27.7 C
Mumbai
July 23, 2026
Mumbai News Kannada
ತುಳುನಾಡು

ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ,ದೈವ ಪಾತ್ರಿ ಮುರಳಿ ಪೂಜಾರಿಗೆ ಸನ್ಮಾನ








ಮೂಲ್ಕಿ : ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ ಹಾಗೂ ಸಾಧಕರಿಗೆ ಗೌರವ ಕಾರ್ಯಕ್ರಮವು ಮುಲ್ಕಿ ಪುನರೂರು ಟೂರಿಸ್ಟ್ ಹೋಂ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಾಧಕರ ನೆಲೆಯಲ್ಲಿ ದೈವ ಪಾತ್ರಿ ಮುರಳಿ ಪೂಜಾರಿ ಪಡುಹಿತ್ಲು ಇವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾ. ಸಾ. ಪ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಮಾತನಾಡುತ್ತಾ ” ತುಳುನಾಡಿನ ಸಂಸ್ಕಾರ ಸಂಸ್ಕೃತಿಯನ್ನು ಈಗಿನ ಜನಾಂಗಕ್ಕೆ ತಿಳಿಸುವುದರಲ್ಲಿ ದೈವ ಪಾತ್ರಿಗಳು ಪ್ರಮುಖರಾಗಿದ್ದಾರೆ.ಅವರು ನಡೆ,ನುಡಿ, ಆಚಾರದ ಬಗ್ಗೆ ಜನರಿಗೆ ಹೆಚ್ಚಿನ ಮಾಹಿತಿಯನ್ನು ನೀಡುತ್ತಾ ಬರುತ್ತಿದ್ದಾರೆ” ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಮುಲ್ಕಿ ಬಂಟರ ಸಂಘದ ಅಧ್ಯಕ್ಷರಾದ ಅಶೋಕ್ ಕುಮಾರ್ ಶೆಟ್ಟಿ ಅವರು ಹೊಸ ಅಂಗಣ ಪತ್ರಿಕೆ ಮುಲ್ಕಿಯ ಸುತ್ತಮುತ್ತಲಿನ ಸುದ್ದಿಗಳನ್ನು ಪತ್ರಿಕೆಗಳಲ್ಲಿ ಪ್ರಕಟಿಸಿ ಬೇರೆ ಬೇರೆ ಊರುಗಳಿಗೆ ತಲುಪಿಸುವ ಕೆಲಸ ಮಾಡುತ್ತಿರುವುದು, ಪತ್ರಿಕೆಯ ಮುಖ್ಯ ಧ್ಯೇಯವಾಗಿದೆ ಎಂದು ಹೇಳಿದರು.
ಅತಿಥಿ ಹಬೀಬುಲ್ಲ ಅವರು ಹೊಸ ಅಂಗಣ ಪತ್ರಿಕೆಯು ಎಂಟು ವರ್ಷಗಳಿಂದ ನಿರಂತರವಾಗಿ ಪ್ರಕಟವಾಗಿ, ಒಳ್ಳೆಯ ಲೇಖನಗಳು ಬರುತ್ತಿರುವುದು
ಸಂತಸ ಎಂದರು.
ಪಡುಹಿತ್ಲು ಜಾರಂದಾಯ ದೈವದ ಪಾತ್ರಿ ಜಯಶೀಲ ಪೂಜಾರಿ, ಕಲ್ಲಟ ಜಾರಂದಾಯ ದೇವಸ್ಥಾನದ ಅರ್ಚಕ ರಮೇಶ್ ಪೂಜಾರಿ, ಉದ್ಯಮಿ ಜೋನ್ ಕಾಡ್ರಸ್, ನಿವೃತ್ತ ಪೊಲೀಸ್ ಅಧಿಕಾರಿ ಕೆ ಎನ್ ಕೋಟ್ಯಾನ್, ಬಂಕಿ ನಾಯಕ್, ಚಿತ್ರಾಪು ಉದ್ಯಮಿ ವಾಸು ಪೂಜಾರಿ, ನಿವೃತ್ತ ಪ್ರಾಂಶುಪಾಲ ವೈ ಎನ್ ಸಾಲಿಯನ್ ಉಪಸ್ಥಿತರಿದರು.
ರವಿಚಂದ್ರ ಕಾರ್ಯಕ್ರಮ ನಿರೂಪಿಸಿದರೆ ಜೆ.ಸಿ ದಿನೇಶ್ ವಂದಿಸಿದರು.



Related posts

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಿನ್ನಿಗೋಳಿ ಇದರ 50ನೇ ವರ್ಷದ ಸಂಭ್ರಮಾಚರಣೆ

Mumbai News Desk

ವಿಷಮುಕ್ತ ಆಹಾರಕ್ಕಾಗಿ ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳೋಣ – ಕೊಂಡೆವೂರು ಶ್ರೀಗಳು.

Mumbai News Desk

Grand Thayankett Mahotsav, celebrated at Uppala Thurthi, Mahamalaraya Temple

Mumbai News Desk

ಹೆಜಮಾಡಿ ಗರಡಿಯ ಕಾರ್ಣಿಕ: ನೇಮೋತ್ಸವದಲ್ಲಿ ಕಳವಾಗಿದ್ದ ಸರ 24 ಗಂಟೆಯಲ್ಲೇ ಪತ್ತೆ; ವಾರಸುದಾರರಿಗೆ ಹಸ್ತಾಂತರ

Mumbai News Desk

ಉಡುಪಿ ಉಚ್ಚಿಲ ದಸರಾ-2025: ಮೊಗವೀರರ ಶಕ್ತಿ ಕೇಂದ್ರದಲ್ಲಿ ವೈಭವದ ‘ದಸರಾ ಸಮಾಪನ’

Mumbai News Desk

“ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ತಳಮಟ್ಟದಲ್ಲಿ ಕಾಂಗ್ರೆಸ್ ಬಲವರ್ಧನೆಗೆ ಹೆಜಮಾಡಿಯಲ್ಲಿ ಮಹತ್ವದ ಸಭೆ – ಡಿಜಿಟಲ್ ಮೀಡಿಯಾ ಆರಂಭ ಮತ್ತು ನೂತನ ಸದಸ್ಯರ ಸೇರ್ಪಡೆ”

Mumbai News Desk