July 22, 2026
Mumbai News Kannada
ಸುದ್ದಿ

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದಹೊರ ರಾಜ್ಯದಲ್ಲೂ ಅಸಾಯಕರಿಗೆ ಸಹಾಯ ಹಸ್ತ







ಮುಂಬಯಿ ಪೆ 6.ಕರ್ನಾಟಕದ ಕರಾವಳಿಯ ಮೊಯಾ (ಬೋವಿ) ಸಮಾಜದ ಅಂತರಾಷ್ಟ್ರೀಯ ಮಟ್ಟದ ಏಕೈಕ ಸಂಘಟನೆ ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ಮಹಾರಾಷ್ಟ್ರ, ಮಾತ್ರವಲ್ಲದೆ ಕರ್ನಾಟಕ ಹಾಗೂ ಕೇರಳದ ಕರಾವಳಿ ಜಿಲ್ಲೆಗಳಲ್ಲಿ  ಸಮಾಜಪರ ಸೇವಾ ನಿರತವಾಗಿದ್ದು ಇದೀಗ ಹೊಸ ವರ್ಷದ ಆರಂಭದಲ್ಲೇ ಚೆನ್ನೈಯಲ್ಲಿ  ಅಧ್ಯಕ್ಷರಾದ ರವಿ ಉಚ್ಚಿಲ್ ಅವರ ತಂಡವು  ಪಿ.ಅರ್. ಎ. ರಾಮಕೃಷ್ಣನ್ ಅವರ ತಂಡದೊಂದಿಗೆ ಜ. 2 ರಂದು ಕಾಕ್ಕುಂ ಕರಂಗಲ್ ಮಹಿಳಾ ವೃದ್ಧಾಶ್ರಮಕ್ಕೆ ಭೇಟಿ ನೀಡಿತು.

ಸಂಸ್ಥೆಯ ಚೆನ್ನೈ ತಂಡವು ಈ ಕೇಂದ್ರದ ನಿರ್ಗತಿಕ ಮಹಿಳೆಯರಿಗೆ ಬೆಂಬಲಿಸಲು ಅಗತ್ಯ ದ ವಸ್ತುಗಳನ್ನು ವಿತರಿಸಿದೆ. ಅಲ್ಲಿನ ಮಹಿಳೆಯರು ಈ ತಂಡಕ್ಕೆ ಆಶೀರ್ವಾದದ ನುಡಿಗಳನ್ನಾಡಿದರು.

ಜ. 4 ರಂದು ಥಾಣೆಯಲ್ಲಿರುವ ನವಜೀವನ ಹಿಂದುಳಿದ ಶಾಲೆಗೆ ಭೇಟಿ ನೀಡುವ ಮೂಲಕ ನಿರ್ಗತಿಕ ವಿದ್ಯಾರ್ಥಿಗಳ ಜೀವನೋಪಾಯಕ್ಕೆ ಅಗತ್ಯ ಆಹಾರ ಮತ್ತು ಬಟ್ಟೆಗಳನ್ನು ವಿತರಿಸಿದರು. ಮಕ್ಕಳು ಕೃತಜ್ಞತೆ ಅರ್ಪಿಸಿದರು. ಈ ಕಾರ್ಯದಲ್ಲಿ ಲಕ್ಷ್ಮೀನಾರಾಯಣ ಮಾತ್ರವಲ್ಲದೆ ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ಮುಖ್ಯ ಸಲಹೆಗಾರ ಈಶ್ವರ್ ಕೆ.  ಐಲ್,  ಸಮಿತಿಯ ಪ್ರಮುಖರಾದ ಪ್ರೀತಿ ಉಚ್ಚಿಲ್, ಚಂದ್ರಕಲಾ ಉಚ್ಚಿಲ್,   ರವೀಂದ್ರ ಬತ್ತೇರಿ, ಸರೋಜ ವಿಟ್ಠಲ್ ಮತ್ತಿತರರು ಉಪಸ್ಥಿತರಿದ್ದು ಸಹಕರಿಸಿದರು.

ಮುಂಬಯಿಯ ಕೋರ್ ಕಮಿಟಿಯು,  ದಾನಿಗಳು ನೀಡಿದ ಮೊತ್ತವನ್ನು ನಿರ್ಗತಿಕ ಹಾಗೂ ಅಸಾಯಕರಿಗಾಗಿ ಉಪಯೋಗಿಸಲು, ವಿಶೇಷವಾಗಿ ಅಗತ್ಯವಿರುವ ಮಕ್ಕಳ ಉನ್ನತ ಶಿಕ್ಷಣ ಕ್ಕಾಗಿ ಸಹಕರಿಸುವ ಅಗತ್ಯವಿದೆ ಎಂಬುದಾಗಿ ನಿರ್ಧರಿಸಿದೆ.



Related posts

2018 ರ ರೆಮೋ ಡಿಸೋಜಾ ಸುಲಿಗೆ ಪ್ರಕರಣದ ಗ್ಯಾಂಗ್ ಸ್ಟರ್ ರವಿ ಪೂಜಾರಿ ಬಂಧನ

Mumbai News Desk

ಮುಂಬೈ ಮಹಾನಗರ ಪಾಲಿಕಾ ಚುನಾವಣೆಯಲ್ಲಿ ಜಯ ಗಳಿಸಿದ ಹರಿ ಸಾಲಿಯಾನ್‌ಗೆ ಹೆಜಮಾಡಿಯಲ್ಲಿ ಸನ್ಮಾನ

Mumbai News Desk

ಯಕ್ಷಗಾನ ತಾಳಮದ್ದಳೆ ಸಪ್ತಾಹ ಉದ್ಘಾಟನೆ –  ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ ಪ್ರದಾನ

Mumbai News Desk

“ಆನಂದವನ್ನು ನಮ್ಮೊಳಗೆ ಹುಡುಕಬೇಕು” : ಪೂಜ್ಯ ಒಡಿಯೂರು ಶ್ರೀಗಳವರಿಂದ ಸಂದೇಶ

Mumbai News Desk

ಏಷ್ಯನ್ ಮಾಸ್ಟರ್ಸ್ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ ಗೆ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಉದಯ ಎಸ್. ಶೆಟ್ಟಿ

Mumbai News Desk

ಮುಂಬೈಯ ಬಾಂದ್ರ ಟರ್ಮಿನಸ್ ನಲ್ಲಿ ನೂಕುನುಗ್ಗಲು, ಕಾಲ್ತುಳಿತ; 9 ಮಂದಿಗೆ ಗಾಯ

Mumbai News Desk