30.5 C
Mumbai
June 8, 2026
Mumbai News Kannada
ಪ್ರಕಟಣೆ

ಡೊಂಬಿವಿಲಿಯಲ್ಲಿನ ವರದ ಸಿದ್ಧಿವಿನಾಯಕ ಮಂದಿರದಲ್ಲಿ  ಫೆ.01 ರಂದು ಮಾಘಿ ಗಣೇಶೋತ್ಸವ ಮತ್ತು ಯಕ್ಷಗಾನ ಪ್ರದರ್ಶನ





ಸುದ್ದಿ ವಿವರ : ಪಿ.ಆರ್.ರವಿಶಂಕರ್  8483980035

        ಡೊಂಬಿವಿಲಿ : ವರ್ಷದುದ್ದಕ್ಕೂ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಜರಗಿಸುತ್ತಾ ಬಂದಿರುವ ಡೊಂಬಿವಿಲಿ ಪೂರ್ವದ ಪ್ರತಿಷ್ಟಿತ  ಶ್ರೀ ವರದ ಸಿದ್ಧಿವಿನಾಯಕ  ಸೇವಾ ಮಂಡಲವು ತಮ್ಮ ಪರಿಸರದಲ್ಲಿನ ಶ್ರೀ ಮಹಾಗಣಪತಿ ಮಂದಿರದಲ್ಲಿ ಈ ವರ್ಷದ ಮಾಘ ಮಾಸದಲ್ಲಿನ ಗಣೇಶ ಉತ್ಸವವನ್ನು ಆಚರಿಸಲಿದೆ.

ಇದೇ ಫೆಬ್ರುವರಿ ತಾ.01 ಶನಿವಾರದಂದು ಪ್ರಾತಃ ಕಾಲದ ಗಣಹೋಮದೊಂದಿಗೆ ಆರಂಭವಾಗುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮದ್ಯಾಹ್ನದ ಮಹಾ ಮಂಗಳ ಆರತಿಯೊಂದಿಗೆ ಪೂರ್ಣಗೊಳ್ಳಲಿದ್ದು , ಬಳಿಕ ಪ್ರಸಾದ ರೂಪದಲ್ಲಿ  ಅನ್ನಸಂತರ್ಪಣೆ ಜರಗಲಿದೆ.

     ಅಪರಾಹ್ನ 2.30 ರ ಬಳಿಕ ಶ್ರೀ ವರದ ಸಿದ್ಧಿವಿನಾಯಕ ಸೇವಾ ಮಂಡಲ ಹಾಗೂ ಶ್ರೀ ಸಚ್ಚಿದಾನಂದ ಸರಸ್ವತೀ ಕೃಪಾ ಪೋಷಿತ ಯಕ್ಷಗಾನ ಮಂಡಳಿ ಮುಂಬೈ  ಇವರ ಜಂಟಿ ಆಶ್ರಯದಲ್ಲಿ  ಇತ್ತೀಚೆಗೆ ಅಗಲಿದ ಯಕ್ಷಗಾನ ಕಲಾವಿದ ಹಾಗೂ ಯಕ್ಷಗುರು ದಿ.ಕುಕ್ಕೇಹಳ್ಳಿ ವಿಠಲ ಪ್ರಭು ಇವರ ಸ್ಮರಣಾರ್ಥ , ಪೌರಾಣಿಕ ಯಕ್ಷಗಾನ ಕಥಾನಕ ಭೀಷ್ಮ ವಿಜಯ         (ಬಡಗು ತಿಟ್ಟು)  ಆಡಿತೋರಿಸಲಿರುವರು.

ಯಕ್ಷಗಾನದ ಮೊದಲು  ಜರಗಲಿರುವ ಕಿರು ಸಭಾ ಕಾರ್ಯಕ್ರಮದಲ್ಲಿ ಆಮಂತ್ರಿತ ಗಣ್ಯ ಅತಿಥಿಗಳು ಭಾಗವಹಿಸಲಿರುವರು.

ಡೊಂಬಿವಿಲಿ ಪೂರ್ವದ ಭೋಪರ್ ರೋಡ್ , ನಾಂದಿವಲಿ ಯಲ್ಲಿನ ಶ್ರೀ  ವರದಸಿದ್ಧಿ ವಿನಾಯಕ ಸೇವಾಭವನದಲ್ಲಿ ಕಾರ್ಯಕ್ರಮ ಜರಗಲಿದ್ದು  ಭಕ್ತಾಭಿಮಾನಿಗಳು ಹಾಗೂ ಯಕ್ಷಕಲಾ ರಸಿಕ ಪ್ರೇಕ್ಷಕರು ಎರಡೂ ಕಾರ್ಯಕ್ರಮಗಳಿಗೆ ಬಂದು ಭಾಗವಹಿಸ ಬೇಕಾಗಿ  ಆಯೋಜಕರು ಪ್ರಕಟಣೆಯ ಮೂಲಕ ವಿನಂತಿ ಮಾಡಿಕೊಂಡಿದ್ದಾರೆ.

     ಸುದ್ದಿ ವಿವರ :ಪಿ.ಆರ್.ರವಿಶಂಕರ್



Related posts

ಡೊಂಬಿವಲಿ: ಫೆ. 14ರಂದು ಶ್ರೀ ಜೈ ಭವಾನಿ ಶನೀಶ್ವರ ಮಂದಿರದ 36ನೇ ವಾರ್ಷಿಕ ಮಂಗಳೋತ್ಸವ

Mumbai News Desk

ನ.17 ರಂದು ಕರ್ನಾಟಕ ಸಂಘ ಡೊಂಬಿವಲಿ ಕ್ರೀಡಾ ವಿಭಾಗದ ವಾರ್ಷಿಕ ಕ್ರೀಡೋತ್ಸವ ದಂಗಲ್ 2024

Mumbai News Desk

ಜೂ. 23ಕ್ಕೆ ಸಾರಂತಾಯ ಗರೋಡಿ, ಉಲ್ಲಾಯ ದೈವಸ್ಥಾನ, ಸಸಿಹಿತ್ಲು, ಇದರ ಜೀರ್ಣೋದ್ಧಾರದ ಸಭೆ,

Mumbai News Desk

ಶ್ರೀ ಹಳೇ ಮಾರಿಯಮ್ಮ ದೇವಸ್ಥಾನ ಕಾಪು : ಅ. 3ರಿಂದ ಶರನ್ನವತಾತ್ರಿ ಮಹೋತ್ಸವ.

Mumbai News Desk

ಬಂಟ್ಸ್ ಪೊರಮ್ ಮೀರಾಭಾಯಂದರ್:ಆ 7 ರಂದು “ಭೀಷ್ಮ ವಿಜಯ” ಯಕ್ಷಗಾನ ತಾಳಮದ್ದಳೆ.

Mumbai News Desk

ಮೀರಾಗಾಂವ್: ಜ.1ರಂದು ಸಾರ್ವಜನಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

Mumbai News Desk