September 6, 2026
Mumbai News Kannada
ಸುದ್ದಿ

ಉಡುಪಿಯ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ





ಉಡುಪಿಯ ಕುಂಜಿಬೆಟ್ಟುವಿನ ಶಾರದಾ ರೆಸಿಡೆನ್ಸಿ ಶಾಲೆಗೆ ಬಾಂಬ್ ಬೆದರಿಕೆ ಬಂದಿದ್ದು ಈ ಹಿನ್ನೆಲೆಯಲ್ಲಿ ಪೊಲೀಸರುಸ್ಥಳಕ್ಕೆ ಆಗಮಿಸಿ ಶಾಲಾ ಕಟ್ಟಡವನ್ನು ತಪಾಸಣೆ ನಡೆಸುತ್ತಿದ್ದಾರೆ.
ಕುಂಜಿಬೆಟ್ಟು ಎಂಜಿಎಂ ಕಾಲೇಜಿನ ಸಮೀಪದ ಶಾರದಾ ರೆಸಿಡೆನ್ಸಿ ಶಾಲೆಯ ಇಮೇಲ್ ಗೆ ಬಾಂಬ್ ಸ್ಪೋಟದ ಸಂದೇಶ ಬಂದಿದ್ದು ಇದನ್ನು ಗಮನಿಸಿ ಶಾಲಾ ಶಿಕ್ಷಕರು ಕೂಡಲೇ ಮಕ್ಕಳನ್ನು ಶಾಲೆಯಿಂದ ಹೊರಗೆ ಕಳಿಸಿ ಮೈದಾನದಲ್ಲಿ ಇರಿಸಿದ್ದಾರೆ. ಬಾಂಬ್ ಸ್ಪೋಟದ ಬೆದರಿಕೆ ಹಿನ್ನೆಲೆಯಲ್ಲಿ ಉಡುಪಿಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಶ್ವಾನ ದಳದೊಂದಿಗೆ ಶಾಲೆಯ ಸುತ್ತಮುತ್ತ ಪರಿಶೀಲನೆ ನಡೆಸಿದರು, ಆದರೆ ಸಂಬಂಧ ಪಟ್ಟ ಯಾವುದೇ ಸುಳಿವುಗಳು ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಶಾಲೆಯಲ್ಲಿ ಸುಮಾರು 600ಕ್ಕೂ ಅಧಿಕ ಮಕ್ಕಳು ಕಲಿಯುತ್ತಿದ್ದು, ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಈ ಶಾಲೆಯ ಸಮೀಪದಲ್ಲಿರುವ ಎಲ್ಲಾ ವಿದ್ಯಾ ಸಂಸ್ಥೆಯ ಮಕ್ಕಳನ್ನು ಕೂಡ ಹೊರಗಡೆ ಕಳಿಸಲಾಗಿದೆ ಎಂದು ತಿಳಿದುಬಂದಿದೆ.



Related posts

ರಾಷ್ಟ್ರೀಯ ನಾಟಕ ಸ್ಪರ್ಧೆ – ಉಡುಪಿಯ ನವಸುಮ ರಂಗಮಂಚ ಕೊಡವೂರು ತಂಡ ಪ್ರಥಮ.

Mumbai News Desk

ಪುಷ್ಪ 2 ಯಶಸ್ಸಿನ ಬೆನ್ನಲ್ಲೇ ನಟ ಅಲ್ಲು ಅರ್ಜುನ್ ಬಂಧನ, ಅಭಿಮಾನಿಗಳು ಶಾಕ್

Mumbai News Desk

ಕುಂಬಳೆ : ಡಿವೈಎಫ್ಐ ಪ್ರ‌ಮುಖ ನಾಯಕಿ, ಯುವ ನ್ಯಾಯವಾದಿ ರಂಜಿತಾ ಆತ್ಮಹತ್ಯೆಗೆ ಶರಣು

Mumbai News Desk

ಭಾಸ್ಕರ ರೈ ಕುಕ್ಕುವಳ್ಳಿ ಅವರಿಗೆ ಹುಟ್ಟೂರ ಸಮ್ಮಾನ – ತಾಳಮದ್ದಳೆ 

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಾರ್ಯಕ್ರಮಕ್ಕೆ ಮಹಾರಾಷ್ಟ್ರದ   ಮುಖ್ಯಮಂತ್ರಿ  ದೇವೇಂದ್ರ ಫಡ್ನವಿಸ್  ಗೆ ಆಹ್ವಾನ

Mumbai News Desk

ಮಹಾರಾಷ್ಟ್ರದಲ್ಲಿ ಈದ್ ಮಿಲಾದ್ ರಜೆ ಸೆ.16 ರ ಬದಲು ಸೆ. 18ಕ್ಕೆ.

Mumbai News Desk