30.9 C
Mumbai
June 8, 2026
Mumbai News Kannada
ಮುಂಬಯಿ

ಮುಂಬೈ: ಕುರ್ಲಾ ಬೆಸ್ಟ್ ಬಸ್ ಅಪಘಾತ ಪ್ರಕರಣ, ಚಾಲಕರನ್ನು ನೇಮಿಸಿಕೊಳ್ಳುವಲ್ಲಿ ಮತ್ತು ತರಬೇತಿ ನೀಡುವಲ್ಲಿ ನಿರ್ಲಕ್ಷ – ಪೊಲೀಸರ ಆರೋಪ





ಡಿಸೆಂಬರ್ 9 2024 ರಂದು ಕುರ್ಲಾ ನಿಲ್ದಾಣದಿಂದ ಅಂಧೇರಿಗೆ ಹೋಗುತ್ತಿದ್ದ ಬೆಸ್ಟ್ ಬಸ್ ನಿಯಂತ್ರಣ ತಪ್ಪಿ 20 ವಾಹನಗಳಿಗೆ ಡಿಕ್ಕಿ ಹೊಡೆದು, 9 ಜನರ ಸಾವಿಗೆ ಕಾರಣವಾಗಿತ್ತು. ಬಸ್ ಅಪಘಾತದ ಪ್ರಕರಣದ ತನಿಖೆ ನಡೆಸುತ್ತಿರುವ ಮುಂಬೈ ಪೋಲಿಸರು, ಚಾಲಕ ಸಂಜಯ್ ಮೋರೆ ವಿರುದ್ಧ ಮಂಗಳವಾರ ಮೆಟ್ರೋ ಪಾಲಿಟಿನ್ ಮ್ಯಾಜಿಸ್ಟ್ರೇಟ್ ನ್ಯಾಯಲಯಕ್ಕೆ 1000 ಪುಟಗಳಿಗೂ ಹೆಚ್ಚು ಆರೋಪ ಪಟ್ಟಿ ಸಲ್ಲಿಸಿದ್ದಾರೆ.
ಚಾಲಕನನ್ನು ನೇಮಿಸಿಕೊಂಡ ವೇಟ್ ಲೀಸ್ ಕಂಪನಿಯ ಸಿಇಒ ಮತ್ತು ಬ್ರಹನ್ ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆ (ಬೆಸ್ಟ್ )ಗೆ ಎಲೆಕ್ಟ್ರಿಕ್ ಬಸ್ ಪೂರೈಸಿದ ಸಂಸ್ಥೆ ನಿರ್ದೇಶಕರನ್ನೂ ಪೊಲೀಸರು ಆರೋಪಿಸಿದ್ದಾರೆ.
ಎಲೆಕ್ಟ್ರಾನ್ಸ ಪ್ರೈವೇಟ್ ಲಿಮಿಟೆಡ್ನ ನಿರ್ದೇಶಕರು ಮತ್ತು ಮೋರಿಯಾ ಟ್ರಾನ್ಸ್ ಇಂಡಿಯ ಲಿಮಿಟೆಡ್ನ ಸಿಇಓ ಅವರನ್ನು ಸಹ ಆರೋಪ ಪಟ್ಟಿಯಲ್ಲಿ ಆರೋಪಿಗಳಾಗಿ ಹೆಸರಿಸಲಾಗಿದೆ. ಏಕೆಂದರೆ ನಮ್ಮ ತನಿಖೆಯಲ್ಲಿ ಚಾಲಕನನ್ನು ನೇಮಿಸಿಕೊಳ್ಳುವಲ್ಲಿ ಮತ್ತು ತರಬೇತಿ ನೀಡವಲ್ಲಿ ನಿರ್ಲಕ್ಷ ವಹಿಸಿರುವುದು ಕಂಡು ಬಂದಿದೆ, ಇದು ಅಪಘಾತಕ್ಕೆ ಕಾರಣವಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ಅಧಿಕ ರಕ್ತದೊತ್ತಡ ಮತ್ತು ದೃಷ್ಟಿ ದೋಷದಿಂದ ಬಳಲುತ್ತಿದ್ದ ಚಾಲಕ ಮೋರೆ ಎಲೆಕ್ಟ್ರಿಕ್ ಬಸ್ ಓಡಿಸಲು ವೈದ್ಯಕೀಯವಾಗಿ ಅನರ್ಹ ಎಂದು ಪೊಲೀಸರು ಆರೋಪ ಪಟ್ಟೆಯಲ್ಲಿ ತಿಳಿಸಿದ್ದಾರೆ. ಹೆಚ್ಚುವರಿಯಾಗಿ ಅವರಿಗೆ ಸಾಕಷ್ಟು ತರಬೇತಿ ನೀಡಲಾಗಿಲ್ಲ ಮತ್ತು ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡ ಕಾರಣ ಇದು ಮಾನವ ದೋಷ ಎಂದು ಪುರಾವೆಗಳು ತೋರಿಸಿವೆ.
ಘಟನೆಯ ಸಿಸಿಟಿವಿ ದ್ರಶಾವಳಿಗಳು, ಚಾಲಕನ ರಕ್ತದ ಮಾದರಿ ಇತರ ವಿಧಿ ವಿಜ್ಞಾನ ಪರೀಕ್ಷಾ ವರದಿಗಳು, 40ಕ್ಕೂ ಹೆಚ್ಚು ಸಾಕ್ಷಿಗಳ ಹೇಳಿಕೆಗಳು ಮತ್ತು ಬಲಿಪಶುಗಳ ಮರಣ ಪ್ರಮಾಣ ಪತ್ರಗಳನ್ನು ಪೊಲೀಸರು ಆರೋಪ ಪಟ್ಟಿಯಲ್ಲಿ ಸೇರಿಸಿದ್ದಾರೆ.



Related posts

ದಹಿಸರ್ ಶ್ರೀ ದುರ್ಗಾಪರಮೇಶ್ವರೀ – ಶನೀಶ್ವರ ದೇವಸ್ಥಾನದಲ್ಲಿ 40ನೇ ವಾರ್ಷಿಕ ಮಹಾಪೂಜಾ ಮಹೋತ್ಸವ (ಬಲಿ ಉತ್ಸವ, ಸಾಧಕರಿಗೆ ಸನ್ಮಾನ, ಯಕ್ಷಗಾನ ಪ್ರದರ್ಶನ)

Mumbai News Desk

ಜೋಗೇಶ್ವರಿ : ಸಂಸ್ಕೃತಿ ಅಮೀನ್ ದುರ್ಮರಣ ಪ್ರಕರಣ – ಬಿಲ್ಡರ್ ನ ನಿರೀಕ್ಷಣಾ ಜಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

Mumbai News Desk

ಶ್ರೀ ಶಬರಿ ಅಯ್ಯಪ್ಪ ಭಜನಾ ಮಂಡಳಿ ಡೊಂಬಿವಲಿ ಇದರ 10ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ

Mumbai News Desk

ಸಿ ಎ ಪರೀಕ್ಷೆ ಫಲಿತಾಂಶ 2024 ಅನುಷಾ ಎ ಕರ್ಕೇರ ಉತ್ತೀರ್ಣ

Mumbai News Desk

ಮೀರಾ ರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಭಕ್ತಿ ಸಡಗರದ  ಶ್ರೀ  ಸಾರ್ವಜನಿಕ ಸತ್ಯ ನಾರಾಯಣ ಮಹಾಪೂಜೆ. ಸಂಪನ್ನ

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬೈ ಬೊರಿವಲಿ-ದಹಿಸರ್ ಸ್ಥಳೀಯ ಕಚೇರಿ ವತಿಯಿಂದ ಗಣರಾಜ್ಯೋತ್ಸವ ಆಚರಣೆ

Mumbai News Desk