September 6, 2026
Mumbai News Kannada
ಸುದ್ದಿ

ಫರಂಗಿಪೇಟೆ : ಬಾಲಕ ನಾಪತ್ತೆ ಪ್ರಕರಣ, ನಾಳೆ (ಶನಿವಾರ ) ಫರಂಗಿಪೇಟೆ ಬಂದ್





ಬಂಟ್ವಾಳ : ನಿಗೂಢ ರೀತಿಯಲ್ಲಿ ನಾಪತ್ತೆಯಾಗಿರುವ ಪರಂಗಿಪೇಟೆ ಕಿದೆಬೆಟ್ಟು ನಿವಾಸಿ ಪದ್ಮನಾಭ ಎಂಬವರ ಪುತ್ರ ದಿಗಂತ್ (17) ನಾಪತ್ತೆಯಾಗಿ 3 ದಿನ ಕಳೆದರೂ, ಆತನ ಬಗ್ಗೆ ಇನ್ನೂ ಯಾವುದೇ ಸುಳಿವು ಪತ್ತೆಯಾಗದಿರುವ ಕಾರಣ ಸ್ಥಳೀಯ ಗ್ರಾಮಸ್ಥರು ದಿಡೀರ್ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಈ ಸಂದರ್ಭ ಪೊಲೀಸ್ ಇಲಾಖೆಗೆ ಎಚ್ಚರಿಕೆ ನೀಡಿದ ಪ್ರತಿಭಟನಾಕಾರರು ಮುಂದಿನ 24 ಗಂಟೆಯೊಳಗೆ ಬಾಲಕನನ್ನು ಪತ್ತೆ ಮಾಡದಿದ್ದರೆ ಮಾರ್ಚ್ ಒಂದರಂದು, ಶನಿವಾರ ಪರಂಗಿಪೇಟೆಯ ಎಲ್ಲಾ ಅಂಗಡಿ, ಮುಂಗಟ್ಟುಗಳನ್ನು ಮುಚ್ಚಿ ಪ್ರತಿಭಟನೆ ಮಾಡುವುದಾಗಿ ತೀರ್ಮಾನಿಸಿದರು.
ದಿಗಂತ್ ಫೆಬ್ರವರಿ 25ರಂದು ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿದ್ದು, ಆದರೆ ದೇವಸ್ಥಾನಕ್ಕೆ ಹೋಗದೆ ಮನೆಗೂ ಬಾರದೆ, ನಾಪತ್ತೆಯಾಗಿದ್ದು ಆತನ ಚಪ್ಪಲಿ ,ಮೊಬೈಲ್ ರೈಲ್ವೆ ಹಳಿಯಲ್ಲಿ ಬಿದ್ದುಕೊಂಡಿರುವುದು ಪತ್ತೆಯಾಗಿದೆ.
ರೈಲ್ವೆ ಹಳಿಯ ಸುಮಾರು ಮೂರು ಕಿಲೋಮೀಟರ್ ವರೆಗೆ ಪೊಲೀಸರ ತಂಡ ಹಾಗೂ ಸಾರ್ವಜನಿಕರು ಹುಡುಕಾಟ ನಡೆಸಿದರೂ,ಯಾವುದೇ ಮಾಹಿತಿ ಲಭ್ಯವಾಗಿಲ್ಲ.ಇದೀಗ ಈತನ ಪತ್ತೆಗಾಗಿ ಮೂರು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ ಆದರೂ ಇವರೆಗೆ ಸಣ್ಣ ಸುಳಿವು ಕೂಡ ಇಲಾಖೆಗೆ ಲಭ್ಯವಾಗದೆ ಇರುವುದು ಆತಂಕವನ್ನುಂಟು ಮಾಡಿದೆ.

ದಿಗಂತ್ ನಾಪತ್ತೆಯಾದ ಘಟನೆಯ ಬಗ್ಗೆ ಪೊಲೀಸ್ ಇಲಾಖೆಗೆ ಈವರೆಗೆ ಯಾವುದೇ ಸುಳಿವು ಸಿಗದಿರುವುದು ಕೂಡ ಪ್ರಕರಣ ಬೇರೆ ಬೇರೆ ರೂಪವನ್ನು ಪಡೆಯಬಹುದು ಎಂಬ ಆತಂಕ ಕೂಡ ವ್ಯಕ್ತವಾಗಿದೆ.



Related posts

ಕುಲಶೇಖರ: ಶ್ರೀ ವೀರನಾರಾಯಣ ದೇವಸ್ಥಾನದ ಕುಂಭ ಮಹೋತ್ಸವ ಸಂಪನ್ನ

Mumbai News Desk

ಜಾಗತಿಕ ಮತ್ತು ರಾಷ್ಟ್ರೀಯ ವಿದ್ಯಮಾನಗಳೊಂದಿಗೆ ಕರ್ನಾಟಕ ಹಾಗೂ ಮಹಾರಾಷ್ಟ್ರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (27/05)ಪ್ರಮುಖ ಅಪ್‌ಡೇಟ್‌ಗಳು

Mumbai News Desk

ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ: ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದಿ ಡಿ. ದೇವರಾಜ್ ಅರಸು ರವರ ಜನ್ಮದಿನಾಚರಣೆ ಮತ್ತು ಪರಿಶಿಷ್ಟ ಪಂಗಡದ ಇಬ್ಬರು ಪಿ.ಹೆಚ್.ಡಿ ಪದವಿ ಪಡೆದವರಿಗೆ ಸನ್ಮಾನ ಕಾರ್ಯಕ್ರಮ

Mumbai News Desk

ವೃತ್ತಿಯಲ್ಲಿ ಇಂಜಿನಿಯರಿಂಗ್ ಪ್ರೊಫೆಸರ್, ಪ್ರವೃತ್ತಿಯಲ್ಲಿ ದೈವ ನರ್ತಕ: ಡಾ. ರವೀಶ್ ಪಡುಮಲೆ ಅವರಿಗೆ ಮಂಗಳೂರು ವಿವಿ ಗೌರವ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (24/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಅಮೇರಿಕಾದ ಬಾನಾ 47ನೇ ವಾರ್ಷಿಕೋತ್ಸವದ 25ನೇ ಸಮ್ಮೇಳನ “ದಿಬ್ಬಣ” – ಮಹಾ ಅಧಿವೇಶನ: ರಾಜರ್ಷಿ ಕೆ. ವಾಸುದೇವ ಶೆಟ್ಟಿ ಭಾಗಿ

Mumbai News Desk