32 C
Mumbai
March 7, 2026
Mumbai News Kannada
ಮುಂಬಯಿ

ಬಂಟ್ಸ್ ನ್ಯಾಯ ಮಂಡಳಿ ಮುಂಬಯಿ : ನೂತನ ಅಧ್ಯಕ್ಷರಾಗಿ  ಅಂತರಾಷ್ಟ್ರೀಯ ಕಬ್ಬಡಿ ತೀರ್ಪುಗಾರ ಜಯ ಎ ಶೆಟ್ಟಿ ಶಿಮಂತೂರು  ಆಯ್ಕೆ,





ಮುಂಬೈ ಹಾಗೂ ಉಪನಗರಗಳ ಬಂಟ ಸಮಾಜದ ಬಂಧುಗಳಿಗೆ ನ್ಯಾಯ ಒದಗಿಸಬೇಕೆನ್ನುವ ಉದ್ದೇಶದಿಂದ 25 ವರ್ಷಗಳ ಹಿಂದೆ ಸ್ಥಾಪನೆಗೊಂಡಿರುವ ಬಂಟ್ಸ್ ನ್ಯಾಯ ಮಂಡಳಿಗೆ ನೂತನ ಅಧ್ಯಕ್ಷರಾಗಿ  ಕಬಡ್ಡಿ ಕ್ರೀಡಾಪಟು, ಅಂತರಾಷ್ಟ್ರೀಯ ಕಬ್ಬಡಿ ತೀರ್ಪುಗಾರರಾಗಿರುವ ,ಛತ್ರಪತಿ ಶಿವಾಜಿ ಪ್ರಶಸ್ತಿ ಪುರಸ್ಕೃತ, ಸೌತ್ ಕೆನರಾ ಸ್ಪೋರ್ಟ್ಸ್ ಕ್ಲಬ್ ಹಾಗೂ ಕರ್ನಾಟಕ ಸ್ಪೋರ್ಟಿಂಗ್ ಅಸೋಸಿಯೇಷನ್‌ ನ ಕಾರ್ಯದರ್ಶಿ ಜಯ ಎ. ಶೆಟ್ಟಿ ಶಿಮಂತೂರು ಆಯ್ಕೆಯಾಗಿದ್ದಾರೆ,.

 ಫೆ.22 ರಂದು ಕುರ್ಲಾ ಪೂರ್ವದ ಬಂಟರ ಸಂಘದ ಎನೆಕ್ಸ್ ಸಭಾಗೃಹದಲ್ಲಿ ನಡೆದ ಬಂಟ್ಸ್ ನ್ಯಾಯ ಮಂಡಳಿ   ವಾರ್ಷಿಕ ಮಹಾಸಭೆಯಲ್ಲಿ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಜಯ ಎ ಶೆಟ್ಟಿ ಅವರಿಗೆb ನ್ಯಾಯಮಂಡಳಿಯ  ಅಧ್ಯಕ್ಷ ನ್ಯಾಯವಾದಿ ಪ್ರಕಾಶ್ ಎಲ್ ಶೆಟ್ಟಿ ಕಡಂದಲೆಯವರು ಹೂಗುಚ್ಚ ನೀಡಿ ಅಭಿನಂದಿಸಿದರು,

  ಜಯ ಎ ಶೆಟ್ಟಿ ಯವರು ಬ್ಯಾಂಕ್ ಆಫ್ ಮಹಾರಾಷ್ಟ್ರದ  ನಿವೃತ್ತ ಅಧಿಕಾರಿ ಆಗಿದ್ದು, ಬಂಟರ ಸಂಘ ಮುಂಬೈಯ ಮಾಜಿ ಕಾರ್ಯದರ್ಶಿಯಾಗಿ, ಉನ್ನತ ಶಿಕ್ಷಣ ಸಮಿತಿಯ ಮಾಜಿ ಕಾರ್ಯದರ್ಶಿಯಾಗಿ , ಮಾತೃಭೂಮಿ ಕೋ ಆಪರೇಟಿವ್  ಸೊಸೈಟಿಯ ಮಾಜಿ ಕಾರ್ಯದರ್ಶಿ,
ಹಲವು ಕನ್ನಡ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿರುವರು.ಇವರು ಮಾರ್ಗದರ್ಶನದಲ್ಲಿ
ನಗರದ ವಿವಿಧ ಸಂಘ, ಸಂಸ್ಥೆಗಳ ಕ್ರೀಡಾಕೂಟವು ಯಶಸ್ವಿಯಾಗಿ ನಡೆಯುವಲ್ಲಿ ಸಹಕಾರಿಯಾಗಿದೆ,          ಪ್ರತಿ ವರ್ಷ ಬಂಟರ ಸಂಘ ನಡೆಸುವ ಕ್ರೀಡಾಕೂಟದ ಯಶಸ್ವಿಗೆ ಇವರ ಪೂರ್ಣ ಸಹಕಾರ ಮುಖ್ಯ ಕಾರಣವಾಗಿದೆ, ಕಾರ್ಕಳದ ಗ್ರಾಮೀಣ ಪ್ರದೇಶದಲ್ಲಿ ಎರಡು ಬಾರಿ ನಡೆದ ಅಂತರಾಷ್ಟ್ರೀಯ ಮಟ್ಟದ ಕಬ್ಬಡಿ  ಪಂದ್ಯಾಟಕ್ಕೆ ಮುಖ್ಯ ಮಾರ್ಗದರ್ಶಕರಾಗಿದ್ದಾರು,ಅಲ್ಲದೆ
ದೇಶದ ಪ್ರಮುಖ ರಾಜ್ಯಗಳಲ್ಲಿ ಕಬ್ಬಡಿ ಆಟವಾಡಿದ ಅನುಭವ ಅಲ್ಲದೆ ತೀರ್ಪುಗಾರರಾಗಿ ಕೂಡ ಕಾರ್ಯನಿರ್ವಹಿಸಿದವರು,

 ಕ್ರೀಡಾ ಮೈದಾನದಲ್ಲಿ ಆಟಗಾರರಿಗೆ ನ್ಯಾಯ  ನೀಡುವಲ್ಲಿ ಸಮರ್ಥರೆನಿಸಿಕೊಂಡವರು, ಇವರ ಕ್ರೀಡಾ ಅಭಿಮಾನವನ್ನು ಗುರುತಿಸಿ ಮಹಾರಾಷ್ಟ್ರ, ಕರ್ನಾಟಕ ರಾಜ್ಯಗಳು  ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಿದೆ,

ಜಯ ಶೆಟ್ಟಿ ಅವರ ಪರಿವಾರ ಕಬ್ಬಡಿ ಆಟಗಾರರ ಪರಿವಾರವಾಗಿದ್ದು, ಪತ್ನಿ ರಾಷ್ಟ್ರೀಯ ಕಬಡ್ಡಿ ಆಟಗಾರರಾಗಿದ್ದು ,
ಮಗ ಕೂಡ ರಾಷ್ಟ್ರೀಯ ಕಬಡ್ಡಿ ಆಟಗಾರರಾಗಿದ್ದು ಇವರಿಬ್ಬರಿಗೂ ಛತ್ರಪತಿ ಶಿವಾಜಿ ಪ್ರಶಸ್ತಿಯನ್ನು ಮಹಾರಾಷ್ಟ್ರ ಸರಕಾರ ನೀಡಿ ಗೌರವಿಸಿದೆ.



Related posts

ಕರ್ನಾಟಕ ಸಂಘ ಡೊಂಬಿವಲಿ: ‘ಪುರಂದರದಾಸರ ಆರಾಧನೋತ್ಸವ ಮತ್ತು ಭಜನಾ ಸ್ಪರ್ಧೆ’

Mumbai News Desk

ರೇ ರೋಡ್ ಸ್ವಾಮಿ ಅಯ್ಯಪ್ಪ ಭಕ್ತ ವೃಂದ ಮಂದಿರದ ವರ್ಧಂತ್ಯೋತ್ಸವ.

Mumbai News Desk

ಮಲಾಡ್ ಲಕ್ಷ್ಮಣ ನಗರದ ಮಹತೋಭಾರ ಶ್ರೀ ಶನೀಶ್ವರ ದೇವಸ್ಥಾನ ಸುವರ್ಣ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ,

Mumbai News Desk

ಮುಂಬಯಿ : ಏನ್ ಸಿ ಪಿ ಮುಖಂಡ ಬಾಬಾ ಸಿದ್ಧಿಕ್ ಅವರನ್ನು ಗುಂಡಿಕ್ಕಿ ಹತ್ಯೆ

Mumbai News Desk

ಸಾಂತಾಕ್ರೂಸ್ ಶ್ರೀ ಮಂತ್ರದೇವಿ ದೇವಸ್ಥಾನದ ವಾರ್ಷಿಕ ಮಹಾಪೂಜೆ ಸಂಪನ್ನ,

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಶ್ರದ್ಧಾ ಗಣೇಶ್ ನಾಯ್ಕ ಗೆ ಶೇ 95.60 ಅಂಕ.

Mumbai News Desk