September 6, 2026
Mumbai News Kannada
ಸುದ್ದಿ

ತಿರುಮಲದಲ್ಲಿ ವಿಜೃಂಭಣೆಯಿಂದ ನಡೆದ ಪುರಂದರ ದಾಸರ ಆರಾಧನ ಮಹೋತ್ಸವ





ಮುಂಬಯಿಯ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಬಾಗಿ.

ಶ್ರೀ ಉಮಾ ಮಹೇಶ್ವರಿ ಭಜನ ಮಂಡಳಿ, ಜರಿಮರಿ ಮುಂಬಯಿ ಇವರು ಸತತ 10 ನೇ ವರ್ಷದ ತಿರುಪತಿ ಯಲ್ಲಿ ಹರಿನಾಮ ಸಂಕೀರ್ತನೆಯಲ್ಲಿ ತಾರೀಕು 28,29 ಹಾಗೂ 30 ರಂದು ತಿರುಪತಿ, ತಿರುಮಲ ದಲ್ಲಿ ದಾಸ ಸಾಹಿತ್ಯ ಪ್ರೊಜೆಕ್ಟ್ ನ ಅಡಿಯಲ್ಲಿ ನಡೆದ ಪುರಂದರದಾಸರ ಆರಾಧನಾ ಮಹೋತ್ಸವದಲ್ಲಿ ಮೂರು ದಿವಸ ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡುರು.

ಶ್ರೀ ಬಗಡಾಲ ಆನಂದತೀರ್ಥ ಆಚಾರ್ಯ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸುಮಾರು 150 ಕಿಂತಲು ಅಧಿಕ ತಂಡಗಳು 5000 ಕಿಂತಲೂ ಅಧಿಕ ಭಜಕರು ದೇಶದ ವಿವಿಧ ಕಡೆಗಳಿಂದ ಆಗಮಿಸಿದ್ದರು.

ವಿವಿಧ ಗಣ್ಯರು, ಯತಿಗಳು, ಭಾಗವಹಿಸಿದ್ದ ಈ 3 ದಿನಗಳಲ್ಲಿ ಕುಕ್ಕೆ ಸುಬ್ರಮಣ್ಯ ಮಠದೀಶರು, ಮಂತ್ರಾಲಯ ಮಠದೀಶರು, ಪಲಿಮಾರು ಮಠ ಹಾಗೂ ಅದಮಾರು ಸ್ವಾಮೀಜಿಗಳು ಉಪಸ್ಥಿತರಿದ್ದು ಆಶೀರ್ವಚನ ನೀಡಿದರು. ದೇಶದ ಸುಪ್ರಸಿದ್ದ ಕಲಾವಿದರು ಸಂಗೀತ ಹಾಗೂ ನೃತ್ಯ ಕಾರ್ಯಕ್ರಮ ನೀಡಿದರು.

ಸುಮಾರು 20 ಸದಸ್ಯರ ತಂಡ ಭುವಾಜಿ ರವೀಂದ್ರ ಶಾಂತಿ ಯವರ ನೇತೃತ್ವದಲ್ಲಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಸ್ವಾಮೀಜಿಗಳ ಆಶೀರ್ವಾದ ಪಡೆದು, 3 ದಿವಸ ವಿವಿಧ ಕಾರ್ಯಕ್ರಮಗಳಲ್ಲಿ, ಹಾಗೂ ಆರಾಧನ ಮಹೋತ್ಸವ, ಭಜನೆ, ಮೆರವಣಿಗೆ ಹಾಗೂ ಪೂಜೆಯಲ್ಲಿ ಪಾಲ್ಗೊಂಡು, ದೇವರ ದರ್ಶನ ಪಡೆದರು.



Related posts

ಸಮಾಜ ಸೇವಕಿ ದಿ. ಸುಮಿತ್ರಾ ರಾಜು ಸಾಲ್ಯಾನ್ ಅವರ ಜನ್ಮದಿನ.ವೃದ್ಧಾಶ್ರಮದಲ್ಲಿ ಆಚರಣೆ.

Mumbai News Desk

ಪಶ್ಚಿಮ ಬಂಗಾಳ ವಿಧಾನಸಭಾ ವಿಸರ್ಜನೆ: ಮಮತಾ ಬ್ಯಾನರ್ಜಿ ರಾಜೀನಾಮೆ ನಿರಾಕರಣೆ ಹಾಗೂ ರಾಜ್ಯಪಾಲರ ಕಠಿಣ ಕ್ರಮ

Mumbai News Desk

ಶಬರಿಮಲೆ ಯಾತ್ರೆಗೆ ಈ ವರ್ಷದಿಂದ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ

Mumbai News Desk

ವೃತ್ತಿಯಲ್ಲಿ ಇಂಜಿನಿಯರಿಂಗ್ ಪ್ರೊಫೆಸರ್, ಪ್ರವೃತ್ತಿಯಲ್ಲಿ ದೈವ ನರ್ತಕ: ಡಾ. ರವೀಶ್ ಪಡುಮಲೆ ಅವರಿಗೆ ಮಂಗಳೂರು ವಿವಿ ಗೌರವ

Mumbai News Desk

ಯಕ್ಷ ಪ್ರೇಮಿಗಳ, ಕಲಾಭಿಮಾನಿಗಳ ಮನ ಗೆದ್ದ ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಸದಸ್ಯರ ಯಕ್ಷಗಾನ.

Mumbai News Desk

ಶಿವ ಸೇನಾ ನೇತಾರ, ಮಾಜಿ ಶಾಸಕ ಶ್ರೀಕಾಂತ್ ಸರ್ಮಳ್ಕರ್ ನಿಧನ

Mumbai News Desk