30.9 C
Mumbai
June 8, 2026
Mumbai News Kannada
ಪ್ರಕಟಣೆ

ಜಯ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು : ಮಾ. 8ರಂದು ಜಾಗತಿಕ ಮಹಿಳಾ ದಿನಾಚರಣೆ





ಬಿಲ್ಲವ ಸಮಾಜದ ಮಹಾನ್ ನಾಯಕ, ಅಭಿವೃದ್ಧಿಯ ಹರಿಕಾರ ದಿ. ಜಯ ಸಿ ಸುವರ್ಣ ಅವರ ಅಭಿಮಾನಿಗಳ, ಹಿತೈಷಿಗಳ ಸಂಘಟನೆ ಜಯ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು ವತಿಯಿಂದ ಮಾರ್ಚ್ 8ರ ಶನಿವಾರ, ಮಧ್ಯಾಹ್ನ 2.30ಗಂಟೆಗೆ ‘ಜಾಗತಿಕ ಮಹಿಳಾ ದಿನಾಚರಣೆ’ ಕಾರ್ಯಕ್ರಮ ಆಯೋಜಿಸಲಾಗಿದೆ. ಗೊರೇಗಾಂವ್ ಪೂರ್ವ ದಿ ಜಯ ಸಿ ಸುವರ್ಣ ಮಾರ್ಗ, ಜಯಲೀಲಾ ಬ್ಯಾಂಕ್ವೆಟ್ಸ್ ಹಾಲ್ ನಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಶಿತಾ ಸೂರ್ಯಕಾಂತ ಸುವರ್ಣ ವಹಿಸಲಿದ್ದಾರೆ.
ಈ ಶುಭಾವಸರದಲ್ಲಿ ನಿವೃತ್ತ ಪಬ್ಲಿಕ್ ಪ್ರಾಸಿಕ್ಯೂಟರ್ ಮತ್ತು ಭಾರತ್ ಬ್ಯಾಂಕ್ ನ ಮಾಜಿ ಉಪಕಾರ್ಯಧ್ಯಕ್ಷೆ ನ್ಯಾಯವಾದಿ ರೋಹಿಣಿ ಜೆ ಸಾಲ್ಯಾನ್ ಅವರಿಗೆ ‘ಜಯ ಸುವರ್ಣ’ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಮುಖ್ಯ ಅತಿಥಿಯಾಗಿ ಥಾಣೆಯ ಮಾಜಿ ಮೇಯರ್ ಮೀನಾಕ್ಷಿ ಶಿಂದೆ ಆಗಮಿಸಲಿರುವರು.
ಗೌರವ ಅತಿಥಿಗಳಾಗಿ ಜಯಲಕ್ಷ್ಮಿ ಪಿ ಸಾಲ್ಯಾನ್, ಜಯಶ್ರೀ ಎಮ್ ಹೆಜಮಾಡಿ, ಆಶಾ ಆರ್ ಬಂಗೇರ, ಶೋಭಾ ಎಸ್ ಪೂಜಾರಿ, ಕೃಪಾ ಬಿ ರಾಠೋಡ್, ಸ್ನೇಹಾ ಪಿ ಪೂಜಾರಿ, ಪ್ರಭಾ ಎನ್ ಸುವರ್ಣ, ಸುಜಾತ ಎಸ್ ಕೋಟ್ಯಾನ್ ಉಪಸ್ಥಿತರಿರುವರು.
ಈ ಸಂಧರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು, ಹಿರಿಯ ನಾಗರಿಕ ದಂಪತಿಗಳನ್ನು, ಹಾಗೂ ಸಮಾಜ ಸೇವೆಯಲ್ಲಿ ಕೊಡುಗೆ ನೀಡಿದ ಮಹಿಳೆಯರನ್ನು ಗೌರವಿಸಲಾಗುವುದು.
ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮದೊಂದಿಗೆ, ಇತರ ಆಕರ್ಷಕ ವಿನೋದವಳಿ ಸ್ಪರ್ಧೆ ನಡೆಯಲಿದೆ.
ಜಯ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು, ಕಾರ್ಯಕ್ರಮಕ್ಕೆ ಎಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.



Related posts

ಮಾ.29 : ಶ್ರೀ ಬ್ರಹ್ಮಲಿಂಗೇಶ್ವರ ಅಬ್ಬಗದಾರಗ ಆಲಡೆ ಹೆಜಮಾಡಿ ಜೀರ್ಣೋದ್ಧಾರ ಸಮಿತಿಯಿಂದ ಮುಂಬಯಿಯಲ್ಲಿ “ಸಿರಿ-ನುಡಿ” ವಿಶೇಷ ಉಪನ್ಯಾಸ ಕಾರ್ಯಕ್ರಮ ಹಾಗೂ ಜೀರ್ಣೋದ್ಧಾರ ಕಾರ್ಯದ ಪ್ರಗತಿ ಪರಿಶೀಲನೆ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜುಲೈ 21ಕ್ಕೆ ಗುರುಪೂರ್ಣಿಮ ಮಹೋತ್ಸವ.

Mumbai News Desk

ದೇವಾಡಿಗ ಸಂಘ ಮುಂಬಯಿ: ಪೆ. 2 ರಂದು ಶ್ರೀರಾಮದೇವರ ಪೂಜೆಸ್ಥಾನದ ಪುನರ್ ಪ್ರತಿಷ್ಠೆ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಡಿ.24ರಂದು 9ನೇ ಮೂಲತ್ವ ವಿಶ್ವ ಪ್ರಶಸ್ತಿ-2023.

Mumbai News Desk

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ : ಆಗಸ್ಟ್ 2ಕ್ಕೆ ಆಟಿದ ಬೂತಾರಾದನೆ, ಸಾಕ್ಷ ಚಿತ್ರ ಬಿಡುಗಡೆ ಮತ್ತು ವಿಚಾರಗೋಷ್ಠಿ

Mumbai News Desk

ಯಕ್ಷ ವೈಭವ 2025ರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

Mumbai News Desk