September 6, 2026
Mumbai News Kannada
ಸುದ್ದಿ

ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಸಭೆ.





ದೇವಸ್ಥಾನಗಳ ಜೀರ್ಣೋದ್ದಾರ ಗ್ರಾಮದ ಅಭಿವೃದ್ಧಿಗೆ ಪೂರಕ -ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ


ವರದಿ : ಹರಿಶ್ಚಂದ್ರ ಪಿ. ಸಾಲ್ಯಾನ್, ಮುಲ್ಕಿ.

ಮುಲ್ಕಿ ಫೆ. 18: ಗ್ರಾಮೀಣ ಭಾಗದ ದೇವಸ್ಥಾನಗಳು ಧಾರ್ಮಿಕತೆಯಲ್ಲಿ ಮಹತ್ವ ಹೊಂದಿದ್ದು ದೇವಸ್ಥಾನಗಳ ಜೀರ್ಣೋದ್ದಾರ ಗ್ರಾಮದ ಅಭಿವೃದ್ಧಿಗೆ ಪೂರಕ ಎಂದು ಬೆಂಗಳೂರಿನ ಆಧ್ಯಾತ್ಮಿಕ ವಿಶ್ವ ಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು
ಅವರು ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಜೀರ್ಣೋದ್ಧಾರ ನಿಧಿಗೆ ಹತ್ತು ಲಕ್ಷ ಮೊತ್ತದ ಚೆಕ್ ಹಸ್ತಾಂತರಿಸಿ ಮಾತನಾಡಿದರು
ಅವರು ಮಾತನಾಡಿ ಪುರಾತನ ಕಾಲದ ಪುನರೂರು ಶ್ರೀ ವಿಶ್ವನಾಥ ದೇವಸ್ಥಾನ ಕಾರಣಿಕ ನೆಲೆಯನ್ನು ಹೊಂದಿದ್ದು ಭಕ್ತರ ಇಷ್ಟಾರ್ಥವನ್ನು ಈಡೇರಿಸುವ ಶ್ರೀ ವಿಶ್ವನಾಥ ದೇವರ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಯಶಸ್ವಿಯಾಗಿ ನೆರವೇರಿಸುವ ಮೂಲಕ ಊರ ಪರವೂರ ಭಕ್ತರು, ದಾನಿಗಳು ಗ್ರಾಮಸ್ಥರು ಮಾದರಿಯಾಗಬೇಕು ಎಂದರು

ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಡಾ.ಹರಿಕೃಷ್ಣ ಪುನರೂರು ಮಾತನಾಡಿ ಕ್ಷೇತ್ರದ ಅಭಿವೃದ್ಧಿಗೆ ದಾನಿಗಳಾದ ಶ್ರೀ ಚಂದ್ರಶೇಖರ ಸ್ವಾಮೀಜಿಯವರ ಕೊಡುಗೆ ಅನನ್ಯವಾಗಿದ್ದು ಮುಂದಿನ ದಿನಗಳಲ್ಲಿ ಭಕ್ತರ ಸಹಕಾರದಿಂದ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ವೇಗವಾಗಿ ನಡೆದು ಬ್ರಹ್ಮಕಲಶೋತ್ಸವ ಯಶಸ್ವಿಯಾಗಿ ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭ ಕ್ಷೇತ್ರದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವ ರಾವ್, ಜ್ಯೋತಿಷಿ ವಿಶ್ವನಾಥ ಭಟ್,ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕರಾದ ರಜನಿ ಸಿ ಭಟ್, ರಾಹುಲ್ ಚಂದ್ರಶೇಖರ್, ಸಂಚಾಲಕರಾದ ಪುನೀತ್ ಕೃಷ್ಣ, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವ ಪ್ರಸಾದ್ ಪುನರೂರು, ಪಟೇಲ್ ವಿಶ್ವನಾಥ ರಾವ್ , ಗೋಪಿನಾಥ ರಾವ್, ಪದ್ಮಶಾಲಿ ಮಹಾಸಭಾ ಅಧ್ಯಕ್ಷ ಪುರಂದರ ಶೆಟ್ಟಿಗಾರ್,ಮತ್ತಿತರರು ಉಪಸ್ಥಿತರಿದ್ದರು

ಪುನೀತ್ ಕೃಷ್ಣ ಸ್ವಾಗತಿಸಿ ನಿರೂಪಿಸಿದರು



Related posts

ಹೊಸ ಹಣಕಾಸು ವರ್ಷ 2026-27: ಜನಸಾಮಾನ್ಯರ ಬದುಕಿನ ಮೇಲಾಗುವ ಪ್ರಮುಖ ಬದಲಾವಣೆಗಳ ಕೈಪಿಡಿ

Mumbai News Desk

ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಪ್ರತಿಷ್ಠಿತ ‘ಮಂತ್ರಾಲಯ ಪರಿಮಳ’ ಪ್ರಶಸ್ತಿ ಪ್ರದಾನ

Mumbai News Desk

ಯುವ ಪ್ರತಿಭೆ ಆಶಿಕಿ (Aashiqui) ಸಾಹಿತ್ಯ ಬರೆದು ಸ್ವರ ನೀಡಿದ ಆಲ್ಬಮ್ ಸಾಂಗ್ ಬಿಡುಗಡೆ

Mumbai News Desk

ಶಬರಿಮಲೆ ಯಾತ್ರೆಗೆ ಈ ವರ್ಷದಿಂದ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ

Mumbai News Desk

ನ್ಯಾಯವಾದಿ ಬಿ. ಕೆ. ಸದಾಶಿವ ನೋಟರಿ ಪಬ್ಲಿಕ್ ಆಗಿ ನೇಮಕ

Mumbai News Desk

ಅಂತರರಾಷ್ಟ್ರೀಯ ಯೋಗಾಸನ ಸ್ಪರ್ಧೆಗೆ ಕಾರ್ಕಳದ ಪ್ರತಿಭೆ ಸಿಂಚನ್ ಎ. ಪೂಜಾರಿ ಆಯ್ಕೆ: ಕರ್ನಾಟಕಕ್ಕೆ ಹೆಮ್ಮೆಯ ಗೌರವ

Mumbai News Desk