32 C
Mumbai
April 24, 2026
Mumbai News Kannada
ಮುಂಬಯಿ

ಸಾಂತಾಕ್ರೂಜ್ ಪೇಜಾವರ ಮಠದಲ್ಲಿ ಶ್ರೀ ಮಧ್ವ ನವಮೀ ಆಚರಣೆ 





   ಸಾಂತಾಕ್ರೂಜ್ ಪೂರ್ವದ ಪ್ರಭಾತ್ ಕಾಲನಿಯಲ್ಲಿರುವ ಉಡುಪಿ ಶ್ರೀ ಪೇಜಾವರ ಮಠದಲ್ಲಿ  ಮಧ್ವ ನವಮೀ ಆಚರಣೆಯನ್ನು ವೈಭವೋಪೇತವಾಗಿ ಆಚರಿಸಲಾಯಿತು. ಶ್ರೀಪೇಜಾವರ ಮಠದ ಮುಖ್ಯ ಪ್ರಬಂಧಕರಾದ ಡಾ! ರಾಮದಾಸ ಉಪಾಧ್ಯಾಯ ಇವರು ಪ್ರಸನ್ನ ಪೂಜೆ ಮಾಡಿ ಆಶೀರ್ವದಿಸಿದರು.  

ಬಳಿಕ ಅಮೇರಿಕಾ ರಾಷ್ಟ್ರದ ನ್ಯೂಯಾರ್ಕ್ ನಗರದಲ್ಲಿ, ಆಚಾರ್ಯ ಮಧ್ವರ ತತ್ವಜ್ಞಾನಪ್ರಸಾರಕಾರ್ಯ ನಡೆಸುತ್ತಿರುವ ಪೂರ್ಣಪ್ರಜ್ಞ ವಿದ್ಯಾಪೀಠದ ವಿದ್ವಾಂಸರೂ ಶ್ರೀ ಪೇಜಾವರ ಮಠಾಧೀಶರ ಶಿಷ್ಯರೂ ಆದ ವಿದ್ವಾನ್ ಶ್ರೀ ಶ್ರೀಧರ ಆಚಾರ್ಯರು ಉಪನ್ಯಾಸವನ್ನು ನಡೆಸಿಕೊಟ್ಟರು.

ಪರಮಪೂಜ್ಯ ಗುರುಗಳನ್ನು ಸ್ಮರಿಸುವುದರೊಂದಿಗೆ ಶ್ರೀಮಧ್ವಾಚಾರ್ಯರ ಅವತಾರ, ಅವರ ಮಹತ್ವ ಮತ್ತು ಅವರ ಲೀಲೆ.. ಲೋಕಕಲ್ಯಾಣಕ್ಕೆ ನಮ್ಮ ಕರ್ತವ್ಯ ಏನು? ಮುಂತಾದ ವಿಚಾರದಲ್ಲಿ ನೆರೆದ ಭಕ್ತರಿಗೆ ಮನಕ್ಕೆ ಮುದ ನೀಡುವಂತೆ ಸುಂದರವಾಗಿ ತಿಳಿಸಿದರು. 

ಪೇಜಾವರ ಮಠದ “ಮಧ್ವೇಶ ಭಜನಾ ಮಂಡಳಿ” ಯಿಂದ ಹರಿ ನಾಮ ಸಂಕೀರ್ತನೆ.. ನರ್ತನಸೇವೆಯೊಂದಿಗೆ ಕಾರ್ಯಕ್ರಮವು ವೈಭವೋಪೇತವಾಗಿ ಸಂಪನ್ನಗೊಂಡಿತು.

ಆರಂಭದಲ್ಲಿ ಪೇಜಾವರ ಮಠದಲ್ಲಿನ ಶಿಲಾಮಯಮಂದಿರದಲ್ಲಿ ಪ್ರತಿಷ್ಠಾಪಿತ ಶ್ರೀಕೃಷ್ಣನ ಸನ್ನಿಧಾನದಲ್ಲಿ ಅರ್ಚಕ ರಾಮಚಂಡ ಸಾಮಗ ಶಾಸಾನುಸಾರ ದೈನಂದಿನ ಪೂಜಾವಿಧಿಗಳನ್ನು ನೆರವೇರಿಸಿದರು. 

ಶ್ರೀ ಪೇಜಾವರ ಮಠದ ವಿದ್ವಾನ್ ಕೆರ್ವಾಶೆ ಹರಿ ಭಟ್ ಪುತ್ತಿಗೆ, ನಿರಂಜನ್ ಗೋಗೈ ಸಹಕರಿಸಿದರು, ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಮಹಾಪ್ರಸಾದ ಸ್ವೀಕರಿಸಿದರು. 



Related posts

ಮಲಾಡ್ ಶ್ರೀ ವರಮಹಾಲಕ್ಷ್ಮೀ  ಪೂಜಾ ಸಮಿತಿಯಿಂದ 16 ನೇ ವಾರ್ಷಿಕ  ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ, ಧಾರ್ಮಿಕ ಸಭೆ

Mumbai News Desk

ಶ್ರೀ ಕ್ಷೇತ್ರ ಅಸಲ್ಫ ಶ್ರೀ ದತ್ತಾತ್ರೇಯ ದುರ್ಗಾಂಬಿಕಾ  ದೇವಸ್ಥಾ ಜೀರ್ಣೋದ್ಧಾರದ ಕರ ಪತ್ರಿಕೆ ಬಿಡುಗಡೆ

Mumbai News Desk

ಮುಂಬೈ: ಬೋರಿವಲಿ ಶ್ರೀ ಜಗದೇಶ್ವರಿ ಸನ್ನಿಧಿಯಲ್ಲಿ ಬ್ರಹ್ಮಕಲಶ ಸಂಭ್ರಮ ಸಂಪನ್ನ

Mumbai News Desk

ಶ್ರೀ ಮಹಾವಿಷ್ಣು ಮಂದಿರ ಡೊಂಬಿವಲಿ ಸಂಚಾಲಕರು ಶ್ರೀ ಮುಂಬ್ರಾ ಮಿತ್ರ ಭಜನಾ ಮಂದಿರ – 47 ನೇ ವಾರ್ಷಿಕ ಮಹಾ ಸಭೆ

Mumbai News Desk

ಬೃಹನ್ಮುಂಬೈ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ವಾರ್ಡ್ ಸಂಖ್ಯೆ 188ರಲ್ಲಿ ಭಾಸ್ಕರ್ ಆರ್ ಶೆಟ್ಟಿ ವಿಜಯ

Mumbai News Desk

ಸ್ಮಿತಾ ಬೆಳ್ಳೂರ್ ಯವರು  ಸಂಗೀತ  ಕಛೇರಿ ಮೂಲಕ ಸಂಗೀತಕಲಾ ರಸಿಕರನ್ನು ಮನಮೋಹಕಗೊಳಿಸಿದರು

Mumbai News Desk