July 23, 2026
Mumbai News Kannada
ಮುಂಬಯಿ

ಬಿಲ್ಲವರ ಅಸೋಸಿಯೇಶನ್ ಮುಂಬಯಿ, ಡೊಂಬಿವಲಿ ಸ್ಥಳೀಯ ಕಛೇರಿಯಲ್ಲಿ ಗಣರಾಜ್ಯೋತ್ಸವ







ಬಿಲ್ಲವರ ಅಸೋಸಿಯೇಶನ್ ಮುಂಬಯಿ, ಡೊಂಬಿವಲಿ
ಸ್ಥಳೀಯ ಕಛೇರಿಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮವು ತಾರೀಕು
26.01.2025 ರಂದು ಬೆಳಿಗ್ಗೆ ಗಂಟೆ 8.00 ಕ್ಕೆ ಸರಿಯಾಗಿ ಜರಗಿತು.

ಆರ್ಚಕರಾದ ಐತಪ್ಪ ಸುವರ್ಣರಿಂದ ಗುರು ಪೂಜೆಯಾದ ನಂತರ ರಾಷ್ಟ್ರ ಧ್ವಜಕ್ಕೆ ನಮನ ಮತ್ತು ಧ್ವಜಾರೋಹಣ ಕಾರ್ಯಕ್ರಮ ಜರಗಿತು.
ಈ ಕಾರ್ಯಕ್ರಮಕ್ಕೆ ಮುನ್ನ ಅತಿಥಿಯಾಗಿ ಆಗಮಿಸಿದ ಮಹಾ ವಿಷ್ಣು
ಮಂದಿರ ಡೊಂಬಿವಲಿ ಇದರ ಗೌ. ಅಧ್ಯಕ್ಷರಾದ ನಿತಿನ್ ಪ್ರಕಾಶ್ ಪುತ್ರನ್ ಇವರು ಧ್ವಜಾರೋಹಣ ನೆರವೇರಿಸಿದರು.


ತದನಂತರದ ಜರಗಿದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಕಛೇರಿಯ ಕಾರ್ಯಾಧ್ಯಕ್ಷರಾದ ಶ್ರೀಧರ್ ಬಿ ಅಮೀನ್ ರವರು ವಹಿಸಿದರು.

ಮುಖ್ಯ ಅತಿಥಿಯಾಗಿ ನಿತಿನ್ ಪ್ರಕಾಶ್ ಪುತ್ರನ್ ಇವರು ಉಪಸ್ಥಿತರಿದ್ದರು .

ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗದ ಸದಸ್ಯರು ಮತ್ತು ಯುವವಿಭಾಗದವರು ಗಣರಾಜೋಸ್ತವದ ಬಗ್ಗೆ ಮಾತನಾಡಿದರು. ಯುವ ವಿಭಾಗದವರ ಸಂಪೂರ್ಣ ಸಹಾಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿದೆ .

ವೇದಿಕೆಯಲ್ಲಿ ಉಪಾಧ್ಯಕ್ಷರಾದ ಚಂದ್ರಹಾಸ್ ಎಸ್ ಪಾಲನ್, ಸಚಿನ್ ಜಿ ಪೂಜಾರಿ, ಕೋಶಾಧಿಕಾರಿ ಆನಂದ್ ಪೂಜಾರಿ, ಗೌ.ಕಾರ್ಯಾಧ್ಯಕ್ಷರಾದ ಮಂಜಪ್ಪ ಪೂಜಾರಿಯವರು ಮತ್ತು ಮಾಜಿ ಕಾರ್ಯಾಧ್ಯಕ್ಷರಾದ ದೇವರಾಜ್ ಪೂಜಾರಿಯವರು ವೇದಿಕೆಯಲ್ಲಿ ಉಪಸ್ತಿತರಿದ್ದರು.
ಸುನೀತಾ ಪೂಜಾರಿ ಮತ್ತು ಜ್ಯೋತಿ ಪೂಜಾರಿಯವರು ಪ್ರಾರ್ಥನೆ ಗೈದರೆ ಗೌ. ಕಾರ್ಯದರ್ಶಿ ಜಗದೀಶ್ ಜೇ ಕೊಟ್ಯನ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು. ಗೌ. ಕೋಶಾಧಿಕಾರಿ ಆನಂದ್ ಪೂಜಾರಿಯವರು ವಂದಿಸಿದರು.



Related posts

ವಸಾಯಿ ಕರ್ನಾಟಕ ಸಂಘ ಮಹಿಳಾ ವಿಭಾಗದ ನವರಾತ್ರಿ ಉತ್ಸವ: ಸಂಸ್ಕೃತಿ ಮತ್ತು ಸಾಧನೆಗಳ ಸಮಾಗಮ

Mumbai News Desk

ಭಾರತ್ ಬ್ಯಾಂಕಿನ ಅಂಧೇರಿ ಪೂರ್ವದ ಶಾಖೆಯ 30ನೇ ವರ್ಷ ಆಚರಣೆಯ ಸಂಭ್ರಮ.

Mumbai News Desk

ಮೀರಾ ರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಭಕ್ತಿ ಸಡಗರದ  ಶ್ರೀ  ಸಾರ್ವಜನಿಕ ಸತ್ಯ ನಾರಾಯಣ ಮಹಾಪೂಜೆ. ಸಂಪನ್ನ

Mumbai News Desk

ನೃತ್ಯ ಸ್ಪರ್ಧಾಳುಗಳಿಗೆ ಬಿಲ್ಲವರ ಎಸೋಶಯೆಷನ್ ಬೊರಿವಲಿ – ದಹಿಸರ್ ಸ್ಥಳೀಯ ಕಚೇರಿಯ ವತಿಯಿಂದ ಗೌರವ

Mumbai News Desk

ಕಾಂದಿವಲಿ ಕನ್ನಡ ಸಂಘದಿಂದ ನವದೇವಿ ಮಂದಿರಗಳ ದರ್ಶನ: ಮಹಿಳಾ ವಿಭಾಗದ ಪವಿತ್ರ ಯಾತ್ರೆ

Mumbai News Desk

ಮಹಾರಾಷ್ಟ್ರ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಬಡ್ತಿ: ಕನ್ನಡಿಗ ಡಾ. ಕೆ. ಎಚ್. ಗೋವಿಂದರಾಜ್ (ಐಎಎಸ್) ಅವರಿಗೆ ಒಕ್ಕಲಿಗರ ಸಂಘ ಮಹಾರಾಷ್ಟ್ರ ವತಿಯಿಂದ ಗೌರವ

Mumbai News Desk