34.2 C
Karnataka
March 29, 2025
ಕ್ರೀಡೆ

ಸಮರ್ಥ್ ರೈ, ಮಹಾರಾಷ್ಟ್ರ ರಾಜ್ಯ ಲೀಗ್ ಫುಟ್ಬಾಲ್ ಟೂರ್ನಮೆಂಟ್‌ನಲ್ಲಿ ಅಂಡರ್-15 ವಿಭಾಗದಲ್ಲಿ ಅತೀ ಹೆಚ್ಚು ಗೋಲ್ ಹೊಡೆತದಿಂದ,ತಂಡ ಟಾಪ್ 3ರ ಸ್ಥಾನಕ್ಕೆ

ಮೀರಾರೋಡ್. ಮೀರಾ-ಭಾಯಂದರ್ ನ ಕನಕಿಯಾ ಇಂಟರ್ನ್ಯಾಶನಲ್ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಸಮರ್ಥ್ ರೈ ಅವರು ಮಹಾರಾಷ್ಟ್ರ ರಾಜ್ಯ ಲೀಗ್ ಫುಟ್ಬಾಲ್ ಟೂರ್ನಮೆಂಟ್‌ನ ಅಂಡರ್-15 ವಿಭಾಗದಲ್ಲಿ ದೆರ್ವನ್ ತಂಡದ ಮೂಲಕ ರತ್ನಗಿರಿ ಜಿಲ್ಲೆಯನ್ನು ಪ್ರತಿನಿಧಿಸಿ ಅತ್ಯುತ್ತಮ ಆಟಗಾರರಾಗಿ ಗುರುತಿಸಿಕೊಂಡಿದ್ದಾರೆ,

  ಟೂರ್ನಮೆಂಟ್‌ನಲ್ಲಿ ಅವರ ಪ್ರಮುಖ ಪಾತ್ರದಿಂದಾಗಿ ಮತ್ತು ಅತಿ ಹೆಚ್ಚು ಗೋಲು ಬಾರಿಸಿ ತಂಡವು ಟೂರ್ನಮೆಂಟ್‌ನಲ್ಲಿ ಟಾಪ್ 3 ಸ್ಥಾನವನ್ನು ಕಾಯ್ದುಕೊಳ್ಳಲು ಸಹಾಯವಾಗಿದೆ. ಅವರು ಬೋರಿವಿಲಿಯ
ಸಿಎಫ್ಸಿಐ ಕ್ಲಬ್‌ನಲ್ಲಿ ಫುಟ್ಬಾಲ್ ತರಬೇತಿ ಪಡೆಯುತ್ತಿದ್ದಾರೆ.

2011 ಜೂನ್ 21 ರಂದು ಮಂಗಳೂರಿನ ಮುಚ್ಚೂರು ಗ್ರಾಮದಲ್ಲಿ ಜನಿಸಿದ ಸಮರ್ಥ್ ರೈ ಮುಂಬಯಿ ನಿವಾಸಿಯಾಗಿದ್ದು , ಮಿಾಂಜ ಮಂಜಲ್ತೋಡಿ ಪೊಸನಿಕೆ ಮನೆ ಚಂದ್ರಶೇಖರ್ ರೈ ಮತ್ತು ಮುಚ್ಚೂರು ಕಲ್ಕುಡೆ ಕೈದುಮಾರು ಗುತ್ತು ಕುಶಲ ರೈ ಅವರ ಪುತ್ರ. 

ಸಮರ್ಥ್ ರೈ ಯವರಿಗೆ ಕರ್ನಾಟಕ ರಾಜ್ಯೋತ್ಸವ ಸಾಧಕ ಪುರಸ್ಕಾರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ

ಸಮರ್ಥ್ ರೈ ಅವರ ಈ ಸಾಧನೆ ಅವರ ಪರಿಶ್ರಮ ಮತ್ತು ಸಮರ್ಪಣೆಯ ಫಲವಾಗಿದೆ, ಅವರ ಮುಂದಿನ ಪ್ರಯತ್ನಗಳಿಗೆ ಶುಭಾಶಯಗಳು.

Related posts

ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ, ಮುಂಬಯಿ : ವಾರ್ಷಿಕ ಕ್ರೀಡೋತ್ಸವದ ಉದ್ಘಾಟನೆ

Mumbai News Desk

ಅಕ್ಷಯಧಾರ ಕ್ರೆಡಿಟ್ ಸೊಸೈಟಿ ಕಾಪು – ವಾರ್ಷಿಕ ಮಹಾಸಭೆ : ಸಂಸ್ಥೆಯ ಅಭಿವೃದ್ಧಿಗೆ ಸಹಕರಿಸಿ – ಲವ ಕರ್ಕೇರ.

Mumbai News Desk

ಸುರತ್ಕಲ್ ಬಂಟರ ಸಂಘದ ವಾರ್ಷಿಕ ಕ್ರೀಡಾಕೂಟ

Mumbai News Desk

ದುಬೈಯಲ್ಲಿ ನಡೆದ ಇಂಟರ್ನ್ಯಾಷನಲ್ ಮಾಸ್ಟರ್ಸ್ ಚಾಂಪಿಯನ್ಷಿಪ್ ನಲ್ಲಿ 2 ಬೆಳ್ಳಿ ,1 ಕಂಚಿನ ಪದಕ ಪಡೆದ ಜಯಂತಿ ದೇವಾಡಿಗ.

Mumbai News Desk

ರಾಷ್ಟ್ರೀಯ ಮಟ್ಟದ ಕರಾಟೆ ಕ್ಷೇತ್ರದಲ್ಲಿ ಗುರುತಿಸಿಕೊಂಡ ಹರ್ಷಿತಾ ಪೂಜಾರಿ   ಇನ್ನಂಜೆ

Mumbai News Desk

ಬಹುಮುಖ ಪ್ರತಿಭೆಯ ಬಾಲ ಪ್ರತಿಭೆ ಬೆಳ್ತಂಗಂಡಿಯ ಶ್ರೇಯಸ್ ಯೋಗೇಶ್ ಪೂಜಾರಿ.

Mumbai News Desk