32 C
Mumbai
March 7, 2026
Mumbai News Kannada
ಮುಂಬಯಿ

ಪಡುಬಿದ್ರಿ ನಡಿಪಟ್ಣ ಮೊಗವೀರ ಸಭಾ ಮುಂಬಯಿ – ವಾರ್ಷಿಕ ವಿಹಾರ ಕೂಟ






ಪಡುಬಿದ್ರಿ ನಡಿಪಟ್ಣ ಮೊಗವೀರ ಸಭಾ ಮುಂಬಯಿ, ಇದರ ವಾರ್ಷಿಕ ವಿಹಾರಕ್ಕೂಟವು ಜನವರಿ 25 ಮತ್ತು 26ರಂದು ಎರಡು ದಿನಗಳ ಕಾಲ ನ್ಯೂ ಮುಂಬೈ, ಪನ್ವೆಲ್ ಮಾನ್ಸಿ ಫಾರ್ಮ್ ಅಂಡ್ ರೆಸಾರ್ಟ್ ನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಮೊದಲಿಗೆ ದೇವತಾ ಪ್ರಾರ್ಥನೆಯಲ್ಲಿಗೆ ಮಹಿಳಾ ಸದಸ್ಯರಿಂದ ಹಳದಿ ಕುಂಕುಮ ಕಾರ್ಯಕ್ರಮ ನಡೆಯಿತು. ಆ ಬಳಿಕ ಸದಸ್ಯರಿಗೆ, ಮಹಿಳೆಯರಿಗೆ ಮತ್ತು ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಮನೋರಂಜನಾ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಸಂಘದ ಸದಸ್ಯರು, ಮಹಿಳಾ ಸದಸ್ಯರು ಮತ್ತು ಮಕ್ಕಳು ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದರು. ಸದಸ್ಯರಾದ ಪ್ರಮೋದ್ ಮೆಂಡನ್ ಮತ್ತು ತೇಜಪಾಲ್ ಪುತ್ರನ್ ಆಟೋಟ ಮತ್ತು ಇತರ ಸ್ಪರ್ಧೆಗಳನ್ನು ನಡೆಸಿಕೊಟ್ಟರು, ಮತ್ತು ವಿಹಾರಕೂಟದ ಯಶಸ್ವಿಗೆ ಸಹಕರಿಸಿದರು.
ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು.


ಅಧ್ಯಕ್ಷರಾದ ಮಾಧವ ಟಿ ಪುತ್ರನ್ ಮಾತನಾಡಿ ಸಭೆಯ ಮುಂದಿನ ದೇಯೋದ್ದೇಶದ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿ ಸಭೆ ಮತ್ತು ಇತರ ಕಾರ್ಯಕ್ರಮಗಳಲ್ಲಿ ಮಹಿಳಾ ಮತ್ತು ಯುವ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಭೆಯ ಬೆಳವಣಿಗೆಗೆ ಸಹಕಾರ ನೀಡಬೇಕು ಎಂದು ಹೇಳಿದರು. ಹಿರಿಯ ಸದಸ್ಯರಾದ ನ್ಯಾಯವಾದಿ ಕೃಷ್ಣರಾಜ ಆರ್ ಕೋಟ್ಯಾನ್, ಜನಾರ್ಧನ್ ಮೆಂಡನ್, ನಳಿನಿ ಕರ್ಕೆರ ಅವರು ಯೋಗ್ಯ ಸಲಹೆ, ಸೂಚನೆ ನೀಡಿದರು.ಕೊನೆಗೆ ವಂದನಾರ್ಪಣೆಯೊಂದಿಗೆ ವಿಹಾರ ಕೂಟವನ್ನು ಮುಕ್ತಾಯಗೊಳಿಸಲಾಯಿತು.
ಸಂಘದ ಸದಸ್ಯರು, ಮಹಿಳಾ ಸದಸ್ಯರು ಮತ್ತು ಮಕ್ಕಳು ತುಂಬಾ ಉತ್ಸಾಹದಿಂದ ವಿಹಾರ ಕೂಟದಲ್ಲಿ ಭಾಗವಹಿಸಿದ್ದರು.



Related posts

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಮೇಘನಾ ಉಮೇಶ್ ಪೂಜಾರಿ ಗೆ ಶೇ 90.40 ಅಂಕ.

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಡೊಂಬಿವಲಿ ಸ್ಥಳೀಯ ಸಮಿತಿವತಿಯಿಂದ ಸಮಾಜದ ಮಹಿಳೆಯರಿಗಾಗಿ ಆಯೋಜಿಸಿದ ಅರಿಶಿಣ ಕುಂಕುಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ :-

Mumbai News Desk

ಗೋರೆಗಾವ್ ಶ್ರೀ ಶಾಂತ ದುರ್ಗಾ ದೇವಿ ದೇವಸ್ಥಾನ. ಬ್ರಹ್ಮಕಳಸೋತ್ಸವದ ಪ್ರಯುಕ್ತ ಮಂಡಲ ಭಜನೆ ಸಂಪನ್ನ.

Mumbai News Desk

ಶ್ರೀ ದೇವಿ ಯಕ್ಷಕಲಾ ನಿಲಯ ವಿರಾರ್- ನಾಲಾಸೋಪಾರ: ಯಕ್ಷಗಾನ  ಶಿಬಿರ, ಭರತ ನಾಟ್ಯ, ಭಜನೆ,, ಕನ್ನಡ ಕಲಿಕೆ  ಮುಹೂರ್ತ

Mumbai News Desk

ಜ್ಞಾನ ವಿಕಾಸ ಮಂಡಳ ಕಲ್ವಾ, ಇದರ ಆಡಳಿತದ ನ್ಯೂ ಇಂಗ್ಲಿಷ ಸ್ಕೂಲ್ ಗೆ, ಎಸ್ ಎಸ್. ಸಿ ಪರೀಕ್ಷೆಯಲ್ಲಿ ಶೇ 100 ಪಲಿತಾಂಶ.

Mumbai News Desk

ಬಿಲ್ಲವರ ಎಸೋಸಿಯೇಷನ್ ಮುಂಬೈ ಬೊರಿವಲಿ- ದಹಿಸರ್ ಸ್ಥಳೀಯ ಕಚೇರಿ ಮಹಿಳಾ ಸದಸ್ಯರಿಂದ ಅರಸಿನ ಕುಂಕುಮ

Mumbai News Desk