September 6, 2026
Mumbai News Kannada
ಸುದ್ದಿ

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದಹೊರ ರಾಜ್ಯದಲ್ಲೂ ಅಸಾಯಕರಿಗೆ ಸಹಾಯ ಹಸ್ತ





ಮುಂಬಯಿ ಪೆ 6.ಕರ್ನಾಟಕದ ಕರಾವಳಿಯ ಮೊಯಾ (ಬೋವಿ) ಸಮಾಜದ ಅಂತರಾಷ್ಟ್ರೀಯ ಮಟ್ಟದ ಏಕೈಕ ಸಂಘಟನೆ ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ಮಹಾರಾಷ್ಟ್ರ, ಮಾತ್ರವಲ್ಲದೆ ಕರ್ನಾಟಕ ಹಾಗೂ ಕೇರಳದ ಕರಾವಳಿ ಜಿಲ್ಲೆಗಳಲ್ಲಿ  ಸಮಾಜಪರ ಸೇವಾ ನಿರತವಾಗಿದ್ದು ಇದೀಗ ಹೊಸ ವರ್ಷದ ಆರಂಭದಲ್ಲೇ ಚೆನ್ನೈಯಲ್ಲಿ  ಅಧ್ಯಕ್ಷರಾದ ರವಿ ಉಚ್ಚಿಲ್ ಅವರ ತಂಡವು  ಪಿ.ಅರ್. ಎ. ರಾಮಕೃಷ್ಣನ್ ಅವರ ತಂಡದೊಂದಿಗೆ ಜ. 2 ರಂದು ಕಾಕ್ಕುಂ ಕರಂಗಲ್ ಮಹಿಳಾ ವೃದ್ಧಾಶ್ರಮಕ್ಕೆ ಭೇಟಿ ನೀಡಿತು.

ಸಂಸ್ಥೆಯ ಚೆನ್ನೈ ತಂಡವು ಈ ಕೇಂದ್ರದ ನಿರ್ಗತಿಕ ಮಹಿಳೆಯರಿಗೆ ಬೆಂಬಲಿಸಲು ಅಗತ್ಯ ದ ವಸ್ತುಗಳನ್ನು ವಿತರಿಸಿದೆ. ಅಲ್ಲಿನ ಮಹಿಳೆಯರು ಈ ತಂಡಕ್ಕೆ ಆಶೀರ್ವಾದದ ನುಡಿಗಳನ್ನಾಡಿದರು.

ಜ. 4 ರಂದು ಥಾಣೆಯಲ್ಲಿರುವ ನವಜೀವನ ಹಿಂದುಳಿದ ಶಾಲೆಗೆ ಭೇಟಿ ನೀಡುವ ಮೂಲಕ ನಿರ್ಗತಿಕ ವಿದ್ಯಾರ್ಥಿಗಳ ಜೀವನೋಪಾಯಕ್ಕೆ ಅಗತ್ಯ ಆಹಾರ ಮತ್ತು ಬಟ್ಟೆಗಳನ್ನು ವಿತರಿಸಿದರು. ಮಕ್ಕಳು ಕೃತಜ್ಞತೆ ಅರ್ಪಿಸಿದರು. ಈ ಕಾರ್ಯದಲ್ಲಿ ಲಕ್ಷ್ಮೀನಾರಾಯಣ ಮಾತ್ರವಲ್ಲದೆ ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ಮುಖ್ಯ ಸಲಹೆಗಾರ ಈಶ್ವರ್ ಕೆ.  ಐಲ್,  ಸಮಿತಿಯ ಪ್ರಮುಖರಾದ ಪ್ರೀತಿ ಉಚ್ಚಿಲ್, ಚಂದ್ರಕಲಾ ಉಚ್ಚಿಲ್,   ರವೀಂದ್ರ ಬತ್ತೇರಿ, ಸರೋಜ ವಿಟ್ಠಲ್ ಮತ್ತಿತರರು ಉಪಸ್ಥಿತರಿದ್ದು ಸಹಕರಿಸಿದರು.

ಮುಂಬಯಿಯ ಕೋರ್ ಕಮಿಟಿಯು,  ದಾನಿಗಳು ನೀಡಿದ ಮೊತ್ತವನ್ನು ನಿರ್ಗತಿಕ ಹಾಗೂ ಅಸಾಯಕರಿಗಾಗಿ ಉಪಯೋಗಿಸಲು, ವಿಶೇಷವಾಗಿ ಅಗತ್ಯವಿರುವ ಮಕ್ಕಳ ಉನ್ನತ ಶಿಕ್ಷಣ ಕ್ಕಾಗಿ ಸಹಕರಿಸುವ ಅಗತ್ಯವಿದೆ ಎಂಬುದಾಗಿ ನಿರ್ಧರಿಸಿದೆ.



Related posts

ಭಾಸ್ಕರ ರೈ ಕುಕ್ಕುವಳ್ಳಿ ಅವರಿಗೆ ಹುಟ್ಟೂರ ಸಮ್ಮಾನ – ತಾಳಮದ್ದಳೆ 

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮುಂಬೈಯಲ್ಲಿ ರಜತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ; ಹಿರಿಯ ಸದಸ್ಯ ರಾಮಚಂದ್ರ ಗಾಣಿಗರಿಗೆ ಆತ್ಮೀಯ ಗೌರವ

Mumbai News Desk

ತಿರುಮಲದಲ್ಲಿ ವಿಜೃಂಭಣೆಯಿಂದ ನಡೆದ ಪುರಂದರ ದಾಸರ ಆರಾಧನ ಮಹೋತ್ಸವ

Mumbai News Desk

ಮುಂಬಯಿ : ಕರ್ನಾಟಕ ಬ್ಯಾಂಕ್ ನ ಹಿರಿಯ ಸಿಬ್ಬಂದಿ ನಾರಾಯಣ ಮೊಗವೀರ ಅವರ ಬೀಳ್ಕೊಡುವ ಸಮಾರಂಭ

Mumbai News Desk

ಮಧೂರು ಕ್ಷೇತ್ರ ಮಹಾತ್ಮೆ” ಸಹಿತ ಅನೇಕ ಪ್ರಸಂಗ ಕಾವ್ಯ ಬರೆದ ಕಾಸರಗೋಡಿಮಧೂರು ವೆಂಕಟಕೃಷ್ಣ ನಿಧನ.

Mumbai News Desk

ಮನಿಲಾದಲ್ಲಿ ಪ್ರಭಾ ಸುವರ್ಣ ಅವರಿಗೆ 50ನೇ ಗ್ಲೋಬಲ್ ವುಮನ್ ಅಚೀವರ್ಸ್ ಪ್ರಶಸ್ತಿ ಗೌರವ

Mumbai News Desk