30.9 C
Mumbai
June 8, 2026
Mumbai News Kannada
ಸುದ್ದಿ

ಉಡುಪಿಯ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ





ಉಡುಪಿಯ ಕುಂಜಿಬೆಟ್ಟುವಿನ ಶಾರದಾ ರೆಸಿಡೆನ್ಸಿ ಶಾಲೆಗೆ ಬಾಂಬ್ ಬೆದರಿಕೆ ಬಂದಿದ್ದು ಈ ಹಿನ್ನೆಲೆಯಲ್ಲಿ ಪೊಲೀಸರುಸ್ಥಳಕ್ಕೆ ಆಗಮಿಸಿ ಶಾಲಾ ಕಟ್ಟಡವನ್ನು ತಪಾಸಣೆ ನಡೆಸುತ್ತಿದ್ದಾರೆ.
ಕುಂಜಿಬೆಟ್ಟು ಎಂಜಿಎಂ ಕಾಲೇಜಿನ ಸಮೀಪದ ಶಾರದಾ ರೆಸಿಡೆನ್ಸಿ ಶಾಲೆಯ ಇಮೇಲ್ ಗೆ ಬಾಂಬ್ ಸ್ಪೋಟದ ಸಂದೇಶ ಬಂದಿದ್ದು ಇದನ್ನು ಗಮನಿಸಿ ಶಾಲಾ ಶಿಕ್ಷಕರು ಕೂಡಲೇ ಮಕ್ಕಳನ್ನು ಶಾಲೆಯಿಂದ ಹೊರಗೆ ಕಳಿಸಿ ಮೈದಾನದಲ್ಲಿ ಇರಿಸಿದ್ದಾರೆ. ಬಾಂಬ್ ಸ್ಪೋಟದ ಬೆದರಿಕೆ ಹಿನ್ನೆಲೆಯಲ್ಲಿ ಉಡುಪಿಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಶ್ವಾನ ದಳದೊಂದಿಗೆ ಶಾಲೆಯ ಸುತ್ತಮುತ್ತ ಪರಿಶೀಲನೆ ನಡೆಸಿದರು, ಆದರೆ ಸಂಬಂಧ ಪಟ್ಟ ಯಾವುದೇ ಸುಳಿವುಗಳು ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಶಾಲೆಯಲ್ಲಿ ಸುಮಾರು 600ಕ್ಕೂ ಅಧಿಕ ಮಕ್ಕಳು ಕಲಿಯುತ್ತಿದ್ದು, ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಈ ಶಾಲೆಯ ಸಮೀಪದಲ್ಲಿರುವ ಎಲ್ಲಾ ವಿದ್ಯಾ ಸಂಸ್ಥೆಯ ಮಕ್ಕಳನ್ನು ಕೂಡ ಹೊರಗಡೆ ಕಳಿಸಲಾಗಿದೆ ಎಂದು ತಿಳಿದುಬಂದಿದೆ.



Related posts

ಮಹಾಕುಂಭ ಮೇಳಕ್ಕೆ ಹರಿದುಬಂದ ಭಕ್ತ ಸಾಗರ: ತ್ರಿವೇಣಿ ಸಂಗಮದಲ್ಲಿ ಕಾಲ್ತುಳಿತ; ಹಲವರ ಸಾವು ಶಂಕೆ, ಅಮೃತಸ್ನಾನಕ್ಕೆ ತಾತ್ಕಾಲಿಕ ತಡೆ

Mumbai News Desk

ಮುಂಬೈ : ಶ್ರೇಯಸ್ ಆರ್ ಪೂಜಾರಿ ಗೆ Jee Main ನಲ್ಲಿ ಶೇ. 99.36, ಎಚ್ ಎಸ್ ಸಿ ಯಲ್ಲಿ ಶೇ.89 ಅಂಕ

Mumbai News Desk

ಪರಿಶ್ರಮ ಪ್ರಾಮಾಣಿಕತೆಯ ಪ್ರಯತ್ನದ, ಸಂಕಲ್ಪ ಸಿದ್ಧಿಗೆ ದೈವಿಕ ಅನುಗ್ರಹವೇ ಪ್ರೇರಣೆ : ಪೇಜಾವರ ಶ್ರೀ

Mumbai News Desk

ಕೊಂಡೆವೂರು ಶ್ರೀಗಳ 21 ನೇ ಚಾತುರ್ಮಾಸ್ಯ ವ್ರತಾಚರಣೆಉಪ್ಪಳ ಜು:    ಕೊಂಡೆವೂರು

Mumbai News Desk

ಹ್ಯೂಮನ್ ರೈಟ್ಸ್ ಇಂಟರ್ನ್ಯಾಷನಲ್ ಫೆಡರೇಶನ್ ಮಹಾರಾಷ್ಟ್ರ ರಾಜ್ಯ ಅಧ್ಯಕ್ಷರಾಗಿ ಪತ್ರಕರ್ತ ಯೋಗೇಶ್ ಪುತ್ರನ್ ನೇಮಕ

Mumbai News Desk

ಭಾರತ್ ಬ್ಯಾಂಕ್ ನ ಕಾರ್ಯಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣರಿಗೆ ಅತ್ಯುತ್ತಮ ಬ್ಯಾಂಕ್ ಕಾರ್ಯಧ್ಯಕ್ಷ ಪ್ರಶಸ್ತಿ.

Mumbai News Desk