32 C
Mumbai
March 7, 2026
Mumbai News Kannada
ಪ್ರಕಟಣೆ

ಗೋರೆಗಾಂವ್ ಕರ್ನಾಟಕ ಸಂಘ : ಮಾ. 9ರಂದು 66ನೇ ನಾಡಹಬ್ಬ ಹಾಗೂ ವಿಚಾರಗೋಷ್ಠಿ





ಮುಂಬೈ ಕನ್ನಡಿಗರ ಪ್ರತಿಷ್ಠಿತ ಸಂಘಟನೆಗಳಲ್ಲಿ ಒಂದಾದ ಗೋರೆಗಾಂವ್ ಕರ್ನಾಟಕ ಸಂಘದ ವತಿಯಿಂದ 66ನೇ ನಾಡಹಬ್ಬ ಸಮಾರಂಭ ಹಾಗೂ ವಿಚಾರಗೋಷ್ಠಿ, ಮಾರ್ಚ್ 9ರಂದು, ರವಿವಾರ ಬೆಳಿಗ್ಗೆ 9:00 ರಿಂದ ಸಾಯಂಕಾಲ 7ರ ತನಕ ಮಲಾಡ್ ಪಶ್ಚಿಮ, ಎಸ್ ವಿ ರೋಡ್, ರಾಮಾಂಜನೇಯ ಹೋಟೆಲ್ ನ ಹತ್ತಿರದ ಬಜಾಜ್ ಸಭಾಗ್ರಹದಲ್ಲಿ ಜರಗಲಿದೆ.
ಕಾರ್ಯಕ್ರಮದ ವಿವರ :
ಬೆಳಿಗ್ಗೆ 9.30ರಿಂದ ಸಂಘದ ಉಪ ವಿಭಾಗ ಮತ್ತು ಮುಂಬೈಯ ವಿವಿಧ ಸಂಘ ಸಂಸ್ಥೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ.

       ಬೆಳಿಗ್ಗೆ 10.50.ಕ್ಕೆ ವಿಚಾರಗೋಷ್ಠಿ  

ಉದ್ಘಾಟಕರು ವಿಶ್ವನಾಥ ಕೆ ಶೆಟ್ಟಿ (ಉದ್ಯಮಿ, ಸಮಾಜ ಸೇವಕ )
ಸ್ವಾತಂತ್ರ್ಯ ಹೋರಾಟದ ಭಾರತೀಯ ಸ್ತ್ರಿ ಶಕ್ತಿ ವಿಷಯದ ಕುರಿತು ವಿಚಾರಗೋಷ್ಠಿ
ಅಧ್ಯಕ್ಷತೆ – ಡಾ! ಕಬ್ಬಿನಾಲೆ ವಸಂತ್ ಭಾರದ್ವಾಜ (ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ )
ಉಪನ್ಯಾಸ : ಕಾಳುಮೆಣಸಿನ ರಾಣಿ ಚೆನ್ನಬೈರಾದೇವಿ
ಉಪನ್ಯಾಸಕರು – ಟಿ ಎನ್ ಖಂಡಿಗೆ ವಿಷಯ – ಅಪ್ರತಿಮ ಸಾಹಸದ ಕಿತ್ತೂರ ರಾಣಿ ಚೆನ್ನಮ್ಮ
ಉಪನ್ಯಾಸಕರು – ಶ್ರೀಕಾಂತ್ ಶೆಟ್ಟಿ ಕಾರ್ಕಳ, ವಿಷಯ – ತುಳು ನೆಲದ ಸಿಡಿಗುಂಡು ಉಳ್ಳಾಲದ ರಾಣಿ ಅಬ್ಬಕ್ಕ.
ಈ ಸಂಧರ್ಭ ಸಂಘದ ಮುಖವಾಣಿ ‘ಮುಂಬೆಳಕು’ ಬಿಡುಗಡೆ ಮಾಡಲಾಗುವುದು.

  ಸಂಜೆ 4 ಗಂಟೆಗೆ 66ನೇ ನಾಡಹಬ್ಬ ಸಮಾರಂಭ 

ಅಧ್ಯಕ್ಷತೆ – ಶ್ರೀಕಾಂತ್ ಶೆಟ್ಟಿ ಕಾರ್ಕಳ (ಪ್ರಖರ ರಾಷ್ಟ್ರವಾದಿ, ಚಿಂತಕ )
ಮುಖ್ಯ ಅತಿಥಿ – ಡಾ! ಆರ್ ಕೆ ಶೆಟ್ಟಿ (ಗೌರವ ಪ್ರ. ಕಾರ್ಯದರ್ಶಿ ಬಂಟರ ಸಂಘ ಮುಂಬಯಿ )
ಗೌರವ ಅತಿಥಿಗಳಾಗಿ ಬಂಟರ ಸಂಘ ಮುಂಬೈಯ ವಸಯಿ-ಡಹಾಣು ಪ್ರಾದೇಶಿಕ ಸಮಿತಿಯ ಕಾರ್ಯಧ್ಯಕ್ಷ ಮಂಜುನಾಥ ಎನ್ ಶೆಟ್ಟಿ ಕೊಡ್ಲಾಡಿ, ಹೋಟೆಲ್ ಉದ್ಯಮಿ ಸಮಾಜ ಸೇವಕ ಸಂತೋಷ್ ಪಿ ಶೆಟ್ಟಿ, ಕೋರಿಯೋಗ್ರಾಪರ್ ತುಷಾರ್ ಶೆಟ್ಟಿ ಉಪಸ್ಥಿತರಿರುವರು.
ಮದ್ಯಾಹ್ನ 2.30ರಿಂದ 3.45 ಮತ್ತು ಸಾಯಂಕಾಲ 6ರಿಂದ 7ರ ತನಕ ಸಂಘದ ಉಪ ವಿಭಾಗಗಳು ಮತ್ತು ಮುಂಬೈಯ ವಿವಿಧ ಸಂಘಟನೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ದಿನವಿಡೀ ನಡೆಯುವ 66ನೇ ನಾಡಹಬ್ಬ ಸಮಾರಂಭದ ಎಲ್ಲಾ ಕಾರ್ಯಕ್ರಮದಲ್ಲಿ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಸಮಾರಂಭವನ್ನು ಯಶಸ್ಸುಗೊಳಿಸುವಂತೆ ಸಂಘದ ಅಧ್ಯಕ್ಷರಾದ ವಿಶಾಲಾಕ್ಷಿ ಉಳುವಾರ, ಗೌರವ ಪ್ರಧಾನ ಕಾರ್ಯದರ್ಶಿ ಸರಿತಾ ಸುರೇಶ್ ನಾಯಕ್, ಗೌರವ ಕೋಶಾಧಿಕಾರಿ ಎಂ ಆನಂದ ಶೆಟ್ಟಿ, ಪಾರುಪತ್ಯಗಾರರಾದ ಮುಂಡ್ಕೂರು ಸುರೇಂದ್ರ ಸಾಲ್ಯಾನ್, ಜಿ ಟಿ ಆಚಾರ್ಯ, ದೇವಲ್ಕುಂದ ಭಾಸ್ಕರ ಶೆಟ್ಟಿ ಪ್ರಕಟಣೆ ಮೂಲಕ ಕೇಳಿಕೊಂಡಿದ್ದಾರೆ.



Related posts

ಪಲಾವಾ ಕನ್ನಡಿಗರ ಫೌಂಡೇಶನ್ ಪಲಾವಾ, ಡೊಂಬಿವಲಿ : ನ. 30ಕ್ಕೆ 5ನೇ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆ

Mumbai News Desk

ಡೊಂಬಿವಲಿ: ಫೆ. 28ರಂದು ಶ್ರೀ ಪುರಂದರ ದಾಸರ ಆರಾಧನಾ ಮಹೋತ್ಸವ ಮತ್ತು ಭಜನಾ ಸ್ಪರ್ಧೆ

Mumbai News Desk

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣ ಗುಡ್ಡೆ ಜನವರಿ 22 ರಾಮನಾಮ ತಾರಕಮ್

Mumbai News Desk

ಜೂನ್ 25 ರಂದು ಕಾಪು ಮಾರಿಯಮ್ಮನ ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಿಸಲು ಸ್ವರ್ಣ ಸಂಕಲ್ಪ

Mumbai News Desk

ಜಗಜ್ಯೋತಿ ಕಲಾವೃಂದದ ಶ್ರೀಮತಿ ಸುಶೀಲಾ ಸೀತಾರಾಮ ಶೆಟ್ಟಿ ಸ್ಮಾರಕ ಕಥಾ ಮತ್ತು ಕವಿತಾ ಸ್ಪರ್ಧೆ – 2025

Mumbai News Desk

ಬಂಟರ ಸಂಘ ಮುಂಬಯಿಯ ಶಿಕ್ಷಣ ಮತ್ತು ಸಮಾಜ ಕಲ್ಯಾಣ ವತಿಯಿಂದ ಆರ್ಥಿಕ ಸಹಾಯ, ಮೀರಾ ಭಯಂದರ್ ಪ್ರಾದೇಶಿಕ ಸಮಿತಿಯಿಂದ ಮಾ. 23 ಕ್ಕೆ ಅರ್ಜಿ ವಿತರಣೆ

Mumbai News Desk