32.3 C
Mumbai
June 7, 2026
Mumbai News Kannada
ಸುದ್ದಿ

ಫರಂಗಿಪೇಟೆ : ಬಾಲಕ ನಾಪತ್ತೆ ಪ್ರಕರಣ, ನಾಳೆ (ಶನಿವಾರ ) ಫರಂಗಿಪೇಟೆ ಬಂದ್





ಬಂಟ್ವಾಳ : ನಿಗೂಢ ರೀತಿಯಲ್ಲಿ ನಾಪತ್ತೆಯಾಗಿರುವ ಪರಂಗಿಪೇಟೆ ಕಿದೆಬೆಟ್ಟು ನಿವಾಸಿ ಪದ್ಮನಾಭ ಎಂಬವರ ಪುತ್ರ ದಿಗಂತ್ (17) ನಾಪತ್ತೆಯಾಗಿ 3 ದಿನ ಕಳೆದರೂ, ಆತನ ಬಗ್ಗೆ ಇನ್ನೂ ಯಾವುದೇ ಸುಳಿವು ಪತ್ತೆಯಾಗದಿರುವ ಕಾರಣ ಸ್ಥಳೀಯ ಗ್ರಾಮಸ್ಥರು ದಿಡೀರ್ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಈ ಸಂದರ್ಭ ಪೊಲೀಸ್ ಇಲಾಖೆಗೆ ಎಚ್ಚರಿಕೆ ನೀಡಿದ ಪ್ರತಿಭಟನಾಕಾರರು ಮುಂದಿನ 24 ಗಂಟೆಯೊಳಗೆ ಬಾಲಕನನ್ನು ಪತ್ತೆ ಮಾಡದಿದ್ದರೆ ಮಾರ್ಚ್ ಒಂದರಂದು, ಶನಿವಾರ ಪರಂಗಿಪೇಟೆಯ ಎಲ್ಲಾ ಅಂಗಡಿ, ಮುಂಗಟ್ಟುಗಳನ್ನು ಮುಚ್ಚಿ ಪ್ರತಿಭಟನೆ ಮಾಡುವುದಾಗಿ ತೀರ್ಮಾನಿಸಿದರು.
ದಿಗಂತ್ ಫೆಬ್ರವರಿ 25ರಂದು ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿದ್ದು, ಆದರೆ ದೇವಸ್ಥಾನಕ್ಕೆ ಹೋಗದೆ ಮನೆಗೂ ಬಾರದೆ, ನಾಪತ್ತೆಯಾಗಿದ್ದು ಆತನ ಚಪ್ಪಲಿ ,ಮೊಬೈಲ್ ರೈಲ್ವೆ ಹಳಿಯಲ್ಲಿ ಬಿದ್ದುಕೊಂಡಿರುವುದು ಪತ್ತೆಯಾಗಿದೆ.
ರೈಲ್ವೆ ಹಳಿಯ ಸುಮಾರು ಮೂರು ಕಿಲೋಮೀಟರ್ ವರೆಗೆ ಪೊಲೀಸರ ತಂಡ ಹಾಗೂ ಸಾರ್ವಜನಿಕರು ಹುಡುಕಾಟ ನಡೆಸಿದರೂ,ಯಾವುದೇ ಮಾಹಿತಿ ಲಭ್ಯವಾಗಿಲ್ಲ.ಇದೀಗ ಈತನ ಪತ್ತೆಗಾಗಿ ಮೂರು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ ಆದರೂ ಇವರೆಗೆ ಸಣ್ಣ ಸುಳಿವು ಕೂಡ ಇಲಾಖೆಗೆ ಲಭ್ಯವಾಗದೆ ಇರುವುದು ಆತಂಕವನ್ನುಂಟು ಮಾಡಿದೆ.

ದಿಗಂತ್ ನಾಪತ್ತೆಯಾದ ಘಟನೆಯ ಬಗ್ಗೆ ಪೊಲೀಸ್ ಇಲಾಖೆಗೆ ಈವರೆಗೆ ಯಾವುದೇ ಸುಳಿವು ಸಿಗದಿರುವುದು ಕೂಡ ಪ್ರಕರಣ ಬೇರೆ ಬೇರೆ ರೂಪವನ್ನು ಪಡೆಯಬಹುದು ಎಂಬ ಆತಂಕ ಕೂಡ ವ್ಯಕ್ತವಾಗಿದೆ.



Related posts

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ (ರಿ) ಮಂಗಳೂರು ಹಾಗೂ ಮುತ್ತೂಟ್ ಫೈನಾನ್ಸ್ ಲಿಮಿಟೆಡ್ ಇದರ ಜಂಟಿ ಆಶ್ರಯದಲ್ಲಿ ಸ್ಥನ್ಯಪಾನ ಶಿಬಿರಕ್ಕೆ ಚಾಲನೆ.

Mumbai News Desk

ಸೇವಾಲಯ ಸೇವಾ ಸಮಿತಿ ಟ್ರಸ್ಟ್ ಬೆಂಗಳೂರು ವತಿಯಿಂದ ಪಿ.ಶಿವ ಕುಮಾರ್ ಅವರಿಗೆ ಸನ್ಮಾನ.

Mumbai News Desk

ಅಗಸ್ಟ್ 23 : ಹರಿಣಿ ಎಂ ಶೆಟ್ಟಿ ಕಾಪು ಇವರ ಮುತ್ತುದಾ… ಪನಿ… ಕವನ ಸಂಕಲನ ಲೋಕಾರ್ಪಣೆ

Mumbai News Desk

ಮುಂಬೈ – ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ವಿಸ್ತರಿಸುವ ಸಾಧ್ಯತೆ

Mumbai News Desk

ಹೈದರಾಬಾದ್ ಹೊರವಲಯದಲ್ಲಿ ರೈಲ್ವೆ ಹಳಿ ಮೇಲೆ ಕಿಯಾ ಸೋನೆಟ್ ಕಾರನ್ನು 8 ಕಿಲೋಮೀಟರ್ ಓಡಿಸಿದ ಮಹಿಳೆ, ರೈಲು ಸಂಚಾರ ಸ್ಥಗಿತ.

Mumbai News Desk

*ಜಾಗತಿಕ ಬಂಟರ ಸಂಘಗಳ ಒಕ್ಕೂಟ:  ಆಡಳಿತ ಮಂಡಳಿ ಸಭೆ* *50 ಲಕ್ಷ ರೂಪಾಯಿ ಅನುದಾನ ವಿತರಣೆ*

Mumbai News Desk