September 6, 2026
Mumbai News Kannada
ಮುಂಬಯಿ

ಬಿಲ್ಲವರ ಅಸೋಸಿಯೇಶನ್ ಮುಂಬಯಿ ಡೊಂಬಿವಲಿ ಸ್ಥಳೀಯ ಕಛೇರಿ : ಹಳದಿ ಕುಂಕುಮ ಕಾರ್ಯಕ್ರಮ





ಬಿಲ್ಲವರ ಅಸೋಸಿಯೇಶನ್ ಮುಂಬಯಿ ಡೊಂಬಿವಲಿ ಸ್ಥಳೀಯ ಕಛೇರಿಯಲ್ಲಿ ಮಹಿಳೆಯರಿಂದ ಹಳದಿ ಕುಂಕುಮ ಕಾರ್ಯಕ್ರಮವು ದಿನಾಂಕ
02.02.2025 ರಂದು ಆದಿತ್ಯವಾರ ಸಂಜೆ 3.00 ಗಂಟೆಗೆ ಸರಿಯಾಗಿ ಜರಗಿತು.
ಪ್ರಾರಂಭದಲ್ಲಿ ಅರ್ಚಕರಾದ ಐತಪ್ಪ ಸುವರ್ನರಿಂದ ಗುರು ಪೂಜೆ ಜರಗಿತು, ತದ ನಂತರ ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಅಧ್ಯಕ್ಷರಾದ ಹರೀಶ್ ಜಿ ಅಮೀನ್ ರವರು ದ್ವೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಪುರುಷೋತ್ತಮ್ ಎಸ್ ಕೋಟ್ಯನ್ , ಗೌ. ಪ್ರ. ಕಾರ್ಯದರ್ಶಿ ಹರೀಶ್ ಸಾಲ್ಯಾನ್ ಮತ್ತು ಸ್ಥಳೀಯ ಕಛೇರಿಯ ಕಾರ್ಯಾಧ್ಯಕ್ಷರಾದ ಶ್ರೀಧರ್ ಬಿ ಅಮೀನ್ ಮತ್ತು ಉಪ ಕಾರ್ಯಾಧ್ಯಕ್ಷರಾದ ಚಂದ್ರಹಾಸ್ ಎಸ್ ಪಾಲನ್, ಗೌ.ಕಾರ್ಯಾಧ್ಯಕ್ಷರಾದ ಮಂಜಪ್ಪ ಪೂಜಾರಿಯವರು ಉಪಸ್ಥಿತರಿದ್ದು ಸಹಕರಿಸಿದರು.
ನಂತರ ಮಹಿಳಾ ವಿಭಾಗದವರಿಂದ ಭಜನಾ ಕಾರ್ಯಕ್ರಮ ಜರಗಿತು.
ಬಳಿಕ ಜರಗಿದ ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀಧರ್ ಬಿ ಅಮೀನ್ ವಹಿಸಿದರು, ಮುಖ್ಯ ಅತಿಥಿಯಾಗಿ ಪ್ರವಿಣಿ ದಯಾನಂದ ಸಾಲ್ಯಾನ್ ಮತ್ತು ಮಮತ ನವೀನ್ ಅಂಚನ್ ಉಪಸ್ಥಿತರಿದ್ದರು . ಮಾತ್ರವಲ್ಲದೆ ಕೇಂದ್ರ ಕಛೇರಿಯ ಪ್ರತಿನಿಧಿಯಾಗಿ ಪೂಜಾ ಪುರುಷೋತ್ತಮ್ ಕೋಟ್ಯಾನ್ ಉಪಸ್ತಿತರಿದ್ದರು.

ಮಹಿಳಾ ವಿಭಾಗದವರಿಂದ ಪ್ರಾರ್ಥನೆ ಆದ ನಂತರ ದೇವಿಕಾ ಕೆ ಸಾಲ್ಯಾನ್ ರವರು ಸ್ವಾಗತಿಸಿದರು. ವಿನೋದ ಪೂಜಾರಿ ಮತ್ತು ಗುಣವತಿ ಪೂಜಾರಿ

ಅತಿಥಿಗಳನ್ನು ಪರಿಚಯಿಸಿದರು. ಅತಿಥಿ ಯಾಗಿ ಬಂದ ಪ್ರವೀನಿ ದಯಾನಂದ ಸಾಲ್ಯಾನ್ ಹಳದಿ ಕುಂಕುಮದ ಬಗ್ಗೆ ಮನವರಿಕೆ ಮಾಡಿ ತನ್ನ ಅಧ್ಯಾಪಕ ವೃತ್ತಿಯನ್ನು ತಾನು ಪಟ್ಟ ಪರಿಶ್ರಮವನ್ನು ವಿವರಿಸಿದರು, ಈ ಕಾರ್ಯಕ್ರಮಕ್ಕೆ ದೇಣಿಗೆ ನೀಡಿ ಸಹಕರಿಸಿದ ಮಹಿಳೆಯರನ್ನು ಹೂ ಗುಚ್ಚ ನೀಡಿ ಗೌರವಿಸಲಾಯಿತು.


ಅಧ್ಯಕ್ಷರಾದ ಶ್ರೀಧರ್ ಬಿ ಅಮೀನ್ ರವರು ಮಹಿಳೆಯರು ಆಯೋಜಿಸಿದ ಹಳದಿ ಕುಂಕುಮ ಕಾರ್ಯಕ್ರಮವನ್ನು ಅಭಿನಂದಿಸಿದರು. ವೇದಿಕೆಯಲ್ಲಿ ಗೌ. ಕಾರ್ಯಾಧ್ಯಕ್ಷರಾದ ಮಂಜಪ್ಪ ಪೂಜಾರಿ, ಉಪ ಕಾರ್ಯಾಧ್ಯಕ್ಷರಾದ ಚಂದ್ರಹಾಸ್ ಪಾಲನ್, ಗೌ. ಕೋಶಾಧಿಕಾರಿ ಆನಂದ್ ಪೂಜಾರಿಯವರು ಉಪಸ್ತಿತರಿದ್ದರು.
ಕೊನೆಗೆ ಶ್ರೀಮತಿ ವಸಂತಿ ಪೂಜಾರಿಯವರು ವಂದಿಸಿದರು.
ಗೌ. ಕಾರ್ಯದರ್ಶಿ ಜೆ ಜೆ ಕೋಟ್ಯಾನ್ ಪ್ರಾಸ್ತಾವಿಕ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು.



Related posts

SSC ಪರೀಕ್ಷೆ ಯಲ್ಲಿ ನಿಶಾನ್ ಜಗದೀಶ್ ಶೆಟ್ಟಿ 96.20(97) ಶೇಕಡಾ ಅಂಕ

Mumbai News Desk

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ – ಆಟಿಡ್ ಒಂಜಿ ದಿನತ ಸಂಭ್ರಮ

Mumbai News Desk

ನಾಲಾಸೋಪಾರ ದ ಉದ್ಯಮಿ, ಸಮಾಜ ಸೇವಕ. ಸಂಘಟಕ,  ಶಶಿಧರ. ಕೆ ಶೆಟ್ಟಿ ಇನ್ನಂಜೆಯವರಿಗೆ ಪೋಲಿಸ್ ಇಲಾಖೆಯ ಅತ್ಯುತ್ತಮ  ಸೇವಕರ್ತ ಪ್ರಶಸ್ತಿ ಪ್ರದಾನ .

Mumbai News Desk

ತುಳು ಸಂಘ ಬೋರಿವಲಿ ವತಿಯಿಂದ ಬೋರಿವಲಿ ಪಶ್ಚಿಮದಲ್ಲಿ ಸ್ವಚ್ಛತಾ ಅಭಿಯಾನ

Mumbai News Desk

ಕನ್ನಡ ನವತಾರಾ ಕಲಾ ಮಂಡಳಿ ಮಲಾಡ್ (ಪ): 51ನೇ ವಾರ್ಷಿಕ ಮಹಾಪೂಜೆ, ಸಾಧಕರಿಗೆ ಸನ್ಮಾನ ಹಾಗೂ ಯಕ್ಷಗಾನ

Mumbai News Desk

ಸಾಂತಾಕ್ರೂಜ್ ಪೂರ್ವದ ಪೇಜಾವರ ಮಠದಲ್ಲಿ  ಶ್ರೀಕೃಷ್ಣ ಜನ್ಮಾಷ್ಟಮಿ, ವಿಟ್ಲಪಿಂಡಿ -ಮೊಸರು ಕುಡಿಕೆ ಸಂಭ್ರಮ, ಭಕ್ತಿ ಸಂಗೀತ ಕಾಠ್ಯಕ್ರಮ,

Mumbai News Desk