July 22, 2026
Mumbai News Kannada
ಸುದ್ದಿ

ಉಡುಪಿಯ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ







ಉಡುಪಿಯ ಕುಂಜಿಬೆಟ್ಟುವಿನ ಶಾರದಾ ರೆಸಿಡೆನ್ಸಿ ಶಾಲೆಗೆ ಬಾಂಬ್ ಬೆದರಿಕೆ ಬಂದಿದ್ದು ಈ ಹಿನ್ನೆಲೆಯಲ್ಲಿ ಪೊಲೀಸರುಸ್ಥಳಕ್ಕೆ ಆಗಮಿಸಿ ಶಾಲಾ ಕಟ್ಟಡವನ್ನು ತಪಾಸಣೆ ನಡೆಸುತ್ತಿದ್ದಾರೆ.
ಕುಂಜಿಬೆಟ್ಟು ಎಂಜಿಎಂ ಕಾಲೇಜಿನ ಸಮೀಪದ ಶಾರದಾ ರೆಸಿಡೆನ್ಸಿ ಶಾಲೆಯ ಇಮೇಲ್ ಗೆ ಬಾಂಬ್ ಸ್ಪೋಟದ ಸಂದೇಶ ಬಂದಿದ್ದು ಇದನ್ನು ಗಮನಿಸಿ ಶಾಲಾ ಶಿಕ್ಷಕರು ಕೂಡಲೇ ಮಕ್ಕಳನ್ನು ಶಾಲೆಯಿಂದ ಹೊರಗೆ ಕಳಿಸಿ ಮೈದಾನದಲ್ಲಿ ಇರಿಸಿದ್ದಾರೆ. ಬಾಂಬ್ ಸ್ಪೋಟದ ಬೆದರಿಕೆ ಹಿನ್ನೆಲೆಯಲ್ಲಿ ಉಡುಪಿಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಶ್ವಾನ ದಳದೊಂದಿಗೆ ಶಾಲೆಯ ಸುತ್ತಮುತ್ತ ಪರಿಶೀಲನೆ ನಡೆಸಿದರು, ಆದರೆ ಸಂಬಂಧ ಪಟ್ಟ ಯಾವುದೇ ಸುಳಿವುಗಳು ಲಭ್ಯವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಶಾಲೆಯಲ್ಲಿ ಸುಮಾರು 600ಕ್ಕೂ ಅಧಿಕ ಮಕ್ಕಳು ಕಲಿಯುತ್ತಿದ್ದು, ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಈ ಶಾಲೆಯ ಸಮೀಪದಲ್ಲಿರುವ ಎಲ್ಲಾ ವಿದ್ಯಾ ಸಂಸ್ಥೆಯ ಮಕ್ಕಳನ್ನು ಕೂಡ ಹೊರಗಡೆ ಕಳಿಸಲಾಗಿದೆ ಎಂದು ತಿಳಿದುಬಂದಿದೆ.



Related posts

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ, ಡಿ. ಆರ್. ರಾಜು ನಿಧನಕ್ಕೆ ಶ್ರದ್ದಾಂಜಲಿ ಸಭೆ

Mumbai News Desk

ಜೆಸಿಐ ಕಾಪು ಘಟಕಕ್ಕೆ 2026ನೇ ಸಾಲಿನ ನೂತನ ಅಧ್ಯಕ್ಷ : ಜೆಸಿ ವಿಕ್ಕಿ ಪೂಜಾರಿ ಮಡುಂಬು

Mumbai News Desk

“ಪ್ರೇರಣಾ – ಲಿಯೋ PST ಸ್ಕೂಲಿಂಗ್ 2025-26: ಲಿಯೋ ಜಿಲ್ಲಾ 317D ಯಲ್ಲಿ ನಾಯಕತ್ವಕ್ಕೆ ನೂತನ ಪ್ರೇರಣೆ”

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (10/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಯಕ್ಷಗಾನ ರಂಗದ ಅಮರ ಗಂಧರ್ವ ಕಾಳಿಂಗ ನಾವಡರ ಪುಣ್ಯಸ್ಮರಣೆ: ಕರಾವಳಿಯ ಕೋಗಿಲೆಗೆ ನುಡಿನಮನ

Mumbai News Desk

ನಾನಿಲ್ತಾರ್ ಅಭಿಮಾನಿ ಬಳಗ ಮುಂಬೈ. 16 ನೇ ವರ್ಷದ ವರಮಹಾಲಕ್ಷ್ಮಿ ಪೂಜಾಯ ಆಮಂತ್ರಣ ಪತ್ರಿಕೆ ಬಿಡುಗಡೆ,

Mumbai News Desk