32 C
Mumbai
April 24, 2026
Mumbai News Kannada
ತುಳುನಾಡು

ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ,ದೈವ ಪಾತ್ರಿ ಮುರಳಿ ಪೂಜಾರಿಗೆ ಸನ್ಮಾನ






ಮೂಲ್ಕಿ : ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ ಹಾಗೂ ಸಾಧಕರಿಗೆ ಗೌರವ ಕಾರ್ಯಕ್ರಮವು ಮುಲ್ಕಿ ಪುನರೂರು ಟೂರಿಸ್ಟ್ ಹೋಂ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಾಧಕರ ನೆಲೆಯಲ್ಲಿ ದೈವ ಪಾತ್ರಿ ಮುರಳಿ ಪೂಜಾರಿ ಪಡುಹಿತ್ಲು ಇವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾ. ಸಾ. ಪ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಮಾತನಾಡುತ್ತಾ ” ತುಳುನಾಡಿನ ಸಂಸ್ಕಾರ ಸಂಸ್ಕೃತಿಯನ್ನು ಈಗಿನ ಜನಾಂಗಕ್ಕೆ ತಿಳಿಸುವುದರಲ್ಲಿ ದೈವ ಪಾತ್ರಿಗಳು ಪ್ರಮುಖರಾಗಿದ್ದಾರೆ.ಅವರು ನಡೆ,ನುಡಿ, ಆಚಾರದ ಬಗ್ಗೆ ಜನರಿಗೆ ಹೆಚ್ಚಿನ ಮಾಹಿತಿಯನ್ನು ನೀಡುತ್ತಾ ಬರುತ್ತಿದ್ದಾರೆ” ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಮುಲ್ಕಿ ಬಂಟರ ಸಂಘದ ಅಧ್ಯಕ್ಷರಾದ ಅಶೋಕ್ ಕುಮಾರ್ ಶೆಟ್ಟಿ ಅವರು ಹೊಸ ಅಂಗಣ ಪತ್ರಿಕೆ ಮುಲ್ಕಿಯ ಸುತ್ತಮುತ್ತಲಿನ ಸುದ್ದಿಗಳನ್ನು ಪತ್ರಿಕೆಗಳಲ್ಲಿ ಪ್ರಕಟಿಸಿ ಬೇರೆ ಬೇರೆ ಊರುಗಳಿಗೆ ತಲುಪಿಸುವ ಕೆಲಸ ಮಾಡುತ್ತಿರುವುದು, ಪತ್ರಿಕೆಯ ಮುಖ್ಯ ಧ್ಯೇಯವಾಗಿದೆ ಎಂದು ಹೇಳಿದರು.
ಅತಿಥಿ ಹಬೀಬುಲ್ಲ ಅವರು ಹೊಸ ಅಂಗಣ ಪತ್ರಿಕೆಯು ಎಂಟು ವರ್ಷಗಳಿಂದ ನಿರಂತರವಾಗಿ ಪ್ರಕಟವಾಗಿ, ಒಳ್ಳೆಯ ಲೇಖನಗಳು ಬರುತ್ತಿರುವುದು
ಸಂತಸ ಎಂದರು.
ಪಡುಹಿತ್ಲು ಜಾರಂದಾಯ ದೈವದ ಪಾತ್ರಿ ಜಯಶೀಲ ಪೂಜಾರಿ, ಕಲ್ಲಟ ಜಾರಂದಾಯ ದೇವಸ್ಥಾನದ ಅರ್ಚಕ ರಮೇಶ್ ಪೂಜಾರಿ, ಉದ್ಯಮಿ ಜೋನ್ ಕಾಡ್ರಸ್, ನಿವೃತ್ತ ಪೊಲೀಸ್ ಅಧಿಕಾರಿ ಕೆ ಎನ್ ಕೋಟ್ಯಾನ್, ಬಂಕಿ ನಾಯಕ್, ಚಿತ್ರಾಪು ಉದ್ಯಮಿ ವಾಸು ಪೂಜಾರಿ, ನಿವೃತ್ತ ಪ್ರಾಂಶುಪಾಲ ವೈ ಎನ್ ಸಾಲಿಯನ್ ಉಪಸ್ಥಿತರಿದರು.
ರವಿಚಂದ್ರ ಕಾರ್ಯಕ್ರಮ ನಿರೂಪಿಸಿದರೆ ಜೆ.ಸಿ ದಿನೇಶ್ ವಂದಿಸಿದರು.



Related posts

ಮೂಲ್ಕಿ ಅರಮನೆ ವೆಲ್ಫೇರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇಗುಲಕ್ಕೆ ಮುಷ್ಟಿ ಕಾಣಿಕೆ ಸಮರ್ಪಣೆ

Mumbai News Desk

ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಮಹಾ ಸಂಕಲ್ಪದ 19ನೇ ದಿನ – ಕಾಪು ಶ್ರೀ ಹಳೆ ಮಾರಿಗುಡಿಗೆ ಪ್ರದಕ್ಷಿಣೆ.

Mumbai News Desk

ಕುಲಾಲ ಪರ್ಬ ಉದ್ಘಾಟನೆ.

Mumbai News Desk

ಶ್ರೀಶ್ರೀಶ್ರೀ ವಿಶ್ವವಲ್ಲಭ ತೀರ್ಥ ರಿಂದ ಭೂತರಾಜರ ಸಾನ್ನಿಧ್ಯ ಸಂಕೋಚವನ್ನು ಮಾಡಿ ಜೀರ್ಣೋದ್ಧಾರಕ್ಕೆ ಚಾಲನೆ

Mumbai News Desk

ಮುಲ್ಕಿ : ಹೊಸ ಅಂಗಣ ಮಾಸಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮ – ಸಸಿಹಿತ್ಲು ಶ್ರೀ ಭಗವತಿ ಕ್ಷೇತ್ರದ ಅನುವಂಶಿಕ ಮೊಕ್ತೇಸರ ಅಪ್ಪು ಯಾನೆ ಶ್ರೀನಿವಾಸ ಪೂಜಾರಿ ಅವರಿಗೆ ಸನ್ಮಾನ

Mumbai News Desk