32 C
Mumbai
March 7, 2026
Mumbai News Kannada
ಸುದ್ದಿ

ಉಡುಪಿಯ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ





ಉಡುಪಿಯ ಕುಂಜಿಬೆಟ್ಟುವಿನ ಶಾರದಾ ರೆಸಿಡೆನ್ಸಿ ಶಾಲೆಗೆ ಬಾಂಬ್ ಬೆದರಿಕೆ ಬಂದಿದ್ದು ಈ ಹಿನ್ನೆಲೆಯಲ್ಲಿ ಪೊಲೀಸರುಸ್ಥಳಕ್ಕೆ ಆಗಮಿಸಿ ಶಾಲಾ ಕಟ್ಟಡವನ್ನು ತಪಾಸಣೆ ನಡೆಸುತ್ತಿದ್ದಾರೆ.
ಕುಂಜಿಬೆಟ್ಟು ಎಂಜಿಎಂ ಕಾಲೇಜಿನ ಸಮೀಪದ ಶಾರದಾ ರೆಸಿಡೆನ್ಸಿ ಶಾಲೆಯ ಇಮೇಲ್ ಗೆ ಬಾಂಬ್ ಸ್ಪೋಟದ ಸಂದೇಶ ಬಂದಿದ್ದು ಇದನ್ನು ಗಮನಿಸಿ ಶಾಲಾ ಶಿಕ್ಷಕರು ಕೂಡಲೇ ಮಕ್ಕಳನ್ನು ಶಾಲೆಯಿಂದ ಹೊರಗೆ ಕಳಿಸಿ ಮೈದಾನದಲ್ಲಿ ಇರಿಸಿದ್ದಾರೆ. ಬಾಂಬ್ ಸ್ಪೋಟದ ಬೆದರಿಕೆ ಹಿನ್ನೆಲೆಯಲ್ಲಿ ಉಡುಪಿಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಶ್ವಾನ ದಳದೊಂದಿಗೆ ಶಾಲೆಯ ಸುತ್ತಮುತ್ತ ಪರಿಶೀಲನೆ ನಡೆಸಿದರು, ಆದರೆ ಸಂಬಂಧ ಪಟ್ಟ ಯಾವುದೇ ಸುಳಿವುಗಳು ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಶಾಲೆಯಲ್ಲಿ ಸುಮಾರು 600ಕ್ಕೂ ಅಧಿಕ ಮಕ್ಕಳು ಕಲಿಯುತ್ತಿದ್ದು, ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಈ ಶಾಲೆಯ ಸಮೀಪದಲ್ಲಿರುವ ಎಲ್ಲಾ ವಿದ್ಯಾ ಸಂಸ್ಥೆಯ ಮಕ್ಕಳನ್ನು ಕೂಡ ಹೊರಗಡೆ ಕಳಿಸಲಾಗಿದೆ ಎಂದು ತಿಳಿದುಬಂದಿದೆ.



Related posts

ಮಂಗಳೂರಿನಲ್ಲಿ ಕುಲಾಲ ಭವನ ಲೋಕಾರ್ಪಣೆ: ಸಮಾಜ ಬಾಂಧವರ ಕನಸು ನನಸು

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವತಿಯಿಂದ ಉಡುಪಿಯಲ್ಲಿ ಜರಗಿದ ಯಶಸ್ವಿ ಸರಣಿ ಕಾರ್ಯಕ್ರಮಗಳು

Mumbai News Desk

ಡಾ. ಪಿ.ವಿ. ಶೆಟ್ಟಿ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಮುಂಬೈನಲ್ಲಿ ಭವ್ಯ ಸ್ವಾಗತ

Mumbai News Desk

ತೀಯಾ ಬೆಳಕು ಮಾಜಿ ಸಂಪಾದಕ ಶ್ರೀಧರ್ ಸುವರ್ಣ ಅವರಿಗೆ ಮಾತೃ ವಿಯೋಗ

Mumbai News Desk

ಬಜೆ ಮೊಗವೀರ ಸುವರ್ಣ ಆದಿ ಮೂಲಸ್ಥಾನ, ಮುಂಬಾಯಿ ಶಾಖೆಯ 100ನೇ ಮಹಾಸಭೆ

Mumbai News Desk

ಶಾರದಾ ಎ.ಅಂಚನ್ ಇವರ ವೈದ್ಯಕೀಯ ಕೃತಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ

Mumbai News Desk