July 23, 2026
Mumbai News Kannada
ಮುಂಬಯಿ

ಪಡುಬಿದ್ರಿ ನಡಿಪಟ್ಣ ಮೊಗವೀರ ಸಭಾ ಮುಂಬಯಿ – ವಾರ್ಷಿಕ ವಿಹಾರ ಕೂಟ








ಪಡುಬಿದ್ರಿ ನಡಿಪಟ್ಣ ಮೊಗವೀರ ಸಭಾ ಮುಂಬಯಿ, ಇದರ ವಾರ್ಷಿಕ ವಿಹಾರಕ್ಕೂಟವು ಜನವರಿ 25 ಮತ್ತು 26ರಂದು ಎರಡು ದಿನಗಳ ಕಾಲ ನ್ಯೂ ಮುಂಬೈ, ಪನ್ವೆಲ್ ಮಾನ್ಸಿ ಫಾರ್ಮ್ ಅಂಡ್ ರೆಸಾರ್ಟ್ ನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಮೊದಲಿಗೆ ದೇವತಾ ಪ್ರಾರ್ಥನೆಯಲ್ಲಿಗೆ ಮಹಿಳಾ ಸದಸ್ಯರಿಂದ ಹಳದಿ ಕುಂಕುಮ ಕಾರ್ಯಕ್ರಮ ನಡೆಯಿತು. ಆ ಬಳಿಕ ಸದಸ್ಯರಿಗೆ, ಮಹಿಳೆಯರಿಗೆ ಮತ್ತು ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಮನೋರಂಜನಾ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಸಂಘದ ಸದಸ್ಯರು, ಮಹಿಳಾ ಸದಸ್ಯರು ಮತ್ತು ಮಕ್ಕಳು ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದರು. ಸದಸ್ಯರಾದ ಪ್ರಮೋದ್ ಮೆಂಡನ್ ಮತ್ತು ತೇಜಪಾಲ್ ಪುತ್ರನ್ ಆಟೋಟ ಮತ್ತು ಇತರ ಸ್ಪರ್ಧೆಗಳನ್ನು ನಡೆಸಿಕೊಟ್ಟರು, ಮತ್ತು ವಿಹಾರಕೂಟದ ಯಶಸ್ವಿಗೆ ಸಹಕರಿಸಿದರು.
ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು.


ಅಧ್ಯಕ್ಷರಾದ ಮಾಧವ ಟಿ ಪುತ್ರನ್ ಮಾತನಾಡಿ ಸಭೆಯ ಮುಂದಿನ ದೇಯೋದ್ದೇಶದ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿ ಸಭೆ ಮತ್ತು ಇತರ ಕಾರ್ಯಕ್ರಮಗಳಲ್ಲಿ ಮಹಿಳಾ ಮತ್ತು ಯುವ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಭೆಯ ಬೆಳವಣಿಗೆಗೆ ಸಹಕಾರ ನೀಡಬೇಕು ಎಂದು ಹೇಳಿದರು. ಹಿರಿಯ ಸದಸ್ಯರಾದ ನ್ಯಾಯವಾದಿ ಕೃಷ್ಣರಾಜ ಆರ್ ಕೋಟ್ಯಾನ್, ಜನಾರ್ಧನ್ ಮೆಂಡನ್, ನಳಿನಿ ಕರ್ಕೆರ ಅವರು ಯೋಗ್ಯ ಸಲಹೆ, ಸೂಚನೆ ನೀಡಿದರು.ಕೊನೆಗೆ ವಂದನಾರ್ಪಣೆಯೊಂದಿಗೆ ವಿಹಾರ ಕೂಟವನ್ನು ಮುಕ್ತಾಯಗೊಳಿಸಲಾಯಿತು.
ಸಂಘದ ಸದಸ್ಯರು, ಮಹಿಳಾ ಸದಸ್ಯರು ಮತ್ತು ಮಕ್ಕಳು ತುಂಬಾ ಉತ್ಸಾಹದಿಂದ ವಿಹಾರ ಕೂಟದಲ್ಲಿ ಭಾಗವಹಿಸಿದ್ದರು.



Related posts

ಬಿಲ್ಲವರ ಅಸೋಸಿಯೇಶನ್, ಮುಂಬೈ ಡೊಂಬಿವಲಿ ಸ್ಥಳೀಯ ಕಚೇರಿ, ಗುರುಪೂರ್ಣಿಮೆ ಆಚರಣೆ – 2024

Mumbai News Desk

ಡಾ. ಪ್ರಾಜ್ಞಾ ಸಾಲ್ಯಾನ್ . ಎಂ. ಡಿ. ಎಸ್. ನಲ್ಲಿ ಉನ್ನತ ಸಾಧನೆ

Mumbai News Desk

ಬಂಟರ ಸಂಘ,  ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಆಟಿದ ಪೊರ್ಲ ತಿರ್ಲ್ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮೇಳೈವಿಸಿದ ಜಾನಪದ ಸಂಸ್ಕೃತಿ

Mumbai News Desk

ಭಾರತ್ ಬ್ಯಾಂಕ್ ಈ ವರ್ಷದ 2024 ಕ್ಯಾಲೆಂಡರ್ ಬಿಡುಗಡೆ.

Mumbai News Desk

ಮೀರಾ-ಭಾಯಂದರ್ ಪರಿಸರದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ದಕ್ಷಿಣ ಭಾರತ ಭವನವನ್ನು ವೀಕ್ಷಿಸಿದ ಶಾಸಕ ಪ್ರತಾಪ್ ಸರ್ನಾಯಕ್

Mumbai News Desk

ಕರ್ನಾಟಕ ಸಂಘ ಡೊಂಬಿವಲಿ: ಪುರಂದರ ದಾಸರ ಆರಾಧನಾ ಮಹೋತ್ಸವ ಹಾಗೂ ಪುರಂದರದಾಸರ ಭಜನಾ ಸ್ಪರ್ಧೆ

Mumbai News Desk