July 23, 2026
Mumbai News Kannada
ಸುದ್ದಿ

ತಿರುಮಲದಲ್ಲಿ ವಿಜೃಂಭಣೆಯಿಂದ ನಡೆದ ಪುರಂದರ ದಾಸರ ಆರಾಧನ ಮಹೋತ್ಸವ







ಮುಂಬಯಿಯ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಬಾಗಿ.

ಶ್ರೀ ಉಮಾ ಮಹೇಶ್ವರಿ ಭಜನ ಮಂಡಳಿ, ಜರಿಮರಿ ಮುಂಬಯಿ ಇವರು ಸತತ 10 ನೇ ವರ್ಷದ ತಿರುಪತಿ ಯಲ್ಲಿ ಹರಿನಾಮ ಸಂಕೀರ್ತನೆಯಲ್ಲಿ ತಾರೀಕು 28,29 ಹಾಗೂ 30 ರಂದು ತಿರುಪತಿ, ತಿರುಮಲ ದಲ್ಲಿ ದಾಸ ಸಾಹಿತ್ಯ ಪ್ರೊಜೆಕ್ಟ್ ನ ಅಡಿಯಲ್ಲಿ ನಡೆದ ಪುರಂದರದಾಸರ ಆರಾಧನಾ ಮಹೋತ್ಸವದಲ್ಲಿ ಮೂರು ದಿವಸ ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡುರು.

ಶ್ರೀ ಬಗಡಾಲ ಆನಂದತೀರ್ಥ ಆಚಾರ್ಯ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸುಮಾರು 150 ಕಿಂತಲು ಅಧಿಕ ತಂಡಗಳು 5000 ಕಿಂತಲೂ ಅಧಿಕ ಭಜಕರು ದೇಶದ ವಿವಿಧ ಕಡೆಗಳಿಂದ ಆಗಮಿಸಿದ್ದರು.

ವಿವಿಧ ಗಣ್ಯರು, ಯತಿಗಳು, ಭಾಗವಹಿಸಿದ್ದ ಈ 3 ದಿನಗಳಲ್ಲಿ ಕುಕ್ಕೆ ಸುಬ್ರಮಣ್ಯ ಮಠದೀಶರು, ಮಂತ್ರಾಲಯ ಮಠದೀಶರು, ಪಲಿಮಾರು ಮಠ ಹಾಗೂ ಅದಮಾರು ಸ್ವಾಮೀಜಿಗಳು ಉಪಸ್ಥಿತರಿದ್ದು ಆಶೀರ್ವಚನ ನೀಡಿದರು. ದೇಶದ ಸುಪ್ರಸಿದ್ದ ಕಲಾವಿದರು ಸಂಗೀತ ಹಾಗೂ ನೃತ್ಯ ಕಾರ್ಯಕ್ರಮ ನೀಡಿದರು.

ಸುಮಾರು 20 ಸದಸ್ಯರ ತಂಡ ಭುವಾಜಿ ರವೀಂದ್ರ ಶಾಂತಿ ಯವರ ನೇತೃತ್ವದಲ್ಲಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಸ್ವಾಮೀಜಿಗಳ ಆಶೀರ್ವಾದ ಪಡೆದು, 3 ದಿವಸ ವಿವಿಧ ಕಾರ್ಯಕ್ರಮಗಳಲ್ಲಿ, ಹಾಗೂ ಆರಾಧನ ಮಹೋತ್ಸವ, ಭಜನೆ, ಮೆರವಣಿಗೆ ಹಾಗೂ ಪೂಜೆಯಲ್ಲಿ ಪಾಲ್ಗೊಂಡು, ದೇವರ ದರ್ಶನ ಪಡೆದರು.



Related posts

ಮಾರಣಕಟ್ಟೆ ಮೇಳದ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ‘ ರಾಮಾಂಜನೇಯ.. ಕನಕಾಂಗಿ ಕಲ್ಯಾಣ’ ಯಕ್ಷಗಾನ ಪ್ರದರ್ಶನ

Mumbai News Desk

ರಹೀಂ ಹತ್ಯೆ ಘಟನೆ ನೆಪದಲ್ಲಿ ಹಿಂದೂ ನಾಯಕರ ಧ್ವನಿ ಅಡಗಿಸುವ ಷಡ್ಯಂತ್ರ, ರಾಜ್ಯ ಪೊಲೀಸ್ ಮಹಾನಿರ್ದೇಶ ರಿಗೆ ಮನವಿ

Mumbai News Desk

ಉಡುಪಿ : ಪೊಲೀಸರಿಂದ ಯುವತಿಗೆ ಹಲ್ಲೆ ಪ್ರಕರಣ, ಬಿಲ್ಲವ ಸಮುದಾಯದ ಆಕ್ರೋಶ – ಘಟನೆಯ ಹಿನ್ನೆಲೆ ಏನು?

Mumbai News Desk

ನೆಲೆ ಫೌಂಡೇಶನ್ ಗೆ 11ನೇ ಮೂಲತ್ವ ವಿಶ್ವ ಪ್ರಶಸ್ತಿ ಪ್ರದಾನ : ಮೂಲತ್ವ ಪೌಂಡೇಶನ್ ನ ಕಾರ್ಯ ಶ್ಲಾಘನೀಯ – ಆರ್ ಎಸ್ ಎಸ್ ಮುಖಂಡ ವಾಮನ್ ಶೆಣೈ ಅಭಿಮತ

Mumbai News Desk

ಸರ್ಕಾರಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ- ಪಟ್ಲ ಸತೀಶ್ ಶೆಟ್ಟಿ

Mumbai News Desk

ಅಂಚೆ ಜನ ಸಂಪರ್ಕ ಅಭಿಯಾನ: ಕಂಬದ ಕೋಣೆ- ಕಾಲ್ತೊಡು

Mumbai News Desk