30 C
Mumbai
April 24, 2026
Mumbai News Kannada
ಪ್ರಕಟಣೆ

ಬಿಲ್ಲವ ಸೇವಾ ಸಂಘ ಕುಂದಾಪುರ(ರಿ) ಮುಂಬಯಿ : ಫೆ. 16 ರಂದು “ಅರಸಿನ ಕುಂಕುಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ”





ಬಿಲ್ಲವ ಸೇವಾ ಸಂಘ ಕುಂದಾಪುರ (ರಿ) ಮುಂಬಯಿ ಇದರ ಉಪ ಸಮಿತಿಗಳಲ್ಲಿ ಒಂದಾದ ಮಹಿಳಾ ಸಂಪದದ ಆಯೋಜನೆಯಲ್ಲಿ ದಿನಾಂಕ 16.02.2025 ರ ಅಪರಾಹ್ನ 3.30ಕ್ಕೆ ಸರಿಯಾಗಿ ವಸಂತ್ ರಾವ್ ನಾಯಕ್ ಹಾಲ್, ಶಿವಕ್ರಪಾ ಪ್ರಿಮೈಸೈಸ್, ವಾಮನ ಹರಿಪೇಟೆ ಸನ್ಸ್ ಮೇಲ್ಗಡೆ, ದಾದಾ ಪಾಟೀಲ ವಾಡಿ, ಥಾಣೆ(ಪಶ್ಚಿಮ) (ರೈಲ್ವೆ ನಿಲ್ದಾಣದ ಸಮೀಪ) ಇಲ್ಲಿ ʻಅರಸಿನ ಕುಂಕುಮ ಹಾಗೂ ಸಾಂಸ್ಕೃತಿಕʼ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಮುಂಬಯಿ ಮಹಾನಗರದಲ್ಲಿ ಹಲವಾರು ವರ್ಷಗಳಿಂದ ಎಲೆಯ ಮರೆಯ ಕಾಯಿಯಂತೆ ತನ್ನ ಸದಸ್ಯ ಬಾಂಧವರ ಶ್ರೇಯೋಭಿವೃದ್ಧಿಗಾಗಿ ಸಮಾಜ ಸೇವೆ ಮಾಡುತ್ತ ಬಂದಿರುವ ಧೀಮಂತ ಸಂಸ್ಥೆ ಬಿಲ್ಲವ ಸೇವಾ ಸಂಘ ಕುಂದಾಪುರ (ರಿ) ಮುಂಬಯಿ.
ಸಂಘದ ಅಧ್ಯಕ್ಷರಾದ ಮಾನ್ಯ ಸಿ ಎ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರಗುವ ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಥಾಣೆಯ ಮಾಜಿ ಮಹಾಪೌರೆ ಶ್ರೀಮತಿ ಮೀನಾಕ್ಷಿ ರಾಜೇಂದ್ರ ಶಿಂಧೆ(ಪೂಜಾರಿ), ಕಾರ್ಯಕ್ರಮದ ಉದ್ಘಾಟಕರಾಗಿ ಲೇಖಕಿ, ಸಮಾಜ ಸೇವಕಿ ಶ್ರೀಮತಿ ಗುಲಾಬಿ ಬಾಬು ಪೂಜಾರಿಯವರು ಹಾಗೂ ಗೌರವ ಅತಿಥಿಗಳಾಗಿ ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ, ಮುಂಬಯಿ ಮಹಿಳಾ ವಿಭಾಗ ಇದರ ಕಾರ್ಯಾಧ್ಯಕ್ಷೆ ಡಾ. ಸುದೀಪಾ ಮಹಾಬಲ ಕುಂದರ್ ಮತ್ತು ಸಮಾಜ ಸೇವಕಿಯರಾದ ಶ್ರೀಮತಿ ಕಂಚನ ಕಿಶೋರ್ ಶಾ, ಶ್ರೀಮತಿ ಸುಜಾತಾ ವಿಶ್ವನಾಥ ಪೂಜಾರಿ, ಶ್ರೀಮತಿ ಕವಿತಾ ಅಶೋಕ ಪೂಜಾರಿ ಉಪಸ್ಥಿತರಿರುವರು.

ಕಾರ್ಯಕ್ರಮದ ಮಧ್ಯಂತರದಲ್ಲಿ ಸಮಾಜದ ಯುವ ಪ್ರತಿಭಾವಂತರನ್ನು ಗುರುತಿಸಿ ಸನ್ಮಾನ ನೀಡಿ ಗೌರವಿಸಲಾಗುವುದು. ಮನೋರಂಜನೆಯ ಅಂಗವಾಗಿ ಸದಸ್ಯರು ಮತ್ತು ಮಕ್ಕಳಿಂದ ಗಾನ, ನ್ರತ್ಯ ವೈಭವ ಜರಗಲಿದೆ. ಹಾಗೂ ನಗರದ ಖ್ಯಾತ ರಂಗ ಕಲಾವಿದೆಯರಾದ ಕುಮಾರಿ ಅಂಕಿತಾ ನಾಯಕ್ ಮತ್ತು ಕುಮಾರಿ ಸೌಜನ್ಯ ಬಿಲ್ಲವ ತಂಡದವರಿಂದ ಪೌರಾಣಿಕ ಯಕ್ಷಗಾನ ಆಖ್ಯಾನ “ಜಾಂಬವತಿ ಕಲ್ಯಾಣ” ಎಂಬ ತುಣುಕು ಯಕ್ಷಗಾನ ಪ್ರದರ್ಶನ ನಡೆಯಲಿದೆ. ಸಮಾಜ ಬಾಂಧವರಾದ ತಾವೆಲ್ಲರೂ ಈ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಬೇಕೆಂದು ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಸುಧಾಕರ ಸಿ ಪೂಜಾರಿಯವರು ಪ್ರಕಟಣೆಯಲ್ಲಿ ತಿಳಿಸಿದರು. ಕೊನೆಯಲ್ಲಿ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿದೆ.



Related posts

ಮಾ. 4ರಿಂದ 8ರ ತನಕ ; ಇತಿಹಾಸ ಪ್ರಸಿದ್ದ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

Mumbai News Desk

ಡಿ. 17ರಂದು  ಪೊವಾಯಿ  ವಿದೂಶಿ ಗೀತಾ ವೇದ್ (ಸಾಲ್ಯಾನ್) ರ ನಟನಾ ನೃತ್ಯ ಅಕಾಡೆಮಿಯ 11ನೇ ವಾರ್ಷಿಕೋತ್ಸವ

Mumbai News Desk

ಮಾ. 29: ಬೋರಿವಲಿಯ ಶ್ರೀ ಜಗದೀಶ್ವರಿ ದೇವಸ್ಥಾನದಲ್ಲಿ ರಕ್ತದಾನ ಶಿಬಿರ: ಮಾನವೀಯ ಸೇವೆಗೆ ಸ್ಪಂದಿಸಲು ಭಕ್ತಾದಿಗಳಿಗೆ ಕರೆ

Mumbai News Desk

ಅಕ್ಟೊಬರ್  29 ರಂದು ಭಾನುವಾರ   ಆಲ್ ಅಮೇರಿಕಾ ತುಳುಕೂಟ ದ  ”ತುಳು  ಉಚ್ಚಯ 2023”  ಉತ್ಸವ ಕಾರ್ಯಕ್ರಮ 

Mumbai News Desk

ಡೊಂಬಿವಲಿ: ಜ. 17ರಂದು ಶ್ರೀ ಮಹಾವಿಷ್ಣು ಮಂದಿರದ 49ನೇ ವಾರ್ಷಿಕ ಸತ್ಯನಾರಾಯಣ ಪೂಜೆ, ಶನಿ ಪೂಜೆ

Mumbai News Desk

ಡಿ.17 ರಿಂದ 21 ರ ವರಗೆ ತುಳುನಾಡಿನ ವಿವಿಧ ಪುಣ್ಯ ಕ್ಷೇತ್ರ ಗಳಲ್ಲಿ ಮುಂಬಯಿಯ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಯಿಂದ ಭಜನಾ ಕಾರ್ಯಕ್ರಮ.

Mumbai News Desk