. 2022ರ ಅಕ್ಟೋಬರ್ ನಲ್ಲಿ ಸಂಘಟಿತ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ನಿಂದ ಡಿ ಕೆ ರಾವ್ ಅವರಿಗೆ ಜಮೀನು ನೀಡಲಾಯಿತು.



Related posts

ನವರಾತ್ರಿ ವೈಭವ: ‘ಓಂ ಶಕ್ತಿ ಮಹಿಳಾ ಸಂಸ್ಥಾ’ದ ಗರ್ಬಾ ನೃತ್ಯೋತ್ಸವ – ಸೇವಾ ಪಥಕ್ಕೆ ದುರ್ಗೆಯ ಆಶೀರ್ವಾದ

Mumbai News Desk

ಮುಂಬೈ : ಭಾಂಡುಪ್‌ನಲ್ಲಿ ಪಾದಚಾರಿಗಳಿಗೆ ಬೆಸ್ಟ್ ಬಸ್ ಡಿಕ್ಕಿ ಹೊಡೆದ ಪರಿಣಾಮ 4 ಸಾವು, 8 ಜನರಿಗೆ ಗಾಯ

Mumbai News Desk

ಕರ್ನಾಟಕ ಸಂಘ ಡೊಂಬಿವಲಿ: ಲಲಿತ ಕಲಾ ವಿಭಾಗ ಮತ್ತು ಮಹಿಳಾ ವಿಭಾಗದ ವತಿಯಿಂದ ನಾಡ ಹಬ್ಬ ಅಚರಣೆ

Mumbai News Desk

ಕಾಪು ಮೊಗವೀರ ಮಹಾಸಭಾ, ಮುಂಬಯಿ ಇದರ 85 ನೇ ವಾರ್ಷಿಕ ಮಹಾಸಭೆ

Mumbai News Desk

ವಸಾಯಿ ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ದೇಗುಲ ದರ್ಶನ.

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ತನಿಶ್ ಕಿರೋಡಿಯನ್ ಗೆ ಶೇ 88 ಅಂಕ.

Mumbai News Desk