30.9 C
Mumbai
June 8, 2026
Mumbai News Kannada
ಪ್ರಕಟಣೆ

ಬ್ರಹ್ಮ ಶೀ ನಾರಾಯಣ ಗುರುಗಳ ದಂತ [ದಿವ್ಯ ದಂತ] ಪ್ರದರ್ಶನ






“ಒಂದೇ ಜಾತಿ, ಒಂದೇ ಮತ ಮತ್ತು ಒಂದೇ ದೇವರು” ಎಂಬ ಸತ್ಯವಾಕ್ಯವನ್ನು ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಧಿಯ ಬಳಿಕ ಅವರ ದಂತವನ್ನು [ದಿವ್ಯ ದಂತಮ್‌] ಜೋಪಾನವಾಗಿ ಇರಿಸಿಕೊಳ್ಳಲಾಗಿದ್ದು ಇದನ್ನು ಪ್ರತೀ ವರ್ಷ ಭಕ್ತರ ದರ್ಶನಕ್ಕಾಗಿ ಇರಿಸಲಾಗುತ್ತಿದೆ. ಈ ಬಾರಿ ರವಿವಾರ ಫೆಬ್ರವರಿ 2 ರಂದು ಬೆಳಗ್ಗೆ ಗಂಟೆ 8.30 ರಿಂದ ಸಾಯಂಕಾಲ ಗಂಟೆ 4-00 ರ ವರೆಗೆ ಇದನ್ನು ಭಕ್ತರ ವೀಕ್ಷಣೆಗಾಗಿ ನವಿ ಮುಂಬಯಿಯ ನೆರುಳ್‌ನ ಸೆಕ್ಟರ್‌ 20ರಲ್ಲಿರುವ ಗುರುದೇವಗಿರಿ ಮಂದಿರದ ಆವರಣದಲ್ಲಿ ಇರಿಸಲಾಗುತ್ತದೆ. ಶಿವಗಿರಿ ಆಶ್ರಮದ ಸ್ವಾಮಿಯವರ ನೇತೃತ್ವದಲ್ಲಿ ಇದರ ಆಯೋಜನೆ ಮಾಡಲಾಗಿದೆ. ಈ ದಂತವು ಅಮೇರಿಕಾದಲ್ಲಿರುವ ದಂತವೈದ್ಯರಾದ ಜಿ.ವೊ.ಪಾಲ್‌ ಇವರ ಬಳಿ ಇತ್ತು. ಅದನ್ನೀಗ ನೆರುಳ್‌ನ ಗುರುದೇವಗಿರಿ ಮಂದಿರದಲ್ಲಿ ಒಂದು ಪ್ರತ್ಯೇಕ ಕೊಣೆಯಲ್ಲಿ ಜೋಪಾನವಾಗಿ ಇರಿಸಲಾಗಿದೆ ಎಂದು ಮಂದಿರದ ಆಡಳಿತ ಮಂಡಳಿಯ ಸದಸ್ಯರೊಬ್ಬರು ನನಗೆ ತಿಳಿಸಿದರು. ಪ್ರದರ್ಶನದ ಜೊತೆಗೆ ಗರುದೇವಗಿರಿ ಮಂದಿರದಲ್ಲಿ ವಿವಿಧ ದಾರ್ಮಿಕ ಕಾರ್ಯಕ್ರಮಗಳೂ ಜರಗಲಿದ್ದು ಗುರುಭಕ್ತರು ಇದರ ಪ್ರಯೋಜನ ಪಡೆದು ಧನ್ಯರಾಗಬಹುದು.
-ಸೋಮನಾಥ ಎಸ್‌.ಕರ್ಕೇರ, 9819321186



Related posts

ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ಕ್ಷೇತ್ರ, ಕಾಸರಗೋಡು, ಮುಂಬೈ ಘಟಕ ಡಿ 21.ಬ್ರಹ್ಮಕಲಶೋತ್ಸವದ ವಿಶೇಷ ಸಭೆ.

Mumbai News Desk

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ವತಿಯಿಂದ ಗುರು ಸಂದೇಶ ಸಾಮರಸ್ಯ ಜಾಥಾ 2025..

Mumbai News Desk

ಮಿಸ್ಟರ್/ಮಿಸ್/ಮಿಸೆಸ್ ಕರ್ನಾಟಕ ಸ್ಟೈಲ್ ಐಕಾನ್‌-2025: ಗ್ರ್ಯಾಂಡ್ ಫಿನಾಲೆ ಡಿ. 18 ರಂದು ನಿಶಿತಾ ಸೂರ್ಯಕಾಂತ್ ಸುವರ್ಣ ಆಯೋಜನೆಯಲ್ಲಿ ‘ಸೀಸನ್‌ 6’ ರ ಅಂತಿಮ ಹಂತ

Mumbai News Desk

ಅ 26 ,27: ಸಾಂತಾಕ್ರೂಜ್ ಪೂರ್ವದ ಶ್ರೀ ಪೇಜಾವರ ಮಠದಲ್ಲಿ ಕೃಷ್ಣ ಜಯಂತಿ ಉತ್ಸವ.

Mumbai News Desk

ಡಿ.10 ರಂದು ಶ್ರೀ ಶಬರಿ ಅಯ್ಯಪ್ಪ ಭಜನಾ ಮಂಡಳಿ ಡೊಂಬಿವಲಿ ಇದರ 10ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ.

Mumbai News Desk

ಶ್ರೀ ಶನೀಶ್ವರ ಮಂದಿರ ಭಟ್ಟಿಪಾಡ ಭಾಂಡುಪ್ : ಜ. 30ರಿಂದ, ಫೆ. 1ರ ತನಕ 41ನೇ ವಾರ್ಷಿಕ ಮಹಾಪೂಜೆ.

Mumbai News Desk