32 C
Mumbai
March 7, 2026
Mumbai News Kannada
ಪ್ರಕಟಣೆ

ದೇವಾಡಿಗ ಸಂಘ ಮುಂಬಯಿ: ಪೆ. 2 ರಂದು ಶ್ರೀರಾಮದೇವರ ಪೂಜೆಸ್ಥಾನದ ಪುನರ್ ಪ್ರತಿಷ್ಠೆ






ಮುಂಬೈಯ ಪ್ರತಿಷ್ಠಿತ ಸಂಘಟನೆಗಳಲ್ಲಿ ಒಂದಾದ, ಶತಮಾನೋತ್ಸವದ ಸಂಭ್ರಮದಲ್ಲಿರುವ ದೇವಾಡಿಗ ಸಂಘದ ಸಂಚಾಲಕತ್ವದ ಶ್ರೀರಾಮ ಭಜನಾ ಮಂಡಳಿ ಆರಾಧಿಸಿಕೊಂಡು ಬರುತ್ತಿರುವ ಶ್ರೀರಾಮದೇವರ ಪೂಜಾ ಕೇಂದ್ರದ ಪುನರ್ ಪ್ರತಿಷ್ಠೆ ಫೆ. 2 ರಂದು ಆದಿತ್ಯವಾರ ಬೆಳಿಗ್ಗೆ 7 ಗಂಟೆಗೆ ನವಿ ನವಿ ಮುಂಬೈಯ ನೇರುಲ್ ನ ಸೆಕ್ಟರ್ 12ರಲ್ಲಿರುವ ದೇವಾಡಿಗ ಭವನ ಮಾರ್ಗ, ದೇವಾಡಿಗ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮ :
ಅಂದು ಬೆಳಿಗ್ಗೆ 7 ಗಂಟೆಯಿಂದ ವಾಸ್ತು ಹೋಮ, ಗಣ ಹೋಮ, ಪುನರ್ ಪ್ರತಿಷ್ಟಾಪನೆಯಾದ ಬಳಿಕ ತೀರ್ಥ ಪ್ರಸಾದ, ಭಜನಾ-ಸಂಕೀರ್ತನೆ, ಮಂಗಳದ ಬಳಿಕ ಅನ್ನ ಸಂತರ್ಪಣೆ.
ಶ್ರೀ ರಾಮ ಭಜನಾ ಮಂಡಳಿಯ ಪುನರ್ ಪ್ರತಿಷ್ಠೆಯ ಎಲ್ಲಾ ಧಾರ್ಮಿಕ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಶ್ರೀ ರಾಮ ದೇವರ ಕೃಪೆಗೆ ಪಾತ್ರರಾಗುವಂತೆ, ದೇವಾಡಿಗ ಸಂಘದ ಅಧ್ಯಕ್ಷರಾದ ಶ್ರೀ ಪ್ರವೀಣ್ ಎನ್ ದೇವಾಡಿಗ, ಗೌರವ ಪ್ರಧಾನ ಕಾರ್ಯದರ್ಶಿ ಶ್ರೀ ವಿಶ್ವನಾಥ್ ಬಿ ದೇವಾಡಿಗ ಹಾಗೂ ಮಂಡಳಿಯ ಸಂಯೋಜಕರಾದ ನ್ಯಾಯವಾದಿ ಶ್ರೀ ಪ್ರಭಾಕರ್ ಎಸ್ ದೇವಾಡಿಗ ಇವರು ಪ್ರಕಟಣೆ ಮೂಲಕ ಕೇಳಿಕೊಂಡಿದ್ದಾರೆ



Related posts

ಡಿ14. ಯುಎಇ ಬಂಟ್ಸ್‌ನ 48ನೇ ವರ್ಷದ “ಭಾವೈಕ್ಯ ಬಂಟರ ಮಹಾಸಮಾಗಮ”

Mumbai News Desk

ಒಕ್ಕಲಿಗರ ಸಂಘ ಮಹಾರಾಷ್ಟ್ರ: ಜ. 18ರಂದು ಸಂಕ್ರಾಂತಿ ಸಂಭ್ರಮ .

Mumbai News Desk

ಜ. 26 ; ಜೈ ಶ್ರೀ ವಿಶ್ವಕರ್ಮ ಭಜನಾ ಮಂಡಳಿ ಯ 15ನೇ ವಾರ್ಷಿಕೋತ್ಸವ

Mumbai News Desk

ಡಿ.10 ರಂದು ಚಿತ್ರಪು ಬಿಲ್ಲವರ ಸಂಘ (ರಿ) ಮುಂಬಯಿ, 78ನೇ ವಾರ್ಷಿಕ ಮಹಾಸಭೆ

Mumbai News Desk

ಪೆ 9: ಮೀರಾ – ಡಹಾಣು ಬಂಟ್ಸ್ ಕ್ರೀಡೋತ್ಸವ 2025

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ, ಎ. 12ಕ್ಕೆ ಏಕಾಹ ಭಜನೆ

Mumbai News Desk