30.9 C
Mumbai
June 8, 2026
Mumbai News Kannada
ಪ್ರಕಟಣೆ

ಪೆ 9: ಮೀರಾ – ಡಹಾಣು ಬಂಟ್ಸ್ ಕ್ರೀಡೋತ್ಸವ 2025





ಮೀರಾ ರೋಡ್ ನಿಂದ ಡಹಾಣು ತನಕದ ಬಂಟ ಭಾಂದವರ ಅಶೋತ್ತರಗಳಿಗೆ ಸ್ಪಂದಿಸಲು 2009 ರಲ್ಲಿ ಸ್ಥಾಪನೆಯದ ಮೀರಾ – ಡಹಾಣು ಬಂಟ್ಸ್ (ರಿ ) ಇದರ 3 ನೇ ವರ್ಷದ ಕ್ರೀಡೋತ್ಸವ – 2025, ಫೆ 09 ರಂದು ಆದಿತ್ಯವಾರ, ಹಳೆ ವಿವಾ ಕಾಲೇಜು ಗ್ರೌಂಡ್ ವಿರಾರ್ ಪಶ್ಚಿಮ ಇಲ್ಲಿ ಅದ್ದೂರಿಯಾಗಿ ನಡೆಯಲಿದೆ.
ಈ ಕ್ರೀಡಾಕೂಟದಲ್ಲಿ ಮೀರಾ ರೋಡ್ ನಿಂದ ಡಹಾಣು ತನಕ ಎಲ್ಲಾ ಬಂಟ ಭಾಂದವರಿಗೆ ಭಾಗವಹಿಸಲು ಅವಕಾಶ ಕಲ್ಪಿಸುವ ಸಲುವಾಗಿ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಎಲ್ಲಾ ಕ್ರೀಡಾಳುಗಳಿಗೆ ಕ್ರೀಡೋತ್ಸವಕ್ಕೆ ಆಗಮಿಸಲು ಸುಲಭವಾಗಲು ವಿರಾರ್ ರೈಲ್ವೆ ಸ್ಟೇಷನ್ ನಿಂದ ಬಹಳ ಹತ್ತಿರದಲ್ಲಿ ಇರುವ ವಿಶಾಲವಾದ ಆಟದ ಮೈದಾನ ಹೊಂದಿರುವ ಹಳೆ ವಿವಾ ಕಾಲೇಜು ಸಂಸ್ಥೆಯ ಮೈದಾನದಲ್ಲಿ ಸಂಸ್ಥೆಯ ಪದಾಧಿಕಾರಿಗಳು ಮತ್ತು ಸದಸ್ಯರು ಹಮ್ಮಿಕೊಳ್ಳಲು ನಿರ್ಧರಿಸಿರುತ್ತಾರೆ. ಈ ಕ್ರೀಡಾ ಕೂಟವು ಸಂಸ್ಥೆಯ ಅಧ್ಯಕ್ಷರಾದ ಪ್ರಕಾಶ್ ಎಂ ಹೆಗ್ಡೆ ಯವರ ಅದ್ಯಕ್ಷತೆಯಲ್ಲಿ ಗೌರವಧ್ಯಕ್ಷರಾದ ವಿರಾರ್ ಡಾ.ಶಂಕರ ಬಿ ಶೆಟ್ಟಿಯವರ ಉಪಸ್ಥಿತಿಯಲ್ಲಿ ಮುಂಬೈ ಮತ್ತು ಸ್ಥಳೀಯ ಗೌರನ್ವಿತ ಅತಿಥಿಗಳ ಉಪಸ್ಥಿತಿಯಲ್ಲಿ ಬೆಳ್ಳಿಗೆ 8 ಕ್ಕೆ ಪ್ರಾರಂಭ ಗೊಂಡು ಸಂಜೆ 6 ಗಂಟೆ ಗೆ ಸಮಾರೋಪ ಸಮಾರಂಭದೊಂದಿಗೆ ಕ್ರೀಡಾಕೂಟ ಮುಕ್ತಾಯಗೊಳ್ಳಲಿದೆ.
ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಬಂಟ ಸಮುದಾಯದ ನಾಯಕರು ಸ್ಥಳೀಯ ರಾಜಕೀಯ ನೇತಾರರು. ಉದ್ಯಮಿಗಳು ಮತ್ತು ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿರುವರು.
ಈ ಕ್ರೀಡೋತ್ಸವಕ್ಕೆ ಕ್ರೀಡಾ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮೀರಾ ಡಹಾಣು ಬಂಟ್ಸ್ ಕ್ರೀಡೋತ್ಸವ- 2025ನ್ನು ಯಶಸ್ವಿ ಗೊಳಿಸಬೇಕಾಗಿ ಗೌರವಧ್ಯಕ್ಷರು ವಿರಾರ್ ಶಂಕರ್ ಶೆಟ್ಟಿ,ಅಧ್ಯಕ್ಷರು ಪ್ರಕಾಶ್ ಹೆಗ್ಡೆ, ಉಪಾಧ್ಯಕ್ಷರಾದ ಶಂಕರ್ ಆಳ್ವ ಕರ್ನೂರು,
ಸಂಚಾಲಕ, ಕ್ರೀಡಾ ವಿಭಾಗದ ಕಾರ್ಯಾಧ್ಯಕ್ಷ
ಮುಕೇಶ್ ಶೆಟ್ಟಿ, ಟ್ರಸ್ಟಿಗಳು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಜಾತಾ ಶೆಟ್ಟಿ, ಮೀರಾ – ಡಹಾಣು ಬಂಟ್ಸ್ ನ ವಲಯದ ಕಾರ್ಯಧ್ಯಕ್ಷರು, ವಲಯದ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಹಾಗೂ ಸಂಸ್ಥೆಯ ಗೌರವ ಪ್ರದಾನ ಕಾರ್ಯದರ್ಶಿ ಸುಕೇಶ್ ವಿ ರೈ ತಿಳಿಸುತ್ತಿದ್ದಾರೆ.



Related posts

ಜ.11. ಬಿಲ್ಲವರ ಅಸೋಸಿಯೇಶನ್ ಸಂಚಾಲಿತ ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಯ 64ನೇ ವಾರ್ಷಿಕೋತ್ಸವ ಮತ್ತು ಪಾರಿತೋಷಕ ವಿತರಣಾ ಸಮಾರಂಭ

Mumbai News Desk

ಮಲಾಡ್ ಪೂರ್ವ ಶ್ರೀ ಮೂಕಾಂಬಿಕಾ ಮಂದಿರ: ಸೆಪ್ಟೆಂಬರ್ 22 ರಿಂದ ನವೆಂಬರ್ 2 ರವರೆಗೆ ದಸರಾ ಮಹೋತ್ಸವ

Mumbai News Desk

ಆಗಸ್ಟ್ 2 ಥಾಣೆಯಲ್ಲಿ : ಶ್ರೀ ಅಯ್ಯಪ್ಪ ಯಕ್ಷಕಲಾ ಪ್ರತಿಷ್ಠಾನ ಮುಂಬೈ ಮತ್ತು ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ನಡೂರು, ಮಂದಾರ್ತಿ ಇದರ ಜಂಟಿ ಆಯೋಜನೆಯಲ್ಲಿ “ರಾಮ ದರ್ಶನ- ಗದಾಯುದ್ಧ” ಯಕ್ಷಗಾನ ಪ್ರದರ್ಶನ.

Mumbai News Desk

ವಜ್ರ ಮಹೋತ್ಸವದ ಸಂಭ್ರಮದಲ್ಲಿ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ,

Mumbai News Desk

ಮಾ. 08 ರಂದು ಥಾಣೆಯಲ್ಲಿ ಸಾಫಲ್ಯ ಸೇವಾ ಸಂಘದ ಮುಖವಾಣಿ’ಸಾಫಲ್ಯ’ ತ್ರೈಮಾಸಿಕದ ಬೆಳ್ಳಿ ಹಬ್ಬ ಹಾಗೂ ಮಹಿಳಾ ದಿನಾಚರಣೆ

Mumbai News Desk

ಡಿ. 21: ಮುಂಬಯಿ ಕನ್ನಡ ಸಂಘದ ದತ್ತಿ ಉಪನ್ಯಾಸ ಕಾರ್ಯಕ್ರಮ

Mumbai News Desk