31 C
Mumbai
June 8, 2026
Mumbai News Kannada
ಸುದ್ದಿ

ನ್ಯಾಯವಾದಿ ರಾಘವ ಎಂ. ನೋಟರಿ ಪಬ್ಲಿಕ ಆಗಿ ನೇಮಕ





ಮುಂಬಯಿ : ಮಹಾನಗರದ ಹಿರಿಯ ವಕೀಲರಾದ ರಾಘವ ಎಂ. ಇವರನ್ನು ಬಾರತ ಸರಕಾರದ ಕಾನೂನು ಮತ್ತು ನ್ಯಾಯಾಂಗ ಸಚಿವಾಲಯ ನೋಟರಿ ಪಬ್ಲಿಕ್ ಆಗಿ ನೇಮಕ ಮಾಡಿದೆ.

ಮುಂಬಯಿ ಮಹಾನಗರದಲ್ಲಿ ಕಳೆದ ಹಲವಾರು ವರ್ಷಗಳಿಂದ ವಕೀಲರಾಗಿ ಸೇವೆ ಸಲ್ಲಿಸುತ್ತಾ ಜನಪ್ರಿಯರಾಗಿರುವ ಇವರು 1996 ರಲ್ಲಿ ಮಂಗಳೂರು ವಿಶ್ವವಿಧ್ಯಾನಿಲಯದಿಂದ ಕಾನೂನು ಪದವಿ ಪಡೆದು ಪ್ರಥಮ ಧರ್ಜೆಯಲ್ಲಿ ಉತ್ತಿರ್ಣರಾಗಿದ್ದಾರೆ. ಕಾಸರಗೋಡಿನ ಖ್ಯಾತ ವಕೀಲರೊಂದಿಗೆ ತರಬೇತಿ ಪಡೆದ, ಇವರು ಮುಂಬೈಯಲ್ಲಿ ದೇಶದ ಪ್ರತಿಷ್ಠಿತ ಖಾಸಗಿ ಮತ್ತು ಸರಕಾರಿ ಬ್ಯಾಂಕುಗಳಲ್ಲಿ ಉನ್ನತ ಹುದ್ದೆಯಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿ, ಬಳಿಕ ಮುಂಬೈ ವಿಮಾನದ ನಿಲ್ಧಾಣದಲ್ಲಿ ಜನರಲ್ ಮ್ಯಾನೇಜರ್ ಹುದ್ದೆಯಲ್ಲಿದ್ದು ಸ್ವಯಂ ನಿವೃತ್ತಿ ಪಡೆದಿದ್ದಾರೆ 2017 ರಿಂದ ದಹಿಸರ್ ನಲ್ಲಿ ತನ್ನದೇ ಆದ ಆರ್. ಎಂ. ಲಾ ಅಸೋಷಿಯೇಟ್ಸ್ ಸಂಸ್ಥೆಯನ್ನು ನಡೆಸುತ್ತಿದ್ದಾರೆ.

ಸಮಾಜ ಸೇವಾ ನಿರತರಾಗಿರುವ ರಾಘವ ಎಂ. ಅವರು ಕರ್ನಾಟಕ ಸಂಘ ಮಾಟುಂಗಾ, ಮೈಸೂರು ಅಸೋಷಿಯೇಶನ್, ತುಳು ಸಂಘ ಬೊರಿವಲಿ, ಸಂಸ್ಥೆಗಳ ಕಾರ್ಯಕಾರಿ ಸಮಿತಿಯಲ್ಲಿದ್ದು ಇನ್ನು ಹಲವಾರು ಸಂಘ-ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ.



Related posts

ಕೊಂಕಣ ರೈಲ್ವೆ ವಿಲೀನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ: ಕರಾವಳಿ ಅಭಿವೃದ್ಧಿಗೆ ಲೋಕಸಭೆಯಲ್ಲಿ ಬಲವಾದ ಮಂಡನೆ

Mumbai News Desk

ದುಬೈನಲ್ಲಿ ತುಳು ಕನ್ನಡಿಗರಿಂದ  ರಕ್ತದಾನ.

Mumbai News Desk

ಅಜಿತ್ ಪವಾರ್ ವಿಮಾನ ಅಪಘಾತ : ಘಟನೆ ಹೇಗೆ ನಡೆಯಿತು? ‘ಕಳಪೆ ಗೋಚರತೆ… ನಂತರ ಅಪಘಾತ’

Mumbai News Desk

ಉಡುಪಿ : ಮಂದಾರ್ತಿ ಮೇಳದ ಕಲಾವಿದ ವೇಷ ಕಳಚುವ ಮುನ್ನವೇ ಹೃದಯಾಘಾತದಿಂದ ನಿಧನ

Mumbai News Desk

ರೇಣುಕಾ ಸ್ವಾಮಿ ಪ್ರಕರಣ – ದರ್ಶನ್ ಸೇರಿ ಏಳು ಆರೋಪಿಗಳಿಗೆ ಜಾಮೀನು

Mumbai News Desk

ಕಾಪು ಮೊಗವೀರ ಮಹಾಸಭಾ, ಮುಂಬಯಿ ಇದರ 84 ನೇ ವಾರ್ಷಿಕ ಮಹಾಸಭೆ

Mumbai News Desk