30.5 C
Mumbai
June 8, 2026
Mumbai News Kannada
ಸುದ್ದಿ

ಮುಲ್ಕಿ ಹೊಸ ಆಂಗಣ ತಿಂಗಳ ಬೆಳಕು ಕಾರ್ಯಕ್ರಮ, ದೈವ ಪಾತ್ರಿ ಮಾನಂಪಾಡಿ ಯಾದವ ಪೂಜಾರಿಗೆ ಸನ್ಮಾನ.





ಮುಲ್ಕಿ, ಜ. 30: ಮುಲ್ಕಿಯ ಹೊಸ ಆಂಗಣ ತಿಂಗಳ ಬೆಳಕು ಕಾರ್ಯಕ್ರಮವು ಜ. 29 ರಂದು ಮುಲ್ಕಿ ಪುನರೂರು ಟೂರಿಸ್ಟ್ ಹೋಮ್ ಇದರ ಸಭಾಂಗಣದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಸಾಧಕರ ನೆಲೆಯಲ್ಲಿ ದೈವ ಪಾತ್ರಿ ಮಾನಂಪಾಡಿ ಯಾದವ ಪೂಜಾರಿಯವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅದ್ಯಕ್ಷತೆಯನ್ನು ಕ.ಸಾ.ಪ ಮಾಜಿ ಅದ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ವಹಿಸಿದ್ದರು. ಧಾರ್ಮಿಕತೆಯ ಸೇವೆಯಲ್ಲಿ ನಿರತರಾಗಿರುವವರನ್ನು ಆರಿಸಿ ಸನ್ಮಾನಿಸುವ ಈ ಕಾರ್ಯಕ್ರಮವು ಅರ್ಥಪೂರ್ಣವಾಗಿದೆ ಎಂದು ಕಾರ್ಯಕ್ರಮಕ್ಕೆ ಶುಭಕೋರಿದರು.
ಅತಿಥಿಗಳಾಗಿ ಆಗಮಿಸಿದ್ದ ಮುಲ್ಕಿ ವಿಜಯ ರೈತರ ಸೊಸೈಟಿಯ ಅದ್ಯಕ್ಷ ರಂಗನಾಥ ಶೆಟ್ಟಿ, ಮುಲ್ಕಿ ತಾಲೂಕು ಕ. ಸಾ. ಪ ಹೋಬಳಿ ಅದ್ಯಕ್ಷ ಜೊಸ್ಸಿ ಪಿಂಟೋರವರು ಸಂದರ್ಭೋಚಿತವಾಗಿ ಮಾತನಾಡಿದರು. ಕೆ. ಎಸ್. ರಾವ್ ನಗರದ ಬಿಲ್ಲವ ಸಮಾಜ ಸೇವಾ ಸಂಘದ ಅದ್ಯಕ್ಷ ಮಹಾಬಲ ಸನಿಲ್, ಅತಿಕಾರಿ ಬೆಟ್ಟು ಗ್ರಾಮ ಪಂಚಾಯತ್ ಉಪಾದ್ಯಕ್ಷ ಮನೋಹರ್ ಕೋಟ್ಯಾನ್, ಜಯಪಾಲ್ ಶೆಟ್ಟಿ ಐಕಳ, ಉದ್ಯಮಿ ಜಾನ್ ಕ್ವಾಡ್ರಸ್, ವಿಜಯ ಕುಮಾರ್ ಕುಬೆವೂರು, ಬಂಕಿ ನಾಯಕ್, ರವಿಚಂದ್ರ ಹಾಗೂ ವಾಸು ಪೂಜಾರಿ ಚಿತ್ರಾಪು ಮೊದಲಾದವರು ಉಪಸ್ಥಿತರಿದ್ದರು.
ಹೊಸ ಆಂಗಣ ಪತ್ರಿಕೆಯ ಸಂಪಾದಕ ಹರಿಶ್ಚಂದ್ರ ಪಿ. ಸಾಲ್ಯಾನ್ ಸ್ವಾಗತಿಸಿದರು. ದಿನೇಶ್ ಶೆಟ್ಟಿ ದನ್ಯವಾದ ಅರ್ಪಿಸಿದರು. ರವಿಚಂದ್ರ ಕಾರ್ಯಕ್ರಮ ನಿರೂಪಿಸಿದರು.



Related posts

19ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ – 2024

Mumbai News Desk

ಮೂಲ್ಕಿ ಲಯನ್ಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಹರ್ಷರಾಜ್ ಶೆಟ್ಟಿ ಜಿ ಎಂ ಆಯ್ಕೆ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (31/05/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ : ಕಾಪು ಮಾರಿಯಮ್ಮ ದರುಶನ

Mumbai News Desk

ಡಾ. ಪಿ.ವಿ. ಶೆಟ್ಟಿ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಮುಂಬೈನಲ್ಲಿ ಭವ್ಯ ಸ್ವಾಗತ

Mumbai News Desk

ಸಿ.ಎಮ್.ಎ. ಪರೀಕ್ಷೆಯಲ್ಲಿ ಸೃಷ್ಟಿ ಹಳೆಯಂಗಡಿಗೆ ದೇಶದಲ್ಲೇ 21 ನೇ ಶ್ರೇಣಿ ರಾಷ್ಟ್ರಪತಿಯಿಂದ ಪ್ರಮಾಣ ಪತ್ರ ಸ್ವೀಕಾರ

Mumbai News Desk