September 6, 2026
Mumbai News Kannada
ಸುದ್ದಿ

ಮುಲ್ಕಿ ಹೊಸ ಆಂಗಣ ತಿಂಗಳ ಬೆಳಕು ಕಾರ್ಯಕ್ರಮ, ದೈವ ಪಾತ್ರಿ ಮಾನಂಪಾಡಿ ಯಾದವ ಪೂಜಾರಿಗೆ ಸನ್ಮಾನ.





ಮುಲ್ಕಿ, ಜ. 30: ಮುಲ್ಕಿಯ ಹೊಸ ಆಂಗಣ ತಿಂಗಳ ಬೆಳಕು ಕಾರ್ಯಕ್ರಮವು ಜ. 29 ರಂದು ಮುಲ್ಕಿ ಪುನರೂರು ಟೂರಿಸ್ಟ್ ಹೋಮ್ ಇದರ ಸಭಾಂಗಣದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಸಾಧಕರ ನೆಲೆಯಲ್ಲಿ ದೈವ ಪಾತ್ರಿ ಮಾನಂಪಾಡಿ ಯಾದವ ಪೂಜಾರಿಯವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅದ್ಯಕ್ಷತೆಯನ್ನು ಕ.ಸಾ.ಪ ಮಾಜಿ ಅದ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ವಹಿಸಿದ್ದರು. ಧಾರ್ಮಿಕತೆಯ ಸೇವೆಯಲ್ಲಿ ನಿರತರಾಗಿರುವವರನ್ನು ಆರಿಸಿ ಸನ್ಮಾನಿಸುವ ಈ ಕಾರ್ಯಕ್ರಮವು ಅರ್ಥಪೂರ್ಣವಾಗಿದೆ ಎಂದು ಕಾರ್ಯಕ್ರಮಕ್ಕೆ ಶುಭಕೋರಿದರು.
ಅತಿಥಿಗಳಾಗಿ ಆಗಮಿಸಿದ್ದ ಮುಲ್ಕಿ ವಿಜಯ ರೈತರ ಸೊಸೈಟಿಯ ಅದ್ಯಕ್ಷ ರಂಗನಾಥ ಶೆಟ್ಟಿ, ಮುಲ್ಕಿ ತಾಲೂಕು ಕ. ಸಾ. ಪ ಹೋಬಳಿ ಅದ್ಯಕ್ಷ ಜೊಸ್ಸಿ ಪಿಂಟೋರವರು ಸಂದರ್ಭೋಚಿತವಾಗಿ ಮಾತನಾಡಿದರು. ಕೆ. ಎಸ್. ರಾವ್ ನಗರದ ಬಿಲ್ಲವ ಸಮಾಜ ಸೇವಾ ಸಂಘದ ಅದ್ಯಕ್ಷ ಮಹಾಬಲ ಸನಿಲ್, ಅತಿಕಾರಿ ಬೆಟ್ಟು ಗ್ರಾಮ ಪಂಚಾಯತ್ ಉಪಾದ್ಯಕ್ಷ ಮನೋಹರ್ ಕೋಟ್ಯಾನ್, ಜಯಪಾಲ್ ಶೆಟ್ಟಿ ಐಕಳ, ಉದ್ಯಮಿ ಜಾನ್ ಕ್ವಾಡ್ರಸ್, ವಿಜಯ ಕುಮಾರ್ ಕುಬೆವೂರು, ಬಂಕಿ ನಾಯಕ್, ರವಿಚಂದ್ರ ಹಾಗೂ ವಾಸು ಪೂಜಾರಿ ಚಿತ್ರಾಪು ಮೊದಲಾದವರು ಉಪಸ್ಥಿತರಿದ್ದರು.
ಹೊಸ ಆಂಗಣ ಪತ್ರಿಕೆಯ ಸಂಪಾದಕ ಹರಿಶ್ಚಂದ್ರ ಪಿ. ಸಾಲ್ಯಾನ್ ಸ್ವಾಗತಿಸಿದರು. ದಿನೇಶ್ ಶೆಟ್ಟಿ ದನ್ಯವಾದ ಅರ್ಪಿಸಿದರು. ರವಿಚಂದ್ರ ಕಾರ್ಯಕ್ರಮ ನಿರೂಪಿಸಿದರು.



Related posts

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (11/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಉಡುಪಿ : ನಗರ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಭೀಕರ ಅಗ್ನಿ ಅವಘಡ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಆಶ್ರಯದಲ್ಲಿ ಸಿದ್ದ ಕಣ್ಣಿನ ಹನಿ ಕಾರ್ಯಕ್ರಮ,

Mumbai News Desk

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವದಲ್ಲಿ ಧಾರ್ಮಿಕ ಸಭೆ

Mumbai News Desk

ಸಮಾಜ ಸೇವಕ ಯೋಗೇಶ್ ಕೆ ಹೆಜ್ಮಾಡಿ‌‌ ದಂಪತಿ ಹಾಗೂ  ಗೋಪಾಲ್ ವಿ ಅಂಚನ್ ದಂಪತಿ ಆವರ ದಾಂಪತ್ಯ ಜೀವನದ ಸ್ವರ್ಣ  ಮಹೋತ್ಸವ  ಸಂಭ್ರಮ ಆಚರಣೆ,

Mumbai News Desk

ಕರ್ನಿರೆ ಸುವರ್ಣ ಪ್ರತಿಷ್ಠಾನದಿಂದ ಉದ್ಯಮಿ ಕರ್ನಿರೆ ವಿಶ್ವನಾಥ ಶೆಟ್ಟಿ   ಸಮ್ಮಾನ 

Mumbai News Desk